ಮೂತ್ರ ವಿಸರ್ಜಿಸಿದ ಬಿಜೆಪಿ ಆರೋಪಿಯ ಮನೆ ಧ್ವಂಸಗೊಳಿಸಿದ ಮಧ್ಯಪ್ರದೇಶ ಸರ್ಕಾರ

Date:

ಮೂತ್ರ ವಿಸರ್ಜನೆ ಪ್ರಕರಣದ ಆರೋಪಿ ಪ್ರವೇಶ್ ಶುಕ್ಲಾ ಅವರ ನಿವಾಸದ ಒಂದು ಭಾಗವನ್ನು ಮಧ್ಯ ಪ್ರದೇಶ ಸರ್ಕಾರದ ಆದೇಶದ ಮೇರೆಗೆ ಧ್ವಂಸಗೊಳಿಸಲಾಗಿದೆ.

ಮಂಗಳವಾರ ಆದಿವಾಸಿ ವ್ಯಕ್ತಿಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಬಂಧನದ ನಂತರ, ಜಿಲ್ಲಾ ಮ್ಯಾಜಿಸ್ಟ್ರೇಟ್ ಸಾಕೇತ್ ಮಾಳವಿಯಾ ಅವರು ಶುಕ್ಲಾ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯಿದೆ (ಎನ್‌ಎಸ್‌ಎ) ಅನ್ನು ಜಾರಿಗೊಳಿಸಲಾಗಿದೆ.

ಎನ್‌ಎಸ್‌ಎ ಜಾರಿಗೊಳಿಸುವುದಾಗಿ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್ ನಿನ್ನೆ ಟ್ವೀಟ್‌ (ಜುಲೈ 5) ಮೂಲಕ ತಿಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ತಮ್ಮ ಆದೇಶದಲ್ಲಿ “ಆರೋಪಿ ಪ್ರವೇಶ್ ಶುಕ್ಲಾನನ್ನು ಎನ್‌ಎಸ್‌ಎ ಅಡಿಯಲ್ಲಿ ಬಂಧಿಸಲಾಗಿದ್ದು, ಆತನನ್ನು ರೇವಾ ಸೆಂಟ್ರಲ್ ಜೈಲಿನಲ್ಲಿ ಇರಿಸಲಾಗಿದೆ. ಅಲ್ಲದೆ ಎನ್‌ಎಸ್‌ಎ ಆದೇಶದ ನಂತರ ಬುಲ್ಡೋಜರ್‌ಗಳು ಶುಕ್ಲಾ ಅವರ ಮನೆಗೆ ಆಗಮಿಸಿದವು. ಅವರ ಕುಟುಂಬದ ಸದಸ್ಯರು ಆಸ್ತಿಯು ಕುಟುಂಬದ ಇತರ ಸದಸ್ಯರಿಗೆ ಸೇರಿದ್ದು ಎಂದು ಪ್ರತಿಭಟಿಸಿದರು. ಆದರೆ 400 ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಿಸಲಾಗಿದ್ದ ಅಕ್ರಮ ಅತಿಕ್ರಮಣಗಳನ್ನು ಮಾತ್ರ ಕೆಡವಲಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಧ್ಯಪ್ರದೇಶ: ಆದಿವಾಸಿ ಯುವಕನ ಮೇಲೆ ಬಿಜೆಪಿ ಶಾಸಕನ ಬೆಂಬಲಿಗನಿಂದ ಮೂತ್ರ ವಿಸರ್ಜನೆ 

ಬುಲ್ಡೋಜರ್‌ ಕ್ರಮದ ಬಗ್ಗೆ ಟ್ವೀಟ್‌ ಮಾಡಿರುವ ಮಧ್ಯಪ್ರದೇಶ ಮುಖ್ಯಮಂತ್ರಿಗಳ ಕಚೇರಿ, ಎನ್ಎಸ್ಎಯನ್ನು ಆಹ್ವಾನಿಸಿ ಬುಲ್ಡೋಜರ್ ಅನ್ನು ಓಡಿಸಲಾಗಿದೆ. ಅಗತ್ಯವಿದ್ದರೆ, ಅಧಿಕಾರಿಗಳು ಅಪರಾಧಿಗಳಿಗೆ ತಕ್ಕ ದಂಡನೆಯನ್ನು ನೀಡಲು ಸಿದ್ದರಿದ್ದಾರೆ. ಮಧ್ಯಪ್ರದೇಶ ಸರ್ಕಾರದ ಸಂದೇಶ ಸ್ಪಷ್ಟವಾಗಿದೆ. ರಾಜ್ಯದಲ್ಲಿ ತಪ್ಪು ಮಾಡಲು ಉದ್ದೇಶಿಸುವವರು 10 ಸಾರಿ ಯೋಚಿಸಬೇಕು” ಎಂದು ಎಚ್ಚರಿಕೆ ನೀಡಿದೆ.

ಸಿಎಂ ಸೂಚನೆಯ ಮೇರೆಗೆ, ಆರೋಪಿಯ ವಿರುದ್ಧ ಬಹಾರಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ಗಳು 294, 504, ಸೆಕ್ಷನ್ 3(1) ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಯ್ದೆ ಮತ್ತು ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಿಜೆಪಿ ಶಾಸಕ ಕೇದಾರ್ ನಾಥ್ ಶುಕ್ಲಾ ಅವರ ಬೆಂಬಲಿಗ ಪ್ರವೇಶ್ ಶುಕ್ಲಾ ಆದಿವಾಸಿ ಬುಡಕಟ್ಟು ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಇದು ದೇಶದಲ್ಲಡೆ ಆಕ್ರೋಶಕ್ಕೆ ಕಾರಣವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...