ಲಂಚ ಪ್ರಕರಣ | ಅದಾನಿ ಗ್ರೂಪ್‌ ಜೊತೆಗಿನ ವಿದ್ಯುತ್‌ ಒಪ್ಪಂದ ರದ್ದುಗೊಳಿಸುವುದೇ ಆಂಧ್ರ ಸರ್ಕಾರ

Date:

ಪ್ರಧಾನಿ ಮೋದಿ ಅವರ ಅತ್ಯಾಪ್ತ, ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕ ನ್ಯಾಯಾಲಯವು ಲಂಚ ಮತ್ತು ವಂಚನೆ ಆರೋಪ ಮಾಡಿದೆ. ಬಂಧನ ವಾರೆಂಟ್‌ ಹೊರಡಿಸಿದೆ. ಈ ಬೆನ್ನಲ್ಲೇ, ಅದಾನಿ ಗ್ರೂಪ್‌ ಜೊತೆಗೆ ಮಾಡಿಕೊಳ್ಳಲಾಗಿರುವ ವಿದ್ಯುತ್‌ ಸರಬರಾಜು ಒಪ್ಪಂದವನ್ನು ರದ್ದುಗೊಳಿಸುವ ಬಗ್ಗೆ ಆಂಧ್ರ ಪ್ರದೇಶದ ಸರ್ಕಾರವು ಪರಿಶೀಲನೆ ನಡೆಸುತ್ತಿದೆ ಎಂದು ಆಂಧ್ರ ಹಣಕಾಸು ಸಚಿವ ಪಯ್ಯಾವುಲ ಕೇಶವ್ ಹೇಳಿರುವುದಾಗಿ ‘ರಾಯಿಟರ್ಸ್’ ವರದಿ ಮಾಡಿದೆ.

ಹಿಂದಿನ ಆಂಧ್ರ ಸರ್ಕಾರವು ಅದಾನಿ ಗ್ರೂಪ್‌ ಜೊತೆಗೆ ಮಾಡಿಕೊಂಡಿರುವ ಒಪ್ಪಂದಗಳಿಗೆ ಎಂಬಂಧಿಸಿದ ಎಲ್ಲ ಕಡತಗಳನ್ನು ಪರಿಶೀಲಿಸಲಾಗುತ್ತಿದೆ. ಅವುಗಳಲ್ಲಿ ಭ್ರಷ್ಟಾಚಾರ ನಡೆದಿರುವುದು ಕಂಡುಬಂದರೆ, ಮುಂದೆ ಏನು ಮಾಡಬಹುದು ಎಂಬುದರ ಬಗ್ಗೆ ಯೋಜಿಸುತ್ತೇವೆ ಎಂದು ಸಚಿವರು ಹೇಳಿದ್ದಾರೆ.

ಆಂಧ್ರದಲ್ಲಿ ತಮ್ಮ ಆಡಳಿತದ ಅವಧಿಯಲ್ಲಿ ಯಾವುದೇ ಅಪರಾಧ (ಭ್ರಷ್ಟಾಚಾರ) ನಡೆದಿಲ್ಲ ಎಂದಿರುವ ವೈಎಸ್‌ಆರ್‌ ಕಾಂಗ್ರೆಸ್‌, ಆರೋಪವನ್ನು ನಿರಾಕರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತೀಯ ಅಧಿಕಾರಿಗಳಿಗೆ ಅದಾನಿ 2,029 ಕೋಟಿ ರೂ. ಲಂಚ ನೀಡಿದ್ದಾರೆ. ಆಂಧ್ರಪ್ರದೇಶ ರಾಜ್ಯ ವಿದ್ಯುತ್ ಪ್ರಸರಣ ಕಂಪನಿಗಳಿಗೆ 7 ಗಿಗಾವ್ಯಾಟ್ ಸೌರ ವಿದ್ಯುತ್ ಪೂರೈಕೆ ಮಾಡಲು ಆಂಧ್ರ ಸರ್ಕಾರದೊಂದಿಗೆ ಅದಾನಿ ಗ್ರೂಪ್‌ನ ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್‌ ಒಪ್ಪಂದ ಮಾಡಿಕೊಂಡಿದೆ. ಬಿಡ್‌ ಗೆಲ್ಲುವ ಉದ್ದೇಶಕ್ಕಾಗಿ ಅಧಿಕಾರಿಗಳಿಗೆ ಅದಾನಿ ಭಾರೀ ಮೊತ್ತದ ಲಂಚ ನೀಡಿದ್ದಾರೆ ಎಂದು ಅಮೆರಿಕ ಆರೋಪಿಸಿದೆ.

ಒಡಿಶಾ, ತಮಿಳುನಾಡು, ಛತ್ತೀಸ್‌ಗಢ, ಆಂಧ್ರಪ್ರದೇಶ ಹಾಗೂ ಜಮ್ಮು ಮತ್ತು ಕಾಶ್ಮೀರ ಸರ್ಕಾರಗಳಿಂದ ಸೌರ ವಿದ್ಯುತ್ ಸರಬರಾಜು ಗುತ್ತಿಗೆಯನ್ನು ಪಡೆಯಲು 2021 ಮತ್ತು 2022ರ ನಡುವೆ ಭಾರತೀಯ ಅಧಿಕಾರಿಗಳಿಗೆ 2,019 ಕೋಟಿ ರೂ. ಲಂಚ ನೀಡಿದ್ದಾರೆ. ಅದಕ್ಕಾಗಿ, ಅಮೆರಿಕದ ಹೂಡಿಕೆದಾರರಿಗೆ ಸುಳ್ಳು ಹೇಳಿ, ಹಣ ಪಡೆದುಕೊಂಡಿದ್ದಾರೆ. ಪ್ರಕರಣದಲ್ಲಿ ಗೌತಮ್ ಅದಾನಿ, ಸಾಗರ್ ಅದಾನಿ ಮತ್ತು ಇತರರ ಐದು ಮಂದಿ ಭಾಗಿಯಾಗಿದ್ದಾರೆ. ಎಂದು ಅಮೆರಿಕದ ‘ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಕಮಿಷನ್’ ಆರೋಪಿಸಿದೆ. ಲಂಚ ಮತ್ತು ವಂಚನೆ ಆರೋಪದ ಚಾರ್ಜ್‌ಶೀಟ್‌ ಸಲ್ಲಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...