ಮನರಂಜನೆಗಾಗಿ ಚಾಲಕನಿಂದ ಕೊಡೆ ಹಿಡಿದು ಬಸ್‌ ಚಾಲನೆ : ಸಾರಿಗೆ ಇಲಾಖೆ ಸ್ಪಷ್ಟನೆ

Date:

ಮಳೆ ಬರುತ್ತಿರುವಾಗ ಚಾಲಕನೋರ್ವ ಕೊಡೆ ಹಿಡಿದುಕೊಂಡು ಬಸ್‌ ಚಾಲನೆ ಮಾಡಿದ ಕುರಿತಾಗಿ ಸ್ಪಷ್ಟೀಕರಣ ನೀಡಿರುವ ಸಾರಿಗೆ ಇಲಾಖೆ, ಮನರಂಜನೆಗಾಗಿ ಚಾಲಕ ಕೊಡೆ ಹಿಡಿದು ಬಸ್‌ ಚಾಲನೆ ಮಾಡಿದ್ದಾರೆ. ಚಾಲಕರ ಮೇಲಿನ ಛಾವಣಿಯಾಗಲೀ, ಪ್ರಯಾಣಿಕರು ಕುಳಿತುಕೊಳ್ಳುವ ಸ್ಥಳದ ಛಾವಣಿಯಲ್ಲಾಗಲೀ ಯಾವುದೇ ಸೋರಿಕೆ (Roof Leakage) ಇರಲಿಲ್ಲ ಎಂದು ತಿಳಿಸಿದೆ.

ಹುಬ್ಬಳ್ಳಿಯಲ್ಲಿರುವ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದ್ದು,”ಮಳೆ ಬರುತ್ತಿರುವಾಗ ಚಾಲಕರ ಕೊಡೆ ಹಿಡಿದುಕೊಂಡು ಬಸ್‌ ಚಾಲನೆ ಮಾಡಿದ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಮನರಂಜನೆಗಾಗಿ ಈ ರೀತಿ ಮಾಡಿದ್ದಾರೆ. ಬಸ್ಸಿನಲ್ಲಿ ಛತ್ರಿ ಹಿಡಿದು ರೀಲ್ಸ್ ಮಾಡಿದ ಚಾಲಕ ಮತ್ತು ನಿರ್ವಾಹಕಿ ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ” ಎಂದು ತಿಳಿಸಿದೆ.

ಸ್ಪಷ್ಟನೆಯಲ್ಲಿ ಏನಿದೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧಾರವಾಡ ಘಟಕದ ಬೇಟಗೇರಿ-ಧಾರವಾಡ ಮಾರ್ಗದಲ್ಲಿ ಸಂಚರಿಸುವ ಬಸ್‌ನಲ್ಲಿ ಚಾಲಕರಾಗಿ ಹನುಮಂತಪ್ಪ ಎ ಕಿಲ್ಲೇದಾರ ಹಾಗೂ ನಿರ್ವಾಹಕರಾಗಿ ಅನಿತಾ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಮಳೆ ಬರುತ್ತಿದ್ದಾಗ ಸಂಜೆ ಬಸ್ಸಿನಲ್ಲಿ ಪ್ರಯಾಣಿಕರು ಇಲ್ಲದೇ ಇದ್ದಾಗ ಚಾಲಕರು ಮನೋರಂಜನೆಗಾಗಿ ನಿರ್ವಾಹಕರ ಬಳಿ ಇದ್ದ ಕೊಡೆಯನ್ನು ಪಡೆದು ಹಿಡಿದುಕೊಂಡು ಬಸ್‌ ಚಾಲನೆ ಮಾಡಿದ್ದಾರೆ. ಚಾಲನೆ ಮಾಡುತ್ತಿರುವ ದೃಶ್ಯವನ್ನು ನಿರ್ವಾಹಕಿ ಮೊಬೈಲಿನಲ್ಲಿ ಸೆರೆ ಹಿಡಿದಿದ್ದಾರೆ.

ಮಳೆ ಬರುತ್ತಿದ್ದಾಗ ಚಾಲಕರ ಮೇಲಿನ ಛಾವಣಿಯಾಗಲೀ, ಪ್ರಯಾಣಿಕರು ಕುಳಿತುಕೊಳ್ಳುವ ಸ್ಥಳದ ಛಾವಣಿಯಿಂದ ಸೋರುತ್ತಿರಲಿಲ್ಲ. ವಾಹನದ ಛಾವಣಿ ಸೋರಿಕೆ ಬಗ್ಗೆ ಚಾಲಕ, ನಿರ್ವಾಹಕರ, ಪ್ರಯಾಣಿಕರ ಯಾವುದೇ ದೂರು ಸಹ ದಾಖಲಾಗಿಲ್ಲ. ವಾಹನವನ್ನು ವಿಭಾಗದ ತಾಂತ್ರಿಕ ಶಿಲ್ಪಿಗಳಿಂದ ಪರಿಶೀಲನೆ ಮಾಡಲಾಗಿದ್ದು, ಮೇಲ್ಚಾವಣಿ ಸೋರುತ್ತಿಲ್ಲ ಎನ್ನುವುದನ್ನು ಖಚಿತಪಡಿಸಲಾಗಿದೆ.

ಈ ವಿಡಿಯೋದ ಬಗ್ಗೆ ಸಿಬ್ಬಂದಿಯಿಂದ ಸ್ಪಷ್ಟೀಕರಣ ಪಡೆಯಲಾಗಿದ್ದು ಇದು ಕೇವಲ ಮನೋರಂಜನೆಗಾಗಿ ಮಾಡಿದ ವಿಡಿಯೋ ಚಿತ್ರೀಕರಣವಾಗಿರುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

ರಾಜಕೀಯಕ್ಕೆ ಬಳಸಿಕೊಂಡಿದ್ದ ಬಿಜೆಪಿ

ಈ ವಿಡಿಯೋವನ್ನು ಇಟ್ಟುಕೊಂಡು ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್, ಅಶ್ವತ್ ನಾರಾಯಣ ಟ್ವೀಟ್ ಮಾಡಿ, ಸರ್ಕಾರದ ವಿರುದ್ಧ ಮುಗಿಬಿದ್ದಿದ್ದರು.

“ದೇಶದಲ್ಲೇ ಅತ್ಯುತ್ತಮ ಸಾರ್ವಜನಿಕ ಸಾರಿಗೆ ಎಂಬ ಹೆಗ್ಗಳಿಕೆ ಹೊಂದಿರುವ ನಮ್ಮ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಕಾಂಗ್ರೆಸ್‌ ಸರ್ಕಾರ ಎಂತಹ ಪರಿಸ್ಥಿತಿ ತಂದಿಟ್ಟಿದೆ ನೋಡಿ. ಬಸ್‌ ಚಾಲಕರು ಛತ್ರಿ ಹಿಡಿದು ವಾಹನ ಚಲಾಯಿಸುವ ದೃಶ್ಯ ಕಾಂಗ್ರೆಸ್‌ ಸರ್ಕಾರದ ದುರಾಡಳಿತಕ್ಕೆ ಹಿಡಿದ ಕೈಗನ್ನಡಿಯಂತಿದೆ. ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿಯವರೇ, ಇಂತಹ ಬಸ್‌ಗಳನ್ನು ರಸ್ತೆಗೆ ಬಿಡುವಷ್ಟು ದುಃಸ್ಥಿತಿ ತಲುಪಿದೆಯೇ ನಮ್ಮ ಸಾರಿಗೆ ಇಲಾಖೆ?” ಎಂದು ಪ್ರಶ್ನಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...