ನಿಮಗೆ ತಾಕತ್ತಿದ್ದರೆ ಮತ್ತೆ ಹಿಜಾಬ್ ತನ್ನಿ: ಸಿಎಂಗೆ ಸವಾಲೆಸೆದ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್

Date:

“ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ” ಎಂಬ ಸಿಎಂ ಸಿದ್ದರಾಮಯ್ಯನವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, “ನಿಮಗೆ ತಾಕತ್ತಿದ್ದರೆ ಮತ್ತೆ ಹಿಜಾಬ್ ತನ್ನಿ ನೋಡುವ” ಎಂದು ಸವಾಲೆಸೆದಿದ್ದಾರೆ.

ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಇಂದು ಆಯೋಜಿಸಲಾಗಿದ್ದ ಸಂಕೀರ್ತನೆ ಯಾತ್ರೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಿಜಾಬ್ ಮತ್ತೆ ವಾಪಸ್ ತರುತ್ತೇವೆ ಅಂತಿದ್ದಾರೆ. ಶಾಲಾ ಮಕ್ಕಳಲ್ಲಿ ಮತ್ತೆ ಪ್ರತ್ಯೇಕತೆತ ವಿಷಬೀಜ ಬಿತ್ತುತ್ತಿದ್ದಾರೆ. ನೀವೇ ಸಮವಸ್ತ್ರ ಮಾಡಿದ್ದೀರಾ. ಮತ್ತೆ ನೀವೇ ಪ್ರತ್ಯೇಕ ಮಾಡುತ್ತಿದ್ದೀರಾ. ನಿಮಗೆ ತಾಕತ್ತಿದ್ದರೆ ಮತ್ತೆ ಹಿಜಾಬ್ ತನ್ನಿ ನೋಡುವ” ಎಂದು ಹೇಳಿದ್ದಾರೆ.

ಸಿಎಂ ಹಿಜಾಬ್ ಹೇಳಿಕೆಯ ಬಳಿಕ, ‘ಮತ್ತೆ ಕಾಲೇಜಿಗೆ ಹೋಗುತ್ತೇನೆ’ ಎಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ವಿರುದ್ಧ ಆರೋಪ ಮಾಡಿರುವ ಕಲ್ಲಡ್ಕ ಪ್ರಭಾಕರ ಭಟ್, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಸ್ಕಾನ್, ನೀನು ಮನೆಯಲ್ಲಿ ಅಥವಾ ಮಸೀದಿಯಲ್ಲಿ ಅಲ್ಲಾಹು ಅಕ್ಬರ್ ಎಂದು ಹೇಳಬೇಕು.ಈ ದೇಶದಲ್ಲಿ ಹೇಳಬೇಕಿರೋದು ರಾಮ ನಾಮ. ಅಲ್ಲಾಹು ಅಕ್ಬರ್ ಎನ್ನಬೇಕಾದರೆ ನೀವು ಮುಸಲ್ಮಾನ ದೇಶಕ್ಕೆ ಹೋಗಿ. ಮುಸ್ಕಾನ್‌ಗೆ ಶಹಭಾಷ್‌ಗಿರಿ ಕೊಟ್ಟಿದ್ದು ಅಲ್ ಖೈದಾ ಭಯೋತ್ಪಾದಕ ಸಂಘಟನೆಯ ಸದಸ್ಯ. ಮುಸ್ಕಾನ್‌ಗೂ ಕೂಡ ಅಲ್ ಖೈದಾ ಜೊತೆ ಸಂಪರ್ಕ ಇದೆ. ತಾಕತ್ತಿದ್ದರೆ ಮುಸ್ಕಾನ್ ಮತ್ತೆ ಶಾಲೆಗೆ ಹೋಗುವ ಕೆಲಸ ಮಾಡಲಿ. ಇದನ್ನು ನೀವು ಹಿಂದೂಗಳ ದೌರ್ಬಲ್ಯ ಅಂದುಕೊಳ್ಳಬೇಡಿ. ನಾವು ಒಟ್ಟಾಗಿರಲು ಬಯಸುತ್ತೇವೆ” ಎನ್ನುವ ಮೂಲಕ ಮಂಡ್ಯದ ಮುಸ್ಕಾನ್​ಗೆ ಅಲ್​ಖೈದಾ ಭಯೋತ್ಪಾದನಾ ಸಂಘಟನೆಯ ಸಂಪರ್ಕವಿದೆ ಎಂದು ಆರೋಪ ಮಾಡಿದ್ದಾರೆ.

“ನೂರಾರು ಜನ ನಮ್ಮ ದೇಶದ ಮೇಲೆ ಆಕ್ರಮಣ ಮಾಡಿದ್ದರು. ಸಾವಿರಾರು ವರ್ಷಗಳ ಹಿಂದೆ ನಮ್ಮ ನಮ್ಮಲ್ಲೇ ಗೊಂದಲ ಮೂಡಿಸಿದ್ದರಿಂದ ಹಿಂದೂಗಳಲ್ಲಿ ಒಡಕುಂಟಾಯಿತು. ಮೊಘಲರು ಒಳ ನುಸುಳಿದ್ದರು. ಈ ದೇಶಕ್ಕಾಗಿ ಕಿತ್ತೂರು ಚೆನ್ನಮ್ಮ, ಒನಕೆ ಓಬವ್ವನವರಂತಹ ಮಾತೆಯರು ಹೋರಾಡಿದ್ದಾರೆ. ಬ್ರಿಟೀಷರ ವಿರುದ್ಧ ನಾವು ಮಾನಸಿಕವಾಗಿ ಸೋತೆವು. ಈ ದೇಶವನ್ನು ಮುಸ್ಲಿಂ ದೇಶ ಮಾಡಬೇಕು ಎಂದು ಮುಸ್ಲಿಮರು ಬಂದಿದ್ದರು. ಘಜನಿ ಮಹಮ್ಮದ್ ಕಾಲದಿಂದಲೂ ಈ ದೇಶವನ್ನ ಮುಸ್ಲಿಂ ದೇಶ ಮಾಡಬೇಕು ಎಂದು ಕೊಲೆ ಅತ್ಯಾಚಾರ, ದರೋಡೆ ಮಾಡಲಾಯಿತು. ಕಾಶ್ಮೀರವನ್ನು ಪಾಕಿಸ್ತಾನ ವಶಪಡಿಸಿಕೊಂಡಾಗ ನೆಹರೂ ಮತ್ತು ಕಾಂಗ್ರೆಸ್‌ನಿಂದ ನಮ್ಮ ದೇಶದ ಜನರಿಗೆ ಮೋಸ ಮಾಡಲಾಯಿತು. ಈ ದೇಶದ ಮೊದಲ ಒಂದು ಭಾಗದ ಲಾಭ ಮುಸ್ಲಿಮರಿಗೆ ಎಂದು ಮನಮೋಹನ್ ಸಿಂಗ್ ಘೋಷಣೆ ಮಾಡಿದ್ದರು. ಈ ದೇಶ ಯಾರಪ್ಪನ ಮನೆ ಆಸ್ತಿ” ಎಂದು ಕಲ್ಲಡ್ಕ ಪ್ರಭಾಕರ ಭಟ್ ಪ್ರಶ್ನಿಸುವ ಮೂಲಕ, ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...