ಸೋದರಳಿಯ ಆಕಾಶ್‌ರನ್ನು ಉತ್ತರಾಧಿಕಾರಿ ಸ್ಥಾನದಿಂದ ಕೆಳಗಿಳಿಸಿದ ಮಾಯಾವತಿ, ಕಾರಣವೇನು?

Date:

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ವರಿಷ್ಠೆ ಮಾಯಾವತಿ ಅವರು ಮಂಗಳವಾರ ಸೋದರಳಿಯ ಆಕಾಶ್ ಆನಂದ್ ಅವರನ್ನು ತಮ್ಮ ರಾಜಕೀಯ ಉತ್ತರಾಧಿಕಾರಿ ಮತ್ತು ಪಕ್ಷದ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ಕೆಳಗಿಳಿಸಿದ್ದಾರೆ.

ಈ ಬಗ್ಗೆ ತನ್ನ ಎಕ್ಸ್‌ ಪೋಸ್ಟ್‌ನಲ್ಲಿ ಮಾಯಾವತಿ ಮಾಹಿತಿ ನೀಡಿದ್ದಾರೆ. ಆಕಾಶ್ ಈ ಪಾತ್ರವನ್ನು ನಿರ್ವಹಣೆ ಮಾಡುವಷ್ಟು ‘ಪ್ರಬುದ್ಧತೆ’ಗೆ ತಲುಪಬೇಕು ಎಂದು ಮಾಯಾವತಿ ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಎಸ್‌ಪಿ, ಒಂದು ಪಕ್ಷ ಮಾತ್ರವಲ್ಲದೆ, ಬಾಬಾ ಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಅವರ ಸ್ವಾಭಿಮಾನ ಮತ್ತು ಕಾನ್ಶಿ ರಾಮ್ ಜಿ ಅವರ ಸಾಮಾಜಿಕ ಬದಲಾವಣೆಗಾಗಿ ಇರುವ ಆಂದೋಲನವಾಗಿದೆ ಎಂಬುದು ತಿಳಿದಿದೆ. ಇದಕ್ಕಾಗಿ ನಾನು ನನ್ನ ಸಂಪೂರ್ಣ ಜೀವನವನ್ನು ಮುಡಿಪಾಗಿಟ್ಟಿದ್ದೇನೆ. ಅದಕ್ಕೆ ವೇಗ ನೀಡಲು ಹೊಸ ಪೀಳಿಗೆಯನ್ನು ಸಹ ಸಿದ್ಧಪಡಿಸಲಾಗುತ್ತಿದೆ” ಎಂದಿದ್ದಾರೆ.

ಇದನ್ನು ಓದಿದ್ದೀರಾ?  ಉತ್ತರಪ್ರದೇಶ | ಈ ಸಲ ಮೈತ್ರಿ ಕೂಟಗಳಿಂದ ಯಾಕೆ ದೂರ ಉಳಿದರು ಮಾಯಾವತಿ?

“ಈ ನಿಟ್ಟಿನಲ್ಲಿ ಪಕ್ಷದಲ್ಲಿ ಇತರ ಜನರನ್ನು ಉತ್ತೇಜಿಸುವ ಜೊತೆಗೆ, ನಾನು ಆಕಾಶ್ ಆನಂದ್ ಅವರನ್ನು ರಾಷ್ಟ್ರೀಯ ಸಂಯೋಜಕ ಮತ್ತು ಅವರ ಉತ್ತರಾಧಿಕಾರಿ ಎಂದು ಘೋಷಿಸಿದ್ದೆ. ಆದರೆ ಈಗ ಆಕಾಶ್ ಪೂರ್ಣ ಪ್ರಬುದ್ಧತೆಯನ್ನು ಪಡೆಯುವವರೆಗೆ ಪಕ್ಷ ಮತ್ತು ಚಳುವಳಿಯ ಹಿತಾಸಕ್ತಿಯಿಂದ ಅವರನ್ನು ಈ ಎರಡೂ ಪ್ರಮುಖ ಜವಾಬ್ದಾರಿಗಳಿಂದ ದೂರ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಆಕಾಶ್ ಅವರ ತಂದೆ ಆನಂದ್ ಕುಮಾರ್ ಅವರು ಪಕ್ಷದಲ್ಲಿ ತಮ್ಮ ಪಾತ್ರದಲ್ಲಿ ಮುಂದುವರಿಯಲಿದ್ದಾರೆ ಎಂದೂ ಮಾಯಾವತಿ ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಲೋಕಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

ಕಳೆದ ವರ್ಷ ಡಿಸೆಂಬರ್ 10ರಂದು ಮಾಯಾವತಿ ಅವರು 28 ವರ್ಷದ ಆಕಾಶ್ ಆನಂದ್ ಅವರನ್ನು ತಮ್ಮ ಉತ್ತರಾಧಿಕಾರಿ ಎಂದು ಘೋಷಿಸಿದರು. ಲಂಡನ್‌ನಲ್ಲಿ ಎಂಬಿಎ ಮಾಡಿರುವ ಆನಂದ್‌ಗೆ ಪಕ್ಷದ ರಾಷ್ಟ್ರೀಯ ಸಂಯೋಜಕ ಹುದ್ದೆ ನೀಡಲಾಗಿತ್ತು.

ಇನ್ನು ಇತ್ತೀಚೆಗೆ ಆಕಾಶ್ ಆನಂದ್ ವಿರುದ್ಧ ಉತ್ತರ ಪ್ರದೇಶದ ಸೀತಾಪುರದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಾಗಿದೆ. ಚುನಾವಣಾ ರ್‍ಯಾಲಿಯಲ್ಲಿ ಭಾಷಣ ಮಾಡುತ್ತಾ ಆಕಾಶ್ ಆನಂದ್, ಬಿಜೆಪಿ ಸರ್ಕಾರವನ್ನು ತಾಲಿಬಾನ್‌ಗೆ ಹೋಲಿಕೆ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...