ಮಹದಾಯಿ ಯೋಜನೆ ಜಾರಿಗೆ ಬಿಎಸ್‌ವೈ ಪ್ರಾಮಾಣಿಕವಾಗಿ ಪ್ರಯತ್ನಿಸಿಲ್ಲ: ಸಿದ್ದರಾಮಯ್ಯ

Date:

ಯಡಿಯೂರಪ್ಪನವರು ಮಹದಾಯಿ ಯೋಜನೆ ಅನುಷ್ಠಾನ ಮಾಡುವುದಾಗಿ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಭರವಸೆ ನೀಡಿದ್ದರು. ಆದರೆ ಅವರಿಂದ ಯೋಜನೆ ಅನುಷ್ಠಾನಗೊಳ್ಳಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಧಾನ ಪರಿಷತ್‌ನಲ್ಲಿ ರಾಜ್ಯಪಾಲರ ಬಜೆಟ್‌ ಭಾಷಣದ ಮೇಲೆ ವಂದನಾ ನಿರ್ಣಯ ಮಂಡಿಸಿ ಸುದೀರ್ಘವಾಗಿ ಮಾತನಾಡಿದರು.

“ಮನಮೋಹನ್ ಸಿಂಗ್ ಅವಧಿಯಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಿದ್ದರೂ ಡೀಸೆಲ್-ಪೆಟ್ರೋಲ್ ಬೆಲೆ ಕಡಿಮೆ ಇತ್ತು. ಈಗ ಕಚ್ಚಾ ತೈಲ ಬೆಲೆ ಕಡಿಮೆ ಇದ್ದರೂ ಮೋದಿ ಡೀಸೆಲ್-ಪೆಟ್ರೋಲ್ ಬೆಲೆ ವಿಪರೀತ ಹೆಚ್ಚಿಸಿದ್ದಾರೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗೃಹಲಕ್ಷ್ಮಿ ಹಣ ಆರು ತಿಂಗಳಿಂದ ಬಾಕಿ ಇದೆ ಎಂದು ವಿರೋಧಪಕ್ಷದ ನಾಯಕರು ತಿಳಿಸಿದ್ದಾರೆ. ಇದು ಅಪ್ಪಟ ಸುಳ್ಳು. ಆದರೆ ಗೃಹಲಕ್ಷ್ಮಿ ಬಾಕಿ ಕೇವಲ ಜನವರಿಯಿಂದ ಉಳಿದಿದ್ದು, ಅದನ್ನೂ ಪಾವತಿಸಲಾಗುವುದು” ಎಂದು ಭರವಸೆ ನೀಡಿದರು.

“ಶಿಕ್ಷಣ ಇಲಾಖೆಯಡಿ 11400 ಶಿಕ್ಷಕರ ಕೊರತೆ ಇದೆ. 6400 ಶಾಲೆಗಳಲ್ಲಿ ಏಕ ಶಿಕ್ಷಕರು ಇದ್ದಾರೆ. ಬಿಜೆಪಿಯು 4 ವರ್ಷದಲ್ಲಿ ಎಷ್ಟು ಜನ ಶಿಕ್ಷಕರ ನೇಮಕಾತಿ ಮಾಡಿದ್ದಾರೆಂದು ತಿಳಿಸಲಿ” ಎಂದು ಸವಾಲು ಹಾಕಿದರು.

“ಎಲ್ಲ ದುರ್ಬಲವರ್ಗದವರನ್ನೂ ನಾನು ಪ್ರೀತಿಸುತ್ತೇನೆ. ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಆದರೆ ವಿವಿಗಳನ್ನು ಮುಚ್ಚುವುದಿಲ್ಲ. ಸಚಿವ ಸಂಪುಟ ಉಪಸಮಿತಿಯ ವರದಿ ಬಂದ ನಂತರ ವಿವಿಗಳನ್ನು ಮುಂದುವರೆಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ರೈತರ ಆತ್ಮಹತ್ಯೆಗಳು ಹೆಚ್ಚಿರುವ ಬಗ್ಗೆ ಕೇಳಲಾಗಿದೆ. ಆದರೆ ವಾಸ್ತವಿಕವಾಗಿ 40% ವರೆಗೆ ಆತ್ಮಹತ್ಯೆಗಳು ಕಡಿಮೆಯಾಗಿದೆ. ಫೆಬ್ರವರಿ ಅಂತ್ಯದವರಗೆ 644 ಆಗಿವೆ. ಆತ್ಮಹತ್ಯೆಗಳು ಇಳಿಮುಖವಾಗಿದೆ” ಎಂದು ತಿಳಿಸಿದರು.

“ಬೆಲೆ ಏರಿಕೆಯನ್ನು ಪ್ರಶ್ನಿಸಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಕಚ್ಚಾ ತೈಲದ ಬೆಲೆ 108-125 ಡಾಲರ್ ಇತ್ತು, ಆಗ ಡೀಸೆಲ್ ಬೆಲೆ 46.59 ಇತ್ತು, ಮೋದಿಯವರ ಕಾಲದಲ್ಲಿ ಕಚ್ಚಾ ತೈಲದ ಬೆಲೆ 73-76 ಡಾಲರ್ ಇದೆ, ಆದರೆ ಡೀಸೆಲ್ ಬೆಲೆ 90 ರೂ. ಆಗಿದೆ. ಅರ್ಧದಷ್ಟು ಬೆಲೆ ಹೆಚ್ಚಾಗಿದೆ. ನಾವು ಎಲ್ಲಾ ಬಾಬ್ತುಗಳಿಂದ 7 ರಿಂದ 8 ಸಾವಿರ ರೂ. ಹೆಚ್ಚಿಸಿದ್ದೇವೆ” ಎಂದರು.

“ಗ್ಯಾರಂಟಿಗಳಿಗೆ 51 ಸಾವಿರ ಕೋಟಿ ರೂ. ನೀಡಿದ್ದೇವೆ, ನೀರಾವರಿಗೆ ಈ ಬಾರಿ ಸಣ್ಣ ನೀರಾವರಿಗೆ 1000 ಕೋಟಿ ರೂ. ಹೆಚ್ಚಿಸಲಾಗಿದೆ. ಯಡಿಯೂರಪ್ಪನವರು ಮಹದಾಯಿ ಯೋಜನೆ ಅನುಷ್ಠಾನ ಮಾಡುವುದಾಗಿ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದಿದ್ದರು. ಆದರೆ ಅವರಿಂದ ಯೋಜನೆ ಅನುಷ್ಠಾನಗೊಳಿಸಲು ಸಾಧ್ಯವಾಗಲಿಲ್ಲ” ಎಂದು ಮತ್ತೆ ಉಚ್ಚರಿಸಿದರು.

“ಹಿಂದೆ 2013ರಲ್ಲಿ ಕೂಡಲಸಂಗಮದಲ್ಲಿ ಪ್ರತಿ ವರ್ಷ 10 ಸಾವಿರ ಕೋಟಿಗಳನ್ನು ನೀರಾವರಿಗೆ ಇಡುತ್ತೇವೆ, 56000 ಕೋಟಿ ರೂ.ಗಳನ್ನು ನೀರಾವರಿಗೆ ಖರ್ಚು ಮಾಡಿದ್ದೇವೆ. ಪ್ರತಿ ವರ್ಷ 1.50 ಲಕ್ಷ ಕೋಟಿ ಖರ್ಚು ಮಾಡುತ್ತೇವೆ ಎಂದಿದ್ದ ಬಿಜೆಪಿಯವರು ನಾಲ್ಕು ವರ್ಷವೂ ಪ್ರತಿ ವರ್ಷ ಕೇವಲ ಸರಾಸರಿ 16 ಸಾವಿರ ಕೋಟಿ ಖರ್ಚು ಮಾಡಿದ್ದೀರಿ. ಮಹದಾಯಿ ಯೋಜನೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಿಲ್ಲ” ಎಂದು ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...