ಬಸ್ ದರ ಏರಿಕೆ | ಬಿಜೆಪಿ ಸರ್ಕಾರದ ಅವಧಿಯ ‘ದರ ಏರಿಕೆ’ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್‌

Date:

ಸರ್ಕಾರಿ ಬಸ್‌ ಪ್ರಯಾಣ ದರವನ್ನು 15% ಏರಿಕೆ ಮಾಡಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ದರ ಏರಿಕೆಯನ್ನು ಪ್ರಶ್ನಿಸುವ ನೈತಿಕತೆ ಬಿಜೆಪಿಗಿಲ್ಲ. ಬಿಜೆಪಿ ಸರ್ಕಾರವೇ ಸಾರಿಗೆ ಇಲಾಖೆ ಮೇಲೆ ಹೊರಿಸಿರುವ ಸಾಲದಿಂದ ಹೊರಬರಲು ಬೆಲೆ ಏರಿಕೆ ಅಗತ್ಯವಾಗಿದೆ ಎಂದು ಕಾಂಗ್ರೆಸ್‌ ವಾದಿಸುತ್ತಿದೆ. ಈ ನಡುವೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಏರಿಕೆಯಾಗಿದ್ದ ಬಸ್‌ ಪ್ರಯಾಣ ದರಗಳ ಪಟ್ಟಿಯನ್ನೂ ಬಿಡುಗಡೆ ಮಾಡಿದೆ.

ವಿಪಕ್ಷ ನಾಯಕ ಆರ್‌ ಅಶೋಕ್‌ ನೇತೃತ್ವದಲ್ಲಿ ಬಿಜೆಪಿಗರು ಬೆಂಗಳೂರಿನ ಮೆಜೆಸ್ಟಿಕ್ ಬಸ್‌ ನಿಲ್ದಾಣದಲ್ಲಿ ಪ್ರಯಾಣ ದರ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಆದರೆ, ಇದೇ ಆರ್‌ ಅಶೋಕ್ ಅವರು ಸಾರಿಗೆ ಸಚಿವರಾಗಿದ್ದಾಗ ಐದು ವರ್ಷಗಳಲ್ಲಿ 7 ಬಾರಿ ದರ ಏರಿಕೆ ಮಾಡಿ, 47.8% ಹೆಚ್ಚಿಸಿದ್ದರು ಎಂದು ಕಾಂಗ್ರೆಸ್‌ ಆರೋಪಿಸಿದೆ. ಅದರ ಪಟ್ಟಿ ಬಿಡುಗಡೆ ಮಾಡಿದೆ.

image 37

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಬಿಜೆಪಿ ಸರ್ಕಾರದಲ್ಲಿ ಏರಿಕೆಯಾಗಿದ್ದ ದರಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಆ ಪಟ್ಟಿ ಹೀಗಿದೆ;

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಿನಾಂಕ ಮತ್ತು ಶೇಕಡಾವಾರು
29/8/2008 – 12.01%
7/7/2009 – 3.56%
3/3/2010 – 4.76%
23/6/2010 – 3.50%
26/6/2011 – 6.95%
19/12/2011 – 5.01%
30/09/2012 – 12%

ಅಲ್ಲದೆ, 2020 ಫೆಬ್ರವರಿ 26ರಂದು ಬಿಜೆಪಿ ಸರ್ಕಾರ 12% ಪ್ರಯಾಣ ದರ ಏರಿಕೆ ಮಾಡಿತ್ತು.

ಈ ವರದಿ ಓದಿದ್ದೀರಾ?: ಬಸ್‌ ಟಿಕೆಟ್‌ ದರ ಏರಿಕೆ | ಸಾರ್ವಜನಿಕರ ಆಕ್ರೋಶ – ಸರ್ಕಾರದ ಸಮರ್ಥನೆ

ಸದ್ಯ, ಶಕ್ತಿ ಯೋಜನೆ ಜಾರಿಯಲ್ಲಿದ್ದು, ಮಹಿಳೆಯರಿಗೆ ದರ ಏರಿಕೆ ಪರಿಣಾಮ ಬೀರುವುದಿಲ್ಲ. ಆದರೆ, ಪುರುಷರ ಮೇಲೆ ಪರಿಣಾಮ ಬೀರಲಿದೆ. ಆ ಕಾರಣಕ್ಕಾಗಿಯೇ, ಶಕ್ತಿಯೋಜನೆ ಹಣ ಸರಿದೂಗಿಸಲು ಸರ್ಕಾರ ಇಂತಹ ಕ್ರಮ ಕೈಗೊಳ್ಳುತ್ತಿದೆ ಎಂದು ಬಿಜೆಪಿ ಮೊದಲಿನಿಂದಲೂ ಆರೋಪಿಸುತ್ತಿದೆ. ಈ ಆರೋಪವನ್ನು ಕಾಂಗ್ರೆಸ್‌ ಅಲ್ಲಗಳೆಯುತ್ತಲೇ ಬಂದಿದೆ. ಶಕ್ತಿ ಯೋಜನೆಯನ್ನು ನಾವು ಭರವಸೆ ಕೊಟ್ಟಂತೆ ಜಾರಿಗೆ ಮಾಡಿದ್ದೇವೆ. ಇಂತಹ ಜನಪ್ರಿಯ ಯೋಜನೆಯ ವಿರುದ್ಧ ಬಿಜೆಪಿ ಅನಗತ್ಯ ಆರೋಪ ಮಾಡುತ್ತಿದೆ. ಶಕ್ತಿ ಯೋಜನೆಯಂತಹ ಯೋಜನೆಗಳು ಜಾರಿಯಲ್ಲಿಲ್ಲದ ರಾಜ್ಯಗಳೂ ಬೆಲೆ ಏರಿಕೆ ಮಾಡುತ್ತವೆ. ಶಕ್ತಿ ಯೋಜನೆಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ. ಹಿಂದಿನ ಬಿಜೆಪಿ ಸರ್ಕಾರವೇ ಮಾಡಿರುವ ಸಾಲದ ಹೊರೆ ಮತ್ತು ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸಲು ಬೆಲೆ ಏರಿಕೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್‌ ಹೇಳುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...