‘ನನ್ನನ್ನು ಭೇಟಿ ಮಾಡಬೇಕೆಂದರೆ ಆಧಾರ್‌ ಕಾರ್ಡ್‌ ತನ್ನಿ’; ಆಕ್ರೋಶಕ್ಕೆ ಗುರಿಯಾದ ಬಿಜೆಪಿ ಸಂಸದೆ ಕಂಗನಾ ಹೇಳಿಕೆ

Date:

ಬಾಲಿವುಟ್ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು, ‘ತಾವು ಪ್ರತಿನಿಧಿಸುವ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಜನರು ತಮ್ಮನ್ನು ಭೇಟಿ ಮಾಡಲು ಬಯಸಿದರೆ, ತಮ್ಮ ಆಧಾರ್ ಕಾರ್ಡ್‌ಗಳನ್ನು ತರಬೇಕು’ ಎಂದು ಹೇಳಿದ್ದಾರೆ. ಅವರ ಈ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದೆ. ಕಂಗನಾ ಮತ್ತು ಬಿಜೆಪಿಯನ್ನು ಕಾಂಗ್ರೆಸ್‌ ತರಾಟೆಗೆ ತೆಗೆದುಕೊಂಡಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕಂಗನಾ, “ಕ್ಷೇತ್ರದ ಜನರು ತಮ್ಮನ್ನು ಭೇಟಿ ಮಾಡಲು ಆಧಾರ್ ಕಾರ್ಡ್‌ಅನ್ನು ಜೊತೆಗೆ ತರಬೇಕು. ಮಾತ್ರವಲ್ಲದೆ, ತಮ್ಮ ಸಮಸ್ಯೆ ಆಥವಾ ಭೇಟಿಯ ಉದ್ದೇಶವನ್ನು ಪತ್ರದ ಮೂಲಕ ತಿಳಿಸಬೇಕು” ಎಂದು ಹೇಳಿದ್ದಾರೆ.

“ಹಿಮಾಚಲ ಪ್ರದೇಶವು ಹೆಚ್ಚು ಪ್ರವಾಸಿಗರು ಬರುವ ಸ್ಥಳವಾಗಿದೆ. ಆದ್ದರಿಂದ, ಮಂಡಿ ಪ್ರದೇಶದಿಂದ ಆಧಾರ್ ಕಾರ್ಡ್ ಇಟ್ಟುಕೊಳ್ಳುವುದು ಅವಶ್ಯಕವಾಗಿದೆ. ಕ್ಷೇತ್ರಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ, ಕಲಸಗಳ ಬಗ್ಗೆ ಪತ್ರದಲ್ಲಿ ಬರೆದು ಕೊಡಬೇಕು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿಮಾಚಲದ ಉತ್ತರ ಭಾಗದ ಜನರು ತನ್ನನ್ನು ಭೇಟಿಯಾಗಲು ಬಯಸಿದರೆ, ಅವರು ಮನಾಲಿಯಲ್ಲಿರುವ ತಮ್ಮ ಮನೆಗೆ ಭೇಟಿ ನೀಡಬಹುದು. ಮಂಡಿಯಲ್ಲಿರುವ ಜನರು ನಗರದ ತಮ್ಮ ಕಚೇರಿಗೆ ಬರಬಹುದು” ಎಂದು ಅವರು ಹೇಳಿದ್ದಾರೆ.

ಕಂಗನಾ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಕಂಗನಾ ರಣಾವತ್ ವಿರುದ್ಧ ಸ್ಪರ್ಧಿಸಿ, ಸೋತಿದ್ದ ಕಾಂಗ್ರೆಸ್ ನಾಯಕ, ಹಿಮಾಚಲದ ಹಾಲಿ ಲೋಕೋಪಯೋಗಿ ಸಚಿವ ವಿಕ್ರಮಾದಿತ್ಯ ಸಿಂಗ್ ಅವರು, ಕಂಗನಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಕ್ಷೇತ್ರದ ಜನರು ಅವರನ್ನು ಭೇಟಿ ಮಾಡಲು ಬಯಸಿದರೆ, ಆಧಾರ್ ಕಾರ್ಡ್ ತರುವ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ.

“ನಾವು ಜನಪ್ರತಿನಿಧಿಗಳು. ಹಾಗಾಗಿ ರಾಜ್ಯದ ಪ್ರತಿಯೊಂದು ವರ್ಗದ ಜನರನ್ನು ಭೇಟಿ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ. ಅದು ಸಣ್ಣ ಕೆಲಸವಾಗಲಿ, ದೊಡ್ಡ ಕೆಲಸವಾಗಲಿ, ನೀತಿ ವಿಷಯವಾಗಲಿ ಅಥವಾ ವೈಯಕ್ತಿಕ ಕೆಲಸವಾಗಲಿ – ಭೇಟಿಗೆ ಯಾವುದೇ ಗುರುತಿನ ಚೀಟಿಯ ಅಗತ್ಯವಿಲ್ಲ. ಒಬ್ಬ ವ್ಯಕ್ತಿ ಸಾರ್ವಜನಿಕ ಪ್ರತಿನಿಧಿಯ ಬಳಿಗೆ ಬರುತ್ತಿದ್ದಾರೆ ಎಂದರೆ, ಅವರು ಯಾವುದೋ ಕೆಲಸಕ್ಕಾಗಿ ಬರುತ್ತಿದ್ದಾರೆ ಎಂದೇ ಅರ್ಥ. ಭೇಟಿಗೆ ಬರುವವರು ಪತ್ರ ಬರೆದುಕೊಂಡು ಬರಬೇಕೆಂದು ಕೇಳುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...