ಬಸ್‌ ಚಾಲಕರ ನೇಮಕ ವಿವಾದ | ಕೇಂದ್ರದ ಮೇಲೆ ಗೂಬೆ ಕೂರಿಸುವ ಸಿಎಂ ಭಂಡತನಕ್ಕೆ ಏನು ಹೇಳೋಣ: ಆರ್‌ ಅಶೋಕ್‌ ಕಿಡಿ

Date:

“ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಟ್ವೀಟ್ (ಎಕ್ಸ್‌ ಪೋಸ್ಟ್‌) ನಾಚಿಕೆಗೇಡಿತನದ ಪರಮಾವಧಿಯೋ ಅಥವಾ ನಾನಿನ್ನೂ ಸಿಎಂ ಕುರ್ಚಿಯಲ್ಲಿ ಕೂತಿದ್ದೇನೆ ಎಂದು ತೋರಿಸುವ ಅನಿವಾರ್ಯತೆಯೋ ಅರ್ಥವಾಗುತ್ತಿಲ್ಲ” ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ತಿರುಗೇಟು ನೀಡಿದ್ದಾರೆ.

‘ಕರ್ನಾಟಕದ ಯುವಕರಿಗೆ ಮೋಸ, ಮಲಯಾಳಿ ಯುವಕರಿಗೆ ಕೆಲಸ’ ಎಂದು ಎಕ್ಸ್‌ ತಾಣದಲ್ಲಿ ಟೀಕಿಸಿದ್ದ ಆರ್ ಅಶೋಕ್‌ಗೆ ಸಿದ್ದರಾಮಯ್ಯ ಕಟುವಾಗಿ ಪ್ರತಿಕ್ರಿಯಿಸಿದ್ದರು. ಇದಕ್ಕೆ ಪ್ರತಿಯಾಗಿ ಅಶೋಕ್‌ ಮತ್ತೆ ಟ್ವೀಟ್‌ ಮಾಡಿ ಉತ್ತರಿಸಿದ್ದಾರೆ.

“ನಿಮ್ಮ ರೀತಿಯ ಅಹಂಕಾರದ ಮಾತುಗಳು ನನಗೆ ಬರುವುದಿಲ್ಲ, ಅದು ನನಗೆ ಬೇಡವೂ ಬೇಡ. ಆದರೆ ಜೂನ್ 4ರಂದು ಯಾರು ಯಾರಿಗೆ ದೊಣ್ಣೆ ಕೊಟ್ಟು ಹೊಡಿಸಿಕೊಳ್ಳುತ್ತಾರೆ, ಜೂನ್ 4 ರ ನಂತರ ಬಡಿಗೆಯಿಂದ ಹೊಡೆದು ಯಾರು ಯಾರನ್ನ ಕುರ್ಚಿಯಿಂದ ಕೆಳಗಿಳಿಸುತ್ತಾರೆ ನೋಡೋಣ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಾವು ಅಪರೂಪಕ್ಕೆ ತಮ್ಮ ಗಾಢ ನಿದ್ದೆಯಿಂದ ಎದ್ದು ನನ್ನ ಒಂದು ಟೀಕೆಗೆ ಉತ್ತರ ನೀಡುವ ಶ್ರಮ ತೆಗೆದುಕೊಂಡಿದ್ದೀರಿ. ಮೊದಲು ಅದಕ್ಕೆ ಅಭಿನಂದನೆಗಳು. ಆದರೆ ಅದರಲ್ಲೂ ಮೈಯೆಲ್ಲಾ ಎಣ್ಣೆ ಸವರಿಕೊಂಡಿರುವಂತೆ ತಮ್ಮ ಕರ್ತವ್ಯದಿಂದ ಜಾರಿಕೊಂಡು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತೀರಲ್ಲ ತಮ್ಮ ಭಂಡತನಕ್ಕೆ ಏನು ಹೇಳಬೇಕು” ಎಂದು ಪ್ರಶ್ನಿಸಿದ್ದಾರೆ.

“ಪತ್ರಿಕೆಗಳಲ್ಲಿ ಹತ್ತಾರು ಕೋಟಿ ಖರ್ಚು ಮಾಡಿ ಪುಟಗಟ್ಟಲೆ ಜಾಹೀರಾತು ಕೊಡುವಾಗ ಅದು ನಿಮ್ಮ ಯೋಜನೆ. ಹಸಿರು ಬಾವುಟ ತೋರಿಸಿ ಬಸ್ಸಿಗೆ ಚಾಲನೆ ನೀಡುವಾಗ ಅದು ತಮ್ಮ ಸರ್ಕಾರದ ಕೊಡುಗೆ. ಆದರೆ ಅದರಲ್ಲಿ ನ್ಯೂನತೆಗಳು ಕಂಡು ಬದರೆ ಅದು ಕೇಂದ್ರ ಸರ್ಕಾರದ ಹೊಣೆ. ಇದು ಯಾವ ಸೀಮೆ ಆಡಳಿತ ಸ್ವಾಮಿ? ತಮಗೆ ಕರ್ನಾಟಕದ ಜನತೆ ಅಧಿಕಾರ ಕೊಟ್ಟಿರುವುದು ಎಲ್ಲದಕ್ಕೂ ಕೇಂದ್ರ ಸರ್ಕಾರವನ್ನು ದೂಷಿಸುತ್ತಾ ಕೈಚೆಲ್ಲಿ ಕುಳಿತುಕೊಳ್ಳಲಿ ಅಂತ ಅಲ್ಲ” ಎಂದು ಕುಟುಕಿದ್ದಾರೆ.

“ನಿಮಗೆ ನಿಜವಾಗಿಯೂ ಕನ್ನಡಿಗರಿಗೆ ಉದ್ಯೋಗ ಸಿಗಬೇಕು ಎನ್ನುವ ಬದ್ಧತೆ ಇದ್ದಿದ್ದರೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವರಿಕೆ ಮಾಡಿಕೊಡಬಹುದಿತ್ತಲ್ಲ? ಎಲ್ಲದಕ್ಕೂ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವ ತಾವು, ಎಲ್ಲದಕ್ಕೂ ಕೇಂದ್ರ ಮಂತ್ರಿಗಳಿಗೆ ಮನವಿ ಪತ್ರ ಕೊಡುವ ತಾವು ಇದಕ್ಕೆ ಮಾತ್ರ ಯಾಕೆ ಮಾಡಲಿಲ್ಲ. ಅಸಲಿಗೆ ನಾನು ಈ ವಿಷಯ ಪ್ರಸ್ತಾಪ ಮಾಡುವವರೆಗೂ ನಿಮಗೆ ಈ ವಿಷಯ ಗೊತ್ತೇ ಇರಲಿಲ್ಲ. ಇದು ನಿಮ್ಮ ಆಡಳಿತ ವೈಖರಿ” ಎಂದು ಟೀಕಿಸಿದ್ದಾರೆ.

“ನಾಲ್ಕು ಅಹಂಕಾರದ ಮಾತುಗಳು ಆಡಿದ ಮಾತ್ರಕ್ಕೆ ವಿಪಕ್ಷಗಳ ಬಾಯಿ ಮುಚ್ಚಿಸಬಹುದು ಎಂದು ತಿಳಿದಿದ್ದರೆ ಅದು ತಮ್ಮ ಭ್ರಮೆ. ನಿಮ್ಮ ಭ್ರಮಾಲೋಕ ವಾಸ ಮುಂದುವರೆಯಲಿ, ಆಲ್ ದಿ ಬೆಸ್ಟ್!” ಎಂದು ಸಿದ್ದರಾಮಯ್ಯಗೆ ಅಶೋಕ್‌ ಲೇವಡಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...