ಬಿಎಸ್​ವೈ ಪೋಕ್ಸೋ ಪ್ರಕರಣ | ದೂರುದಾರ ಮಹಿಳೆ ಸಾವಿನ ವರದಿ ನೀಡಲು ಮಹಿಳಾ ಆಯೋಗ ಸೂಚನೆ

Date:

ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಆರೋಪ ಮಾಡಿದ್ದ ಮಹಿಳೆಯ ಸಾವಿನ ಪ್ರಕರಣದ ಕುರಿತು ಪೊಲೀಸ್ ತನಿಖೆಗೆ ರಾಜ್ಯ ಮಹಿಳಾ ಆಯೋಗ ಒತ್ತಾಯಿಸಿದೆ.

ದೂರುದಾರೆ ಸಂತ್ರಸ್ತೆ ತಾಯಿ ಸಾವಿನ ಬಗ್ಗೆ ಅನುಮಾನಮಾನಗಳು ವ್ಯಕ್ತವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ವರದಿ ನೀಡುವಂತೆ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಬಿ ಎಸ್ ಯಡಿಯೂರಪ್ಪ ಅವರು ಈ ವರ್ಷದ ಫೆಬ್ರವರಿಯಲ್ಲಿ ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಮಹಿಳೆ ಆರೋಪಿಸಿದ್ದರು. ಆದರೆ ದೂರುದಾರ ಮಹಿಳೆಯು ಮೇ ತಿಂಗಳಲ್ಲಿ ಅಸುನೀಗಿದ್ದರು. ಅವರು ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು ಎಂದು ವೈದ್ಯರು ತಿಳಿಸಿದ್ದರು. ಆದರೆ, ಮಹಿಳೆಯ ಶವ ಪರೀಕ್ಷೆ ನಡೆಸದೆಯೇ ಅಂತ್ಯಸಂಸ್ಕಾರ ನಡೆಸಲಾಗಿದೆ ಎಂದು ಮೇ ತಿಂಗಳಲ್ಲಿ ದೂರು ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, “ಪ್ರಕರಣದ ತನಿಖೆಯ ಮಾಹಿತಿ ನೀಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದೇನೆ. ಪತ್ರ ಬರೆದಿದ್ದೇನೆ. ಪ್ರಕರಣದಲ್ಲಿ ಮಾಜಿ ಸಿಎಂ ಆಗಿರಲಿ ಜನ ಸಾಮಾನ್ಯರೇ ಇರಲಿ. ತಪ್ಪು ಮಾಡಿದ್ದರೆ ಬಿಡುವ ಪ್ರಶ್ನೆಯೇ ಇಲ್ಲ” ಎಂದರು.

“ಸಂತ್ರಸ್ತೆಯ ತಾಯಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಮಹಿಳೆ ಸಾವಿನ ಬಗ್ಗೆ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಹಿಂದಷ್ಟೆ ಮಹಿಳೆಯ ಪುತ್ರಿ ಭೇಟಿಯಾಗಿದ್ದರು. ಕ್ಯಾನ್ಸರ್​​​ನಿಂದ ದಿಢೀರ್​​ ಸಾವು ಹೇಗೆ ಉಂಟಾಗುತ್ತೆ ಎಂಬುವುದೇ ಪ್ರಶ್ನೆ? ಮಹಿಳೆ ಶವ ಹಸ್ತಾಂತರ ವೇಳೆಯೂ ಹಲವು ಲೋಪಗಳು ಉಂಟಾಗಿವೆ. ಇದೆಲ್ಲಾ ವಿಚಾರಗಳು ಸಾಕಷ್ಟು ಅನುಮಾನಕ್ಕೆ ಕಾರಣವಾಗಿವೆ. ಮಹಿಳೆ ಸಾವಿನ ಬಗ್ಗೆ ಸಂತ್ರಸ್ತೆ ಕುಟುಂಬದವರು ಹುಳಿಮಾವು​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ” ಎಂದು ತಿಳಿಸಿದರು.

ಮಾರ್ಚ್ ತಿಂಗಳಲ್ಲಿ ದೂರು

ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧ 2004ರ ಮಾರ್ಚ್ ತಿಂಗಳಲ್ಲಿ ಪೋಕ್ಸೋ ಕಾಯ್ದೆ ಅಡಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಆದರೆ ಈ ಪ್ರಕರಣದಲ್ಲಿ ಪೊಲೀಸರು ನಿಷ್ಕ್ರಿಯತೆ ತೋರಿಸುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು. ಮಹಿಳೆ ಸಾವಿನ ಬಳಿಕ ಆಕೆಯ ಸಹೋದರ ಹೋರಾಟ ಮುಂದುವರಿಸಲು ಮುಂದಾಗಿದ್ದು, ಯಡಿಯೂರಪ್ಪ ಅವರನ್ನು ಕೂಡಲೇ ಬಂಧಿಸುವಂತೆ ಮತ್ತು ವಿಚಾರಣೆಗೆ ಒಳಪಡಿಸುವಂತೆ ಒತ್ತಾಯಿಸಿ ಜೂನ್ ತಿಂಗಳಲ್ಲಿ ಕೋರ್ಟ್‌ಗೆ ಹೊಸದಾಗಿ ಅರ್ಜಿ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...