ಆಕಸ್ಮಿಕವಾಗಿ ನಾನು ಜೈಲಿನಿಂದ ಜೀವಂತವಾಗಿ ಹೊರಬಂದಿದ್ದೇನೆ: ಬಿಡುಗಡೆ ಬಳಿಕ ಸಾಯಿಬಾಬಾ ಹೇಳಿಕೆ

Date:

ಮಾವೋವಾದಿ ಸಂಪರ್ಕದ ಆರೋಪದ ಮೇಲೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್ ಸಾಯಿಬಾಬಾ ಅವರನ್ನು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ಖುಲಾಸೆಗೊಳಿಸಿದೆ. ಹೈಕೋರ್ಟ್‌ ತೀರ್ಪು ನೀಡಿದ ಎರಡು ದಿನಗಳ ಬಳಿಕ ಮತ್ತು ಬರೊಬ್ಬರಿ 10 ವರ್ಷಗಳ ಜೈಲುವಾಸದ ನಂತರ ಗುರುವಾರ ಬೆಳಿಗ್ಗೆ ನಾಗ್ಪುರ ಸೆಂಟ್ರಲ್ ಜೈಲಿನಿಂದ ನಾಯಿಬಾಬಾ ಬಿಡುಗಡೆಯಾಗಿದ್ದಾರೆ.

ಬಿಡುಗಡೆ ಬಳಿಕ ಮಾತನಾಡಿರುವ ಸಾಯಿಬಾಬಾ, “ನಾನು ಜೀವಂತವಾಗಿ ಜೈಲಿನಿಂದ ಹೊರಬಂದಿರುವುದು ಆಶ್ಚುರ್ಯ ಮತ್ತು ಆಕಸ್ಮಿಕ. ನನ್ನ ಆರೋಗ್ಯ ತುಂಬಾ ಕೆಟ್ಟಿದೆ. ನಾನು ಮಾತನಾಡಲಾರೆ. ನಾನು ಮೊದಲು ವೈದ್ಯಕೀಯ ಚಿಕಿತ್ಸೆ ಪಡೆಯಬೇಕು” ಎಂದು ಹೇಳಿದ್ದಾರೆ.

“ಜೈಲು ಜೀವನವು ‘ಕ್ರೂರ’ವಾಗಿರುತ್ತದೆ. ಯಾವುದೇ ಕಾನೂನಾತ್ಮಕ ಆಧಾರವಿಲ್ಲದೆ, ನನ್ನ ಮತ್ತು ನನ್ನೊಂದಿಗೆ ಜೈಲು ಸೇರಿದ್ದವರ 10 ವರ್ಷಗಳ ಜೀವನವನ್ನು ಆಡಳಿತ ಕಿತ್ತುಕೊಂಡಿದೆ. ಪ್ರಾಧ್ಯಪಕನಾಗಿ ನಾನು ನನ್ನ ವೃತ್ತಿಯನ್ನು ಉತ್ತಮವಾಗಿ ನಿಭಾಯಿಸುತ್ತಿದ್ದೆ. ಆದರೆ, 10 ವರ್ಷಗಳ ಕ್ರೂರ ಮತ್ತು ಅಮಾನವೀಯ ಜೈಲುವಾಸದೊಂದಿಗೆ ನನ್ನ ವಿದ್ಯಾರ್ಥಿಗಳಿಂದ ದೂರವಿದ್ದೆ. ನಾನು ಸ್ವಂತವಾಗಿ ಓಡಾಡಲು ಆಗಲಿಲ್ಲ. ಆಸರೆಯಿಲ್ಲದೆ ಶೌಚಕ್ಕೂ ಹೋಗಲಾಗದೆ, ಸ್ನಾನಕ್ಕೂ ಹೋಗುತ್ತಿರಲಿಲ್ಲ. ನಾನು ಹೊರ ಬರುವ ಯಾವುದೇ ಅವಕಾಶವೂ ಕಾಣುತ್ತಿರಲಿಲ್ಲ. ಆಕಸ್ಮಿಕವೆಂಬಂತೆ ಹೊರ ಬಂದಿದ್ದೇನೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ವಿರುದ್ಧದ ಪ್ರಕರಣದಲ್ಲಿ ತಮ್ಮ ಪರವಾಗಿ ವಾದಿಸುತ್ತಿದ್ದ ವಕೀಲ ಸುರೇಂದ್ರ ಗಡ್ಲಿಂಗ್ ಅವರು ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಜೈಲು ಸೇರಿರುವ ಬಗ್ಗೆ ಸಾಯಿಬಾಬಾ ದುಃಖ ವ್ಯಕ್ತಪಡಿಸಿದ್ದಾರೆ.

“ಅವರ ಬಂಧನಕ್ಕೆ ಬೇರೆ ಯಾವುದೇ ಕಾರಣವಿಲ್ಲ. ಆದರೆ, ಅವರು ನನ್ನ ಪರವಾಗಿ ವಾದಿದ್ದರು ಎಂಬ ಕಾರಣಕ್ಕಾಗಿಯೇ ಅವರು ಬಂಧಿಸಲಾಗಿದೆ. ನನ್ನ ವಿಚಾರಣೆಯ ಸಮಯದಲ್ಲಿ ಅವರಿಗೆ ಬೆದರಿಕೆ ಹಾಕಲಾಗಿತ್ತು. ಅಗಲೇ, ಅವರು ಬಂಧನವಾಗು ಸೂಚನೆಗಳು ಇದ್ದವು. ನನ್ನ ಪ್ರಕರಣದಲ್ಲಿ ಸಂಪೂರ್ಣ ನ್ಯಾಯ ಸಿಗಬೇಕಾದರೆ ಸುರೇಂದ್ರ ಅವರನ್ನು ಬಿಡುಗಡೆ ಮಾಡಬೇಕು” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಚುನಾವಣಾ ಬಾಂಡ್‌ | ಎಸ್‌ಬಿಐ ಬಳಿ ಕೃಷಿ ಸಾಲದ ವಿವರಗಳಿವೆ ಆದರೆ ಅದಿಲ್ಲ: ಉದ್ಧವ್ ಠಾಕ್ರೆ

ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಸಾಯಿಬಾಬಾ ಅವರನ್ನು 2014ರ ಮೇನಲ್ಲಿ ಬಂಧಿಸಲಾಗಿತ್ತು. ಅದೇ ಪ್ರಕರಣದಲ್ಲಿ, ರೆವಲ್ಯೂಷನರಿ ಡೆಮಾಕ್ರಟಿಕ್ ಫ್ರಂಟ್‌ನ ಸದಸ್ಯರೆಂದು ಇತರ ಐವರನ್ನೂ 2013 ಮತ್ತು 2014ರಲ್ಲಿ ಗಡ್ಚಿರೋಲಿ ಪೊಲೀಸರು ಬಂಧಿಸಿದ್ದರು.

ಬಂಧತರಾಗಿದ್ದವರಲ್ಲಿ ವಿಜಯ್ ಟರ್ಕಿ ಅವರಿಗೆ 10 ವರ್ಷ ಜೈಲು ಶಿಕ್ಷೆ  ಹಾಗೂ ಉಳಿದೆಲ್ಲರಿಗೂ ಜೀವಾವಧಿ ಶಿಕ್ಷೆ ವಿಧಿಸಿ ವಿಶೇ‍ಷ ನ್ಯಾಯಾಲಯವು 2017ರಲ್ಲಿ ತೀರ್ಪು ನೀಡಿತ್ತು. ಜೀವಾವಧಿ ಶಿಕ್ಷೆಗೆ ಗುರಿಯಾದವರಲ್ಲಿ  ಮಹೇಶ್ ಟಿರ್ಕಿ, ಹೇಮ್ ಮಿಶ್ರಾ, ಪಾಂಡು ನರೋಟೆ ಅವರು 2022ರಲ್ಲಿ ಹಂದಿ ಜ್ವರದಿಂದ ಜೈಲಿನಲ್ಲಿಯೇ ಸಾವನ್ನಪ್ಪಿದ್ದರು. 10 ವರ್ಷ ಶಿಕ್ಷೆಗೆ ಗುರಿಯಾಗಿದ್ದ ವಿಜಯ್ ಟರ್ಕಿ ಅವರು ಜಾಮೀನು ಪಡೆದು, ಹೊರಬಂದಿದ್ದರು. ಸಾಯಿಬಾಬಾ ಅವರು ನಾಗ್ಪುರ ಸೆಂಟ್ರಲ್‌ ಜೈಲಿನಲ್ಲಿದ್ದರು.

ತಮಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯಲ್ಲಿ ಪ್ರಶ್ನಿಸಿ ಸಾಯಿಬಾಬಾ ಅವರು ಬಾಂಬೆ ಹೈಕೋರ್ಟ್‌ನಲ್ಲಿ ಮೆಟ್ಟಿಲೇರಿದ್ದರು. 2022ರ ಅಕ್ಟೋಬರ್ 14ರಂದು ಅವರ ಬಿಡುಗಡೆಗೆ ಹೈಕೋರ್ಟ್ ಆದೇಶಿಸಿತ್ತು. ಆದರೆ, ಹೈಕೋರ್ಟ್‌ ತೀರ್ಪಿಗೆ ತಡೆ ನೀಡುವಂತೆ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್‌ ಅಮಾನತುಗೊಳಿಸಿತ್ತು.

ಇದೀಗ, ಮತ್ತೆ ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ನಾಗ್ಪುರ ಪೀಠ, ಸಾಯಿಬಾಬಾ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಿದೆ. ಪ್ರಕರಣವನ್ನು ರದ್ದುಗೊಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...