ಬಜೆಟ್‌ ಅಧಿವೇಶನ | ಕೊಬ್ಬರಿ ಕುರಿತ ಚರ್ಚೆ: ಶಾಸಕರ ನಡುವೆ ವಾಕ್ಸಮರ

Date:

ವಿಧಾನಸಭೆಯ ಎರಡನೇ ದಿನದ ಕಲಾಪದಲ್ಲಿ ಕೊಬ್ಬರಿ ಬೆಲೆ ಕುಸಿತ ಮತ್ತು ಖರೀದಿ ಕೇಂದ್ರ ಸ್ಥಗಿತ ವಿಷಯವಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರ ನಡುವೆ ವಾಕ್ಸಮರ ನಡೆಯಿತು.

ಕಲಾಪದಲ್ಲಿ ಕೊಬ್ಬರಿ ಬೆಲೆ ಕುಸಿತ ಹಾಗೂ ಖರೀದಿ ಕೇಂದ್ರ ಸ್ಥಗಿತವಾಗಿರುವ ಕುರಿತು ಚರ್ಚಿಸಲು ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರು ನಿಲುವಳಿ ಸೂಚನೆ ನೀಡಿದರು.

ವಿಧಾನಮಂಡಲ ಬಜೆಟ್ ಅಧಿವೇಶನದ ಎರಡನೇ ದಿನವಾದ ಇಂದಿನ ಕಾರ್ಯಕಲಾಪಗಳಲ್ಲಿ ಕೊಬ್ಬರಿ ಬೆಂಬಲ ಬೆಲೆ ಪ್ರಧಾನವಾಗಿ ಚರ್ಚೆಯಾಯಿತು. ಹಲವಾರು ನಾಯಕರು ವಿಶೇಷವಾಗಿ ಕೆಎಂ ಶಿವಲಿಂಗೇಗೌಡ, ಬಿಜೆಪಿಯ ಸುರೇಶ್ ಗೌಡ ಮತ್ತು ಜೆಡಿಎಸ್ ಪಕ್ಷದ ಹೆಚ್ ಡಿ ರೇವಣ್ಣ ನಡುವೆ ಕಾವೇರಿದ ವಾಗ್ವಾದ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್‌ ಶಾಸಕ ಶಿವಲಿಂಗೇಗೌಡ, “ಕೊಬ್ಬರಿ ಖರೀದಿ ಮಾಡಲು ಡಿ ಕೆ ಶಿವಕುಮಾರ್‌ಗೆ ಅಧಿಕಾರವಿಲ್ಲ, ಖರೀದಿ ಮಾಡುವ ಅಧಿಕಾರ ಇರೋದು ಪ್ರಧಾನಿ ಮೋದಿಗೆ ಮಾತ್ರ” ಎಂದರು.

ಶಿವಲಿಂಗೇಗೌಡರ ಹೇಳಿಕೆ ವಾಕ್ಸಮರಕ್ಕೆ ಕಾರಣವಾಯಿತು. ಬಿಜೆಪಿ, ಜೆಡಿಎಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ರೈತರ ಸಮಸ್ಯೆ ಬಗ್ಗೆ ಮಾತಾಡುವಾಗ ರಾಜಕೀಯ ಬೇಡ ಎಂದು ಶಾಸಕ ಸುರೇಶ್ ಗೌಡ ಮನವಿ ಮಾಡಿದರು.

“ಯಾರ ಮನೆಯಿಂದಲೂ ರೈತರಿಗೆ ಹಣ ಕೊಡೋದಿಲ್ಲ, ಯಾವುದೇ ಸರಕಾರ ಕೊಟ್ಟರೂ ಸರಕಾರದಿಂದಲೇ ಹಣ ಕೊಡಬೇಕು. ರೈತರ ಪರವಾಗಿ ಇಲ್ಲಿ ಮಾತಾಡಿ” ಎಂದು ಶಾಸಕ ಸುರೇಶ್ ಗೌಡ ಒತ್ತಾಯಿಸಿದರು.

ಆ ನಂತರ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ”ಕೊಬ್ಬರಿ ಬಹಳ ಸೂಕ್ಷ್ಮ ವಿಷಯ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಒಟ್ಟಿಗೆ ಸೇರಿ ಚರ್ಚೆ ಮಾಡಿ ಒಂದು ತೀರ್ಮಾನಕ್ಕೆ ಬರಬೇಕು” ಎನ್ನುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...