ಬಜೆಟ್ ಅಧಿವೇಶನ ಆರಂಭ | ನೂತನ ಸಂಸತ್‌ನಲ್ಲಿ ಮೊದಲ ಭಾಷಣಗೈದ ರಾಷ್ಟ್ರಪತಿ ದ್ರೌಪದಿ ಮುರ್ಮು

Date:

2024ರ ಲೋಕಸಭಾ ಚುನಾವಣೆಗೆ ಹತ್ತಿರವಾಗುತ್ತಿರುವಂತೆಯೇ ಸಂಸತ್‌ನ ಬಜೆಟ್ ಅಧಿವೇಶನವು ಬುಧವಾರ ಆರಂಭಗೊಂಡಿದೆ. 17ನೇ ಲೋಕಸಭೆಯ ಅಂತಿಮ ಅಧಿವೇಶನ ಇದಾಗಿದೆ.

ಸಂಸತ್‌ನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಬುಧವಾರ ಭಾಷಣಗೈಯ್ಯುವ ಮೂಲಕ ರಾಷ್ಟ್ರಪತಿ ದೌಪದಿ ಮುರ್ಮು, ನೂತನ ಸಂಸತ್ ಭವನ ‘ಸೆಂಟ್ರಲ್ ವಿಸ್ಟಾ’ದಲ್ಲಿ ಇದೇ ಮೊದಲ ಸಲ ಮಾತನಾಡಿದ್ದಾರೆ. ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಯವರನ್ನು ಸರ್ಕಾರವು ಆಹ್ವಾನಿಸಿರಲಿಲ್ಲ. ಇದು ದೇಶಾದ್ಯಂತ ವಿವಾದಕ್ಕೂ ಕಾರಣವಾಗಿತ್ತು.

ಉದ್ಘಾಟನೆಯ ಸಂದರ್ಭದಲ್ಲಿ ಬಳಸಲಾಗಿದ್ದ ‘ಸೆಂಗೋಲ್’ ಅನ್ನು ಕೂಡ ಇದೇ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣ ಪೀಠದ ಮುಂದೆ ತಂದು ಇಡಲಾಯಿತು. ರಾಷ್ಟ್ರಪತಿಗಳು ಕೇಂದ್ರ ಸರ್ಕಾರದ ಯೋಜನೆ, ಸಾಧನೆ ಹಾಗೂ ದೇಶದ ಆರ್ಥಿಕತೆಯ ವಿವರಗಳನ್ನು ಓದಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುರುವಾರ(ಫೆ.1) ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಇದು ನಿರ್ಮಲಾ ಅವರು ಮಂಡಿಸಿರುವ ಆರನೇ ಬಜೆಟ್ ಆಗಿದೆ. ಲೋಕಸಭಾ ಚುನಾವಣೆ ಎಪ್ರಿಲ್-ಮೇನಲ್ಲಿ ನಡೆಯಲಿರುವುದರಿಂದ, ವಿತ್ತ ಸಚಿವೆ ಮಧ್ಯಂತರ ಬಜೆಟ್‌ ಮಂಡಿಸುತ್ತಿದ್ದಾರೆ. ಲೋಕಸಭಾ ಚುನಾವಣೆಯ ಬಳಿಕ ರಚನೆಯಾಗಲಿರುವ ನೂತನ ಸರಕಾರವು ಪೂರ್ಣ ಪ್ರಮಾಣದ ಬಜೆಟನ್ನು ಮಂಡಿಸಲಿದೆ.

ವಿಪಕ್ಷಗಳ ಸಂಸದರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ ಪ್ರಧಾನಿ ಮೋದಿ!

ಸಂಸತ್‌ನ ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ ಸಂಪ್ರದಾಯ ಎಂಬಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಈ ವೇಳೆ, ವಿಪಕ್ಷಗಳ ಸಂಸದರಿಗೆ ಪರೋಕ್ಷವಾಗಿ ಎಚ್ಚರಿಕೆ ಸಂದೇಶ ನೀಡಿದ್ದು, ಅಶಿಸ್ತು ತೋರದಂತೆ ತಿಳಿಸಿದ್ದಾರೆ.

“ಕಳೆದ 10 ವರ್ಷಗಳಲ್ಲಿ ಸಂಸದರು ಸಂಸತ್ತಿನಲ್ಲಿ ತಮಗಿಷ್ಟವಾದದ್ದನ್ನು ಮಾಡಿದ್ದಾರೆ. ಇವರನ್ನು ಅಪರಾಧಿಗಳು ಎಂದು ನಾನು ಕರೆಯಬೇಕೆ? ಪ್ರಜಾಪ್ರಭುತ್ವದ ಮರ್ಯಾದೆ ಕಳೆದಿದ್ದಾರೆ. ಇದು ಅವರ ಅಭ್ಯಾಸವಾಗಿರಬಹುದು, ಆದರೆ, ಒಂದು ಬಾರಿ ಸಂಸದರು ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಮುಂದಿನ ದಿನದಲ್ಲಿ ನಿಮ್ಮ ಕ್ಷೇತ್ರದಲ್ಲಿ ಈ ಬಗ್ಗೆ ಪ್ರಶ್ನೆ ಮಾಡಬಹುದು” ಎಂದು ಹೇಳಿದರು.

ಇದೇ ವೇಳೆ ಸಂಸತ್ತಿನಲ್ಲಿ ಅಂಗೀಕರಿಸಲಾದ ಮಹಿಳಾ ಮೀಸಲಾತಿ ಮಸೂದೆಯನ್ನು ಉಲ್ಲೇಖಿಸಿ ಮಾತನಾಡಿದ ಪ್ರಧಾನಿ ಮೋದಿ, “ಈ ವರ್ಷದ ಗಣರಾಜ್ಯೋತ್ಸವದಲ್ಲಿ ನಾವೆಲ್ಲರೂ ನಾರಿ ಶಕ್ತಿಗೆ ಸಾಕ್ಷಿಯಾಗಿದ್ದೇವೆ. ಇಂದು ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ನಾಳೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್​​​ ಮಂಡಿಸಲಿದ್ದಾರೆ. ಇದು ನಾರಿ ಶಕ್ತಿಯ ಹಬ್ಬ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...