‘ಗೌಪ್ಯವಾಗಿ ತರಲಾಗಿದೆ’: ಮಹಿಳಾ ಮೀಸಲಾತಿ ಮಸೂದೆ ಕುರಿತು ಕೇಂದ್ರದ ವಿರುದ್ಧ ಕನಿಮೊಳಿ ಕಿಡಿ

Date:

ಮಹಿಳಾ ಮೀಸಲಾತಿ ಮಸೂದೆಯನ್ನು ಗೌಪ್ಯವಾಗಿ ತರಲಾಗಿದೆ. ಪಕ್ಷಗಳೊಂದಿಗೆ ಚರ್ಚೆ ನಡೆಸಿಲ್ಲ, ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಒಮ್ಮತದ ಅಭಿಪ್ರಾಯ ರೂಪಿಸಲಾಗಿಲ್ಲ ಎಂದು ಕೇಂದ್ರದ ವಿರುದ್ಧ ಡಿಎಂಕೆ ಸಂಸದೆ ಕನಿಮೊಳಿ ಕರುಣಾನಿಧಿ ಕಿಡಿಕಾರಿದ್ದಾರೆ.

ಲೋಕಸಭೆಯಲ್ಲಿ ಮಾತನಾಡಿದ ಕನಿಮೊಳಿ, “ಮೀಸಲಾತಿ ಮಸೂದೆಯನ್ನು ಸಂಸತ್ತಿನಲ್ಲಿ ಹಲವು ಬಾರಿ ಪ್ರಸ್ತಾಪಿಸಿದ್ದೇನೆ ಮತ್ತು ಸರ್ಕಾರದ ಉತ್ತರವು ತುಂಬಾ ಸ್ಥಿರವಾಗಿದೆ. ಅವರು ಎಲ್ಲ ರಾಜಕೀಯ ಪಕ್ಷಗಳನ್ನು ಒಳಗೊಳ್ಳಬೇಕು ಮತ್ತು ಮಸೂದೆಯನ್ನು ತರುವ ಮೊದಲು ಒಮ್ಮತವನ್ನು ನಿರ್ಮಿಸಬೇಕು. ಆದರೆ, ಕೇಂದ್ರ ಸರ್ಕಾರವು ಯಾವ ಒಮ್ಮತವನ್ನು ನಿರ್ಮಿಸಿದೆ? ಮಸೂದೆ ಬಗ್ಗೆ ಯಾವ ಚರ್ಚೆಗಳು ನಡೆದಿವೆ? ಎಂಬುದರ ಕುರಿತು ತಿಳಿದುಕೊಳ್ಳಲು ನಾನು ಬಯಸುತ್ತೇನೆ. ಈ ಮಸೂದೆಯನ್ನು ಗೌಪ್ಯವಾಗಿ ತರಲಾಗಿದೆ,” ಎಂದು ಕೇಂದ್ರದ ವಿರುದ್ಧ ಹರಿಹಾಯ್ದರು.

ಕನಿಮೊಳಿ ತಮ್ಮ ಭಾಷಣವನ್ನು ಪ್ರಾರಂಭಿಸಲು ಮುಂದಾದಾಗ ಬಿಜೆಪಿ ಸದಸ್ಯರು ಘೋಷಣೆಗಳನ್ನು ಕೂಗಿದರು. ಘೋಷಣೆಗೆ ಪ್ರತಿಕ್ರಿಯಿಸಿದ ಅವರು ಪೆರಿಯಾರ್ ಅವರ ಮಾತನ್ನು ಉಲ್ಲೇಖಿಸಿ, “ತಾವು ಮಹಿಳೆಯರನ್ನು ಗೌರವಿಸುತ್ತೇವೆ ಮತ್ತು ಮಹಿಳೆಯರ ಸ್ವಾತಂತ್ರ್ಯಕ್ಕಾಗಿ ಶ್ರಮಿಸುತ್ತೇವೆ ಎಂದು ಪುರುಷರು ಸೋಗು ಹಾಕುವುದು ಮಹಿಳೆಯರನ್ನು ವಂಚಿಸುವ ತಂತ್ರವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ 33% ಮಹಿಳಾ ಮೀಸಲಾತಿಯನ್ನು ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ ಬಳಿಕ ಜಾರಿಗೆ ತರುತ್ತೇವೆ ಎಂದಿರುವ ಕೇಂದ್ರವನ್ನು ಪ್ರಶ್ನಿಸಿದ ಅವರು, “ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಮರುವಿಂಗಡಣೆಯೊಂದಿಗೆ ಏಕೆ ತಳಕು ಹಾಕಬೇಕು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...