ಚನ್ನಪಟ್ಟಣ | ಸಚಿವ ಜಮೀರ್ ಭಾವಚಿತ್ರಕ್ಕೆ ಮುತ್ತಿಟ್ಟು ಸಂಭ್ರಮ, ನಿಂದನೆಗಳಿಂದ ಬಚಾವ್

Date:

ಈ ಬಾರಿಯ ಉಪಚುನಾವಣೆಯಲ್ಲಿ ಹೈ ವೊಲ್ಟೇಜ್ ಕ್ಷೇತ್ರವಾಗಿ ಮಾರ್ಪಟ್ಟಿದ್ದ ಚನ್ನಪಟ್ಟಣದಲ್ಲಿ ಬಿಜೆಪಿ-ಜೆಡಿಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೀನಾಯವಾಗಿ ಸೋತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಮೊದಲ 6 ಸುತ್ತಿನಲ್ಲಿ ನಿಖಿಲ್‌ ಮುನ್ನಡೆಯಲ್ಲಿದ್ದರು. ಆದರೆ ಚನ್ನಪಟ್ಟಣ ನಗರದ ಇವಿಎಂ ಓಪನ್‌ ಆಗುತ್ತಿದ್ದಂತೆ ಯೋಗೇಶ್ವರ್‌ ಅವರಿಗೆ ಭರ್ಜರಿ ಮುನ್ನಡೆ ಸಿಕ್ಕಿತ್ತು. ಈ ಮುನ್ನಡೆಯನ್ನು ಯೋಗೇಶ್ವರ್‌ ಕೊನೆಯವರೆಗೂ ಉಳಿಸಿಕೊಂಡು ಬರುವ ಮೂಲಕ, ಗೆಲುವು ಸಾಧಿಸಿದ್ದಾರೆ.

WhatsApp Image 2024 11 23 at 1.08.39 PM

ಯೋಗೇಶ್ವರ್‌ಗೆ ಅವರಿಗೆ ಬಾರಿ ಸೋಲಿನ ಅನುಕಂಪ ಕೈ ಹಿಡಿದಿದೆ. ಎರಡು ಬಾರಿ ಶಾಸಕರಾಗಿ ಕುಮಾರಸ್ವಾಮಿ ಕ್ಷೇತ್ರಕ್ಕೆ ಬರಲಿಲ್ಲ ಎಂಬ ಬೇಸರ ಇತ್ತು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸೋಲಿನ ನಂತರ ಡಿಕೆ ಬ್ರದರ್ಸ್ ಚನ್ನಪಟ್ಟಣವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ಚನ್ನಪಟ್ಟಣದಲ್ಲಿ ಜಮೀರ್ ಹೇಳಿಕೆಯಿಂದ ಕಾಂಗ್ರೆಸ್ ಹಿನ್ನಡೆಯಾಗಿದೆ ಎನ್ನಲಾಗಿತ್ತು. ಆದರೆ ಸಚಿವ ಜಮೀರ್ 20 ಸಾವಿರ ಅಂತರದಲ್ಲಿ ಯೋಗೇಶ್ವರ್ ಗೆಲ್ಲುತ್ತಾರೆ. ಬರೆದಿಟ್ಟುಕೊಳ್ಳಿ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

ಅಲ್ಲದೇ, ಮತದಾನ ನಡೆದ ಬಳಿಕ ಮಾತನಾಡಿದ್ದ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್, “ಹೆಚ್‌ ಡಿ ಕುಮಾರಸ್ವಾಮಿ ಕುರಿತು ಸಚಿವ ಜಮೀರ್‌ ಅಹಮದ್‌ ನೀಡಿದ ಹೇಳಿಕೆ ಕ್ಷೇತ್ರದಲ್ಲಿ ಪರಿಣಾಮ ಬೀರಿದೆ. ಇದರಿಂದ ನನಗೆ ಬರುವ ಒಂದಿಷ್ಟು ಮತಗಳ ಬಂದಂತೆ ಕಾಣುತ್ತಿಲ್ಲ. ನಾನು ನಿರೀಕ್ಷಿಸಿದ ಮತಗಳಲ್ಲಿ ಹಿನ್ನಡೆಯಾಗಲಿದೆ” ಎಂದಿದ್ದರು. ಇದರಿಂದಾಗಿ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸುತ್ತಾರೆ, ಫಲಿತಾಂಶಕ್ಕೂ ಮುನ್ನವೇ ಯೋಗೇಶ್ವರ್ ಸೋಲೊಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ವ್ಯಂಗ್ಯವಾಡಿದ್ದರು. ಆದರೆ, ಇಂದಿನ ಫಲಿತಾಂಶ ಎಲ್ಲರ ಲೆಕ್ಕವನ್ನೂ ತಲೆಕೆಳಗಾಗಿಸಿದೆ.

ನಿಂದನೆಗಳಿಂದ ಬಚಾವಾದ ಸಚಿವ ಜಮೀರ್

ಒಂದು ವೇಳೆ ಚನ್ನಪಟ್ಟಣದಲ್ಲಿ ಯೋಗೇಶ್ವರ್ ಸೋತಿದ್ದಿದ್ದರೆ, ಸಚಿವ ಜಮೀರ್ ಅವರ ಹೇಳಿಕೆಯೆ ಕಾರಣ ಎಂದು ಎಲ್ಲರೂ ಟ್ರೋಲ್ ಸಹಿತ ನಿಂದನೆಗೂ ಗುರಿ ಮಾಡುತ್ತಿದ್ದರು. ಆದರೆ, ಮತದಾರರು ‘ಮನೆ ಮಗ’ ಎಂದು ಯೋಗೇಶ್ವರ್ ಅವರನ್ನು ಕೈ ಹಿಡಿದಿದ್ದರಿಂದ ಗೆಲುವು ಸಾಧಿಸಿದ್ದಾರೆ. ಜೊತೆಗೆ, ಸಚಿವ ಜಮೀರ್ ಅಹ್ಮದ್ ಕೂಡ ನಿಂದನೆಗಳಿಂದ ಬಚಾವಾಗಿದ್ದಾರೆ.

ಇದನ್ನು ಓದಿದ್ದೀರಾ? ಶಿಗ್ಗಾಂವಿ | ಬಹುವರ್ಷಗಳ ನಂತರ‌ ಹಾರಿದ ಕಾಂಗ್ರೆಸ್ ಬಾವುಟ, ಯಾಸೀರ್ ಅಹ್ಮದ್ ಖಾನ್ ಪಠಾಣ್ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆಯೇ, ಕೆಲವು ಕಾಂಗ್ರೆಸ್ ಕಾರ್ಯಕರ್ತರು, ಜಮೀರ್ ಅಹ್ಮದ್ ಅಭಿಮಾನಿಗಳು ಪೋಸ್ಟರ್ ಹಿಡಿದುಕೊಂಡು, ಘೋಷಣೆ ಕೂಗಿ ಸಂಭ್ರಮಾಚರಣೆ ನಡೆಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...