ಬಿಲ್ಕಿಸ್‌ ಬಾನೊ ಅರ್ಜಿ ಎತ್ತಿ ಹಿಡಿದು ಮಹತ್ವದ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್

Date:

ಗುಜರಾತ್‌ ಹತ್ಯಾಕಾಂಡದ ಸಂದರ್ಭದಲ್ಲಿ ಬಿಲ್ಕಿಸ್‌ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಆಕೆಯ ಕುಟುಂಬ ಸದಸ್ಯರನ್ನು ಕೊಲೆಗೈದ ಪ್ರಕರಣದಲ್ಲಿ ದೋಷಿಗಳಾಗಿದ್ದ 11 ಮಂದಿಗೆ ಶಿಕ್ಷೆ ತಗ್ಗಿಸಿದ್ದ ಗುಜರಾತ್‌ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಪಡಿಸಿದೆ. ಆ ಮೂಲಕ ಬಿಲ್ಕಿಸ್‌ ಬಾನೊ ಅರ್ಜಿಯನ್ನು ಎತ್ತಿ ಹಿಡಿಯುವ ಮೂಲಕ, ಮಹತ್ವದ ತೀರ್ಪು ಪ್ರಕಟಿಸಿದೆ.

ಗುಜರಾತ್ ಸರ್ಕಾರದ ನಿರ್ಧಾರವನ್ನು ಬಾನೊ ಸೇರಿದಂತೆ ಹಲವು ಅರ್ಜಿದಾರರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದ ತೀರ್ಪನ್ನು ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಹಾಗೂ ಕರ್ನಾಟಕದ ಬಿ ವಿ ನಾಗರತ್ನ ಅವರಿದ್ದ ಪೀಠ ಅಕ್ಟೋಬರ್ 12ರಂದು ಕಾಯ್ದಿರಿಸಿತ್ತು.

2002ರ ಗುಜರಾತ್ ಗಲಭೆಯಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿ ತನ್ನ ಮಗು ಮತ್ತು ಕುಟುಂಬದವರನ್ನು ಕೊಂದ 11 ಅಪರಾಧಿಗಳನ್ನು ಬಿಡುಗಡೆ ಆದೇಶವನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೊ ಸಲ್ಲಿಸಿರುವ ಅರ್ಜಿಯು ಮಾನ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅರ್ಜಿ ವಿಚಾರಣೆ ಮುಂದುವರಿಯಲಿದೆ ಎಂದು ಕೂಡ ಸುಪ್ರೀಂ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗುಜರಾತ್ ಸರ್ಕಾರವು 11 ಅಪರಾಧಿಗಳ ಬಿಡುಗಡೆ ಮಾಡಲು ಸಮರ್ಥವಾಗಿಲ್ಲ” ಎಂದು ಬೊಟ್ಟು ಮಾಡಿರುವ ಸುಪ್ರೀಂ ಕೋರ್ಟ್, “ಈ ನಿರ್ಧಾರವು ಮಹಾರಾಷ್ಟ್ರ ಸರ್ಕಾರಕ್ಕೆ ಬಿಟ್ಟದ್ದು ಎಂದು ಹೇಳಿದೆ. ಈ ಬಿಡುಗಡೆ ಆದೇಶದಲ್ಲಿ ಸಾಮರ್ಥ್ಯದ ಕೊರತೆ ಇದೆ. ಅಲ್ಲದೇ, ನ್ಯಾಯಾಲಯವನ್ನು ವಂಚಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆ ಕಾರಣದಿಂದ ಈ ಬಿಡುಗಡೆ ಆದೇಶವನ್ನು ರದ್ದುಗೊಳಿಸುತ್ತಿದ್ದೇವೆ” ಎಂದು ಹೇಳಿದೆ. ಅಲ್ಲದೇ, ಎರಡು ವಾರದೊಳಗೆ ಎಲ್ಲ 11 ಮಂದಿ ಅಪರಾಧಿಗಳು ಪೊಲೀಸರಿಗೆ ಶರಣಾಗುವಂತೆ ಆದೇಶ ನೀಡಿದೆ.

2022ರ ಸ್ವಾತಂತ್ರ್ಯ ದಿನದ ಹಿನ್ನೆಲೆಯಲ್ಲಿ ಸನ್ನಡತೆಯ ಆಧಾರದಲ್ಲಿ ಗುಜರಾತ್ ಸರ್ಕಾರವು ಅಪರಾಧಿಗಳನ್ನು ಬಿಡುಗಡೆ ಮಾಡಿತ್ತು. ಈ ಆದೇಶವು ಭಾರೀ ಆಕ್ರೋಶಕ್ಕೆ ಗುರಿಯಾಗಿತ್ತು. ಈ ಆದೇಶವನ್ನು ಪ್ರಶ್ನಿಸಿ ಬಿಲ್ಕಿಸ್ ಬಾನು ಅವರು ಸುಪ್ರೀಂ ಮೆಟ್ಟಿಲೇರಿದ್ದರು.

ಏನಿದು ಪ್ರಕರಣ?

ಇಪ್ಪತ್ತೆರಡು ವರ್ಷಗಳ ಹಿಂದೆ ನಡೆದಿದ್ದ ಗುಜರಾತ್ ಗಲಭೆ ವೇಳೆ ಬಾನು ಅವರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಆಕೆಯ ಕುಟುಂಬ ಸದಸ್ಯರನ್ನು ಹತ್ಯೆ ಮಾಡಿದ್ದ 11 ಅಪರಾಧಿಗಳನ್ನು ಅವಧಿಪೂರ್ವದಲ್ಲೇ ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿದ್ದ ಪ್ರಕರಣ ಇದಾಗಿದೆ.

ಕ್ಷಮಾದಾನದ ಅರ್ಜಿಯನ್ನು ಅಪರಾಧ ನಡೆದ ರಾಜ್ಯದ ನೀತಿಗೆ ಅನುಗುಣವಾಗಿ ಪರಿಗಣಿಸಬೇಕೆ ವಿನಾ ವಿಚಾರಣೆ ನಡೆದ ಸ್ಥಳದಲ್ಲಿನ ನೀತಿಗೆ ಅನುಗುಣವಾಗಿ ಅಲ್ಲ ಎಂದು ಮೇ 2022ರಲ್ಲಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪಿನಂತೆ ಗುಜರಾತ್‌ ಸರ್ಕಾರ ಅಪರಾಧಿಗಳ ಶಿಕ್ಷೆ ಕಡಿತಗೊಳಿಸಿತ್ತು.

ತೀರ್ಪಿಗೆ ಅನುಗುಣವಾಗಿ ಪ್ರಕರಣದ ವಿಚಾರಣೆ ಮಹಾರಾಷ್ಟ್ರದಲ್ಲಿ ನಡೆದಿದ್ದರೂ ಅಪರಾಧಿಗಳನ್ನು ಬಿಡುಗಡೆ ಮಾಡಲು ಗುಜರಾತ್ ಸರ್ಕಾರ ತನ್ನ ಕ್ಷಮಾದಾನ ನೀತಿಯನ್ನು ಅನ್ವಯಿಸಿತ್ತು. ಅದರಂತೆ ಜಸ್ವಂತ್ ನಾಯ್, ಗೋವಿಂದ್ ನಾಯ್, ಶೈಲೇಶ್ ಭಟ್, ರಾಧೇಶಾಮ್‌ ಶಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೋಹಾನಿಯಾ, ಪ್ರದೀಪ್ ಮೋರ್ಧಿಯಾ, ಬಕಾಭಾಯ್ ವೋಹಾನಿಯಾ, ರಾಜುಭಾಯ್ ಸೋನಿ, ಮಿತೇಶ್ ಭಟ್ ಮತ್ತು ರಮೇಶ್ ಚಂದನಾ ಅವರನ್ನು ಬಿಡುಗಡೆ ಮಾಡಲಾಗಿತ್ತು. ಬಿಡುಗಡೆಯ ವೇಳೆ ಇವರೆಲ್ಲರನ್ನೂ ಆರತಿ ಎತ್ತಿ, ಸ್ವಾಗತಿಸಲಾಗಿತ್ತು. ಇದು ದೇಶಾದ್ಯಂತ ವ್ಯಾಪಕ ಟೀಕೆಗೂ ಕಾರಣವಾಗಿತ್ತು.

ಜೈಲಿನಲ್ಲಿ 14 ವರ್ಷಗಳನ್ನು ಪೂರ್ಣಗೊಳಿಸಿದ ಕಾರಣ ಮತ್ತು ವಯಸ್ಸು, ಅಪರಾಧದ ಸ್ವರೂಪ, ಜೈಲಿನಲ್ಲಿನ ನಡವಳಿಕೆ ಮುಂತಾದ ಅಂಶಗಳಿಂದಾಗಿ ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಗುಜರಾತ್ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ರಾಜ್ ಕುಮಾರ್ ಹೇಳಿದ್ದರು.

ಗುಜರಾತ್ ಸರ್ಕಾರದ ನಿರ್ಧಾರವನ್ನು ಬಾನೊ ಸೇರಿದಂತೆ ಹಲವು ಅರ್ಜಿದಾರರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...