2026ರ ವೇಳೆಗೆ 175 ಕಿ.ಮೀ ನೂತನ ಮೆಟ್ರೋ ಮಾರ್ಗ ಸಾರ್ವಜನಿಕರ ಸೇವೆಗೆ ಲಭ್ಯ: ಡಿ ಕೆ ಶಿವಕುಮಾರ್

Date:

2025ರ ವೇಳೆಗೆ ಸುಮಾರು 30 ಕಿ.ಮೀ ಹಾಗೂ 2026ರ ವೇಳೆಗೆ 175 ಕಿ.ಮೀ ನೂತನ ಮೆಟ್ರೋ ಮಾರ್ಗಗಳನ್ನು ಸಾರ್ವಜನಿಕರ ಸೇವೆಗೆ ನೀಡಲಾಗುವುದು ಎಂದು ಡಿಸಿಎಂ ಡಿ‌ ಕೆ ಶಿವಕುಮಾರ್ ಹೇಳಿದರು.

ಮೆಟ್ರೋ ಹಸಿರು ಮಾರ್ಗದಲ್ಲಿ ನಾಗಸಂದ್ರದಿಂದ ತುಮಕೂರು ರಸ್ತೆಯ ಮಾದಾವರ ( ಬೆಂಗಳೂರು ಅಂತರರಾಷ್ಟ್ರೀಯ ಮತ್ತು ಪ್ರದರ್ಶನ ಕೇಂದ್ರ)ದ ತನಕ ವಿಸ್ತರಣೆ ಮಾಡಿರುವ ನೂತನ ಮಾರ್ಗದಲ್ಲಿ ಪ್ರಾಯೋಗಿಕ ಮೆಟ್ರೋ ರೈಲು ಸಂಚಾರವನ್ನು ಬುಧವಾರ ಪರಿಶೀಲನೆ ಮಾಡಿ ಮಾತನಾಡಿದರು. ಈ ವೇಳೆ ಸಂಸದ ತೇಜಸ್ವಿ ಸೂರ್ಯ, ನೆಲಮಂಗಲ ಶಾಸಕ ಶ್ರೀನಿವಾಸಯ್ಯ, ದಾಸರಹಳ್ಳಿ ಶಾಸಕ ಮುನಿರಾಜು ಅವರ ಜೊತೆ ಯಶವಂತರಪುರ ಮೆಟ್ರೋ ರೈಲು ನಿಲ್ದಾಣದಿಂದ ಮಾದಾವರದ ತನಕ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು.

ಮೆಟ್ರೋ ಮೂರನೇ ಹಂತಕ್ಕೆ ಒಪ್ಪಿಗೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗಾಗಲೇ ₹ 1,130 ಕೋಟಿ ವೆಚ್ಚದಲ್ಲಿ 21 ಹೊಸ ರೈಲುಗಳಿಗೆ ಹರಾಜು ಪ್ರಕ್ರಿಯೆ ನಡೆಸಿ ಹಣ ಕಟ್ಟಲಾಗಿದೆ. ಹೊಸ ರೈಲುಗಳು ಆದಷ್ಟು ಬೇಗ ಸೇವೆಗೆ ಲಭ್ಯವಾಗಲಿವೆ. ಮೆಟ್ರೋ ಮಾರ್ಗದ ಒಂದು ಹಾಗೂ ಎರಡನೇ ಹಂತಗಳನ್ನು ನಾವು ಪೂರ್ಣಗೊಳಿಸಿದ್ದು, ಮೂರನೇ ಹಂತಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ” ಎಂದರು.

“ನಾಗಸಂದ್ರದಿಂದ ಮೂರು ಕಿಮೀ ದೂರವಿರುವ ಮಾದಾವರದ ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ವರೆಗೆ ವಿಸ್ತರಿತ ನೂತನ ಮಾರ್ಗವನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಪ್ರಾಯೋಗಿಕವಾಗಿ ಉದ್ಘಾಟನೆ ಮಾಡಲಾಗಿದೆ‌. ನಾನು ಈ ಹಿಂದೆ ನಗರಾಭಿವೃದ್ಧಿ ಸಚಿವನಾಗಿದ್ದಾಗ ಈ ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ ಯೋಜನೆಗೆ ಒಪ್ಪಿಗೆ ನೀಡಿದ್ದೆ. ಮುಂದಿನ ದಿನಗಳಲ್ಲಿ ಎಲ್ಲ ಸಂಸದರು ಹಾಗೂ ಇತರೇ ಜನಪ್ರತಿನಿಧಿಗಳನ್ನು ಆಹ್ವಾನಿಸಿ ವಿಸ್ತರಿತ ಮೆಟ್ರೋ ಮಾರ್ಗವನ್ನು ಅಧಿಕೃತವಾಗಿ ಉದ್ಘಾಟನೆ ಮಾಡಲಾಗುವುದು” ಎಂದು ತಿಳಿಸಿದರು.

“ಉಪಚುನಾವಣೆ ಇರುವ ಕಾರಣಕ್ಕೆ ಸಿದ್ದರಾಮಯ್ಯ ಅವರು ಒಂದು ವಾರಗಳ ಕಾಲಾವಕಾಶ ಕೇಳಬಹುದಿತ್ತು. ಆದರೆ, ಅಧಿಕಾರದಲ್ಲಿದ್ದುಕೊಂಡು ಅವಕಾಶವನ್ನು ದುರುಪಯೋಗ ಮಾಡಿಕೊಳ್ಳಬಾರದು ಎಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ” ಎಂದು ಹೇಳಿದರು.

ಸಚಿವ ಆರ್ ಬಿ ತಿಮ್ಮಾಪುರ ವಿರುದ್ಧ ದೂರು ರಾಜಕೀಯ ಬಣ್ಣ

ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ವಿರುದ್ಧ ರಾಜ್ಯಪಾಲರಿಗೆ ರಾಜ್ಯದ ಬಾರ್ ಮಾಲೀಕರು ದೂರು ನೀಡಿರುವ ಬಗ್ಗೆ ಕೇಳಿದಾಗ “ಆಡಳಿತಾತ್ಮಕ ವಿಚಾರದಲ್ಲಿ ಯಾರು ಬೇಕಾದರೂ ರಾಜ್ಯಪಾಲರಿಗೆ ದೂರನ್ನು ನೀಡಬಹುದು. ಈ ಹಿಂದೆಯೂ ನೂರಾರು ದೂರುಗಳು ಬಂದಿದ್ದವು. ಈಗ ಇದೆಲ್ಲಾ ವಿಶೇಷವಾಗಿ ನಡೆಯುತ್ತಿದ್ದು, ಇದೊಂದು ರಾಜಕೀಯ ಬಣ್ಣ” ಎಂದು ಹೇಳಿದರು.

ಕಾನೂನಿನ ಪ್ರಕಾರ ಕ್ರಮ

ಬೆಳಗಾವಿಯ ಎಸ್ ಡಿಎ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಆಪ್ತ ಸಹಾಯಕನ ಹೆಸರನ್ನು ಬರೆದು ಆತ್ಮಹತ್ಯೆ ಮಾಡಿಕೊಂದಿರುವ ಬಗ್ಗೆ ಕೇಳಿದಾಗ “ಯಾರೇ ತಪ್ಪು ಮಾಡಿದ್ದರು ಪೊಲೀಸ್ ಇಲಾಖೆ ಕಾನೂನಿನ ಅನ್ವಯ ಕ್ರಮ ತೆಗೆದುಕೊಳ್ಳುತ್ತದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...