ಬಜೆಟ್‌ ಅಧಿವೇಶನ | ಅಡಿಕೆ ಬೆಳೆಗಾರರಿಗೆ ಪರಿಹಾರ ನೀಡಲು ಸಾಧ್ಯವಿಲ್ಲ: ಚಲುವರಾಯಸ್ವಾಮಿ

Date:

ರಾಜ್ಯದಲ್ಲಿ ಅಡಿಕೆ ತೋಟಗಳಿಗೆ ಹಬ್ಬಿರುವ ಎಲೆ ಚುಕ್ಕಿ ಮತ್ತು ಹಳದಿ ರೋಗ ಬಾಧೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಅಡಿಕೆ ಬೆಳೆಗಾರರಿಗೆ ಯಾವುದೇ ರೀತಿಯ ಪರಿಹಾರ ನೀಡುವುದು ಸಾಧ್ಯವಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.

ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಪ್ರತಾಪ್ ಸಿಂಹ ನಾಯಕ್ ಕೆ. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಎಲೆ ಚುಕ್ಕಿ ಮತ್ತು ಹಳದಿ ರೋಗವನ್ನು ನಿಯಂತ್ರಣ ಮಾಡಲು ಎಲ್ಲಾ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದ್ದು, ಪರಿಹಾರ ನೀಡುವುದು ಸಾಧ್ಯವಿಲ್ಲ” ಎಂದರು.

“ಎಲೆ ಚುಕ್ಕಿ ಮತ್ತು ಹಳದಿ ರೋಗದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ರೋಗ ನಿಯಂತ್ರಣಕ್ಕೆ ಔಷಧಿ‌ ವಿತರಣೆ ಇನ್ನಿತರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಡಿಕೆ ಎಲೆ ಚುಕ್ಕೆ ರೋಗದಿಂದ ಒಟ್ಟು 53,977 ಹೆಕ್ಟೇರ್ ಪ್ರದೇಶವು ಹಾನಿಗೀಡಾಗಿದೆ ಮತ್ತು ಅಂದಾಜು 1,10,181.13 ಲಕ್ಷ ಆರ್ಥಿಕ ನಷ್ಟ ಉಂಟಾಗಿದೆ, ಅಡಿಕೆ ಹಳದಿ ಎಲೆ ರೋಗದಿಂದ ಒಟ್ಟು 13,767 ಹೆಕ್ಟೇರ್ ಪ್ರದೇಶ ಹಾನೀಡಾಗಿದೆ, ಅಂದಾಜು 56,233.25 ಲಕ್ಷ ಆರ್ಥಿಕ ನಷ್ಟ ಉಂಟಾಗಿದೆ ಎಂದು ಹೇಳಿದರು.
ಅಡಿಕೆಗೆ ಹಬ್ಬಿರುವ ಎಲೆ ಚುಕ್ಕಿ ಮತ್ತು ಹಳದಿ ರೋಗ ಬಾಧೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ರೈತರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಲಾಗುತ್ತಿದೆ” ಎಂದು ಸಚಿವರು ತಿಳಿಸಿದರು.

“ಎಲೆ ಚುಕ್ಕಿ ಮತ್ತು ಹಳದಿ ರೋಗ ಬಾಧೆಯಿಂದ ಅನುಭವಿಸುತ್ತಿರುವ ರೈತರ ಸಂಕಷ್ಟವನ್ನು ಕೇಂದ್ರದ ಗಮನಕ್ಕೆ ತಂದು ನೆರವು ಪಡೆಯಲು ಪ್ರಯತ್ನಿಸಲಾಗುವುದು ಈಗಾಗಲೇ ರೋಗ ತಡೆ ಕ್ರಮಗಳಿಗೆ 21 ಕೋಟಿ ಬಿಡುಗಡೆ ಮಾಡಲಾಗಿದೆ” ಎಂದು ಸದಸ್ಯರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

ಈ ಸುದ್ದಿ ಓದಿದ್ದೀರಾ? ಅಕ್ರಮ ಆಸ್ತಿ ಗಳಿಕೆ ಆರೋಪ; ಡಿಸಿಎಂ ಡಿ ಕೆ ಶಿವಕುಮಾರ್‌ ವಿರುದ್ಧ ಲೋಕಾಯುಕ್ತ ಎಫ್‌ಐಆರ್‌

5,11,208 ಎಕರೆ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿ

“ರಾಜ್ಯದಲ್ಲಿ ತೀವ್ರ ಬರಗಾಲದಿಂದ 5,11,208 ಎಕರೆ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ” ಎಂದು ಹೇಳಿದರು.

ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ನ ಸರವಣ ಪ್ರಶ್ನೆಗೆ ಉತ್ತರಿಸಿ, “ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ ಮಾರ್ಗಸೂಚಿಯ ಅನ್ವಯ ಪ್ರತಿ ಹೆಕ್ಟೇರ್ ತೋಟಗಾರಿಕೆ ಬೆಳೆ ನಷ್ಟಕ್ಕೆ ಮಳೆಯಾಶ್ರಿತ ಬೆಳೆಗಳಿಗೆ 8,500 ನೀರಾವರಿ ಬೆಳೆಗಳಿಗೆ 17,000 ಹಾಗೂ ಬಹುವಾರ್ಷಿಕ ಬೆಳೆಗಳಿಗೆ 22,500 ಪರಿಹಾರ ನಿಗದಿ ಮಾಡಲಾಗಿದೆ” ಎಂದರು.

“ಕೃಷಿ, ರೇಷ್ಮೆ ಮತ್ತು ತೋಟಗಾರಿಕೆ ಬೆಳೆ ಸೇರಿದಂತೆ ಬೆಳೆ ನಷ್ಟದಿಂದ ನೊಂದ ಪ್ರತಿ ರೈತರಿಗೆ ರೂ. 2,000 ರಂತೆ ಇಲ್ಲಿಯವರೆಗೆ 30,24,795 ರೈತರಿಗೆ ರೂ 573.28 ಕೋಟಿ‌ ಪರಿಹಾರದ ಮೊತ್ತವನ್ನು ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ಕೋಶದ ಮುಖಾಂತರ ವಿತರಿಸಲಾಗಿರುತ್ತದೆ” ಎಂದು ಹೇಳಿದರು.

“ಕೇಂದ್ರದಿಂದ ಪರಿಹಾರ ನೀಡುವಂತೆ ಮನವಿ ಮಾಡಲಾಗಿದ್ದು, ಪರಿಹಾರದ ಹಣ ಬಂದ ಕೂಡಲೇ ರೈತರಿಗೆ ಹಣ ಬಿಡುಗಡೆ ಮಾಡಲಾಗುವುದು ಅದು ಒಂದು ವಾರದೊಳಗೆ ರೈತರ ಖಾತೆಗೆ ಹಣ ಸೇರುವಂತೆ ‌ವ್ಯವಸ್ಥೆಯ‌ನ್ನು ಮಾಡಲಾಗಿದೆ” ಎಂದರು.

ರಾಜ್ಯದ ಒಂದು ಕೋಟಿಗೂ‌ ಹೆಚ್ಚು ರೈತರು ಬೆಳೆಹಾನಿಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ, ರಾಜ್ಯ ಸರ್ಕಾರ ಕೇಂದ್ರದ ಕಡೆ ಬೊಟ್ಟು ಮಾಡಿ ತೋರಿಸದೇ ಕೂಡಲೇ ರೈತರ ನೆರವಿಗೆ ಧಾವಿಸಿ ಪರಿಹಾರ ನೀಡುವಂತೆ ಸರವಣ ಆಗ್ರಹಿಸಿದರು.

ಪ್ರಶ್ನೆ ಕೇಳುವ ವೇಳೆ ಆಡಳಿತ ಪಕ್ಷದ ಸಚಿವರು ಸದಸ್ಯರು ನಗುತ್ತಿದ್ದಾಗ ಆಕ್ರೋಶಗೊಂಡ ಸರವಣ, ”ನಗುತ್ತಾ ರಾಜಕೀಯ ಮಾಡಬೇಡಿ‌ ನಮ್ಮ ಅಹವಾಲು ಕೇಳಿ ಇದೇ ಪ್ರಶ್ನೆಯನ್ನು ನಾಲ್ಕೈದು ಬಾರಿ‌ ಕೇಳಿದ್ದೇನೆ” ಎಂದಾಗ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಚಿವರಿಂದ ಸೂಕ್ತ ಉತ್ತರ ಕೊಡಿಸುವ ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...