ದೇಶ ವಿಭಜಿಸಲು, ಸೌಹಾರ್ದತೆ ಕದಡಲು ಸಿಎಎ ಜಾರಿ: ನಟ ಕಮಲ್ ಹಾಸನ್

Date:

ಸಾರ್ವತ್ರಿಕ ಚುನಾವಣೆಗೆ ಮುನ್ನ ಜನರನ್ನು ವಿಭಜಿಸಲು ಮತ್ತು ಸಾಮರಸ್ಯವನ್ನು ನಾಶಮಾಡಲು ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ತಂದಿದೆ ಎಂದು ಮಕ್ಕಳ್ ನೀಧಿ ಮೈಯಂ ಸಂಸ್ಥಾಪಕ, ನಟ ಕಮಲ್ ಹಾಸನ್ ಹೇಳಿದ್ದಾರೆ. ಸಿಎಎ ಅನುಷ್ಠಾನವನ್ನು ಕಟುವಾಗಿ ವಿರೋಧಿಸಿದ್ದಾರೆ.

“ಭಾರತದ ಸಂವಿಧಾನದ ಜಾತ್ಯತೀತತೆ ಮತ್ತು ಬದ್ಧತೆಗೆ ಅನುಗುಣವಾಗಿ ಸಿಎಎಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ ತಮಿಳುನಾಡಿನ ಮೊದಲ ರಾಜಕೀಯ ಪಕ್ಷ ಮಕ್ಕಳ್ ನೀಧಿ ಮೈಯಂ ಆಗಿದೆ” ಎಂದು ಅವರು ಹೇಳಿದ್ದಾರೆ.

“ಸಿಎಎ ಜಾರಿಗೊಳಿಸುವ ಕ್ರಮವು ಬಿಜೆಪಿಯ ‘ನೀಚ ತಂತ್ರಗಳನ್ನು’ ಸೂಚಿಸುತ್ತದೆ. ಬಹುಶಃ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಅದು ಭಾರತವನ್ನು ಏನು ಮಾಡಬೇಕೆಂದು ಯೋಜಿಸಿದೆಯೋ ಅದಕ್ಕೆ ಸಿಎಎ ಜಾರಿ ಪರಿಪೂರ್ಣ ಉದಾಹರಣೆಯಾಗಿದೆ” ಎಂದು ಹಾಸನ್ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಕೇರಳದಲ್ಲಿ ಸಿಎಎ ಜಾರಿ ಮಾಡಲ್ಲ: ಸಿಎಂ ಪಿಣರಾಯಿ ವಿಜಯನ್

“ಕೇಂದ್ರ ಸರ್ಕಾರದಿಂದ ನಿರ್ಲಕ್ಷಿಸಲ್ಪಟ್ಟ ಮತ್ತು ಕಡೆಗಣಿಸಲ್ಪಟ್ಟ ನಮ್ಮ ಮುಸ್ಲೀ ಸಹೋದರರು ತಮ್ಮ ‘ರಂಜಾಜ್’ ಪವಿತ್ರ ದಿನಗಳನ್ನು ಆರಂಭಿಸುವ ಒಂದು ದಿನದ ಮುನ್ನ ಈ ದುರಂತ ಸುದ್ದಿಯನ್ನು ಕೇಳುವಂತಾಗಿದೆ. ಸಿಎಎ ತುಳಿತಕ್ಕೊಳಗಾದ ಧಾರ್ಮಿಕ ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡುವ ಉದ್ದೇಶವಾಗಿದ್ದರೆ, ಇದೇ ರೀತಿಯ ಸಂಕಷ್ಟವನ್ನು ಎದುರಿಸುತ್ತಿರುವ ಶ್ರೀಲಂಕಾದ ತಮಿಳರನ್ನು ಏಕೆ ಸೇರಿಸಬಾರದು” ಎಂದು ಪ್ರಶ್ನಿಸಿದ್ದಾರೆ.

”ಕೇಂದ್ರ ಸರಕಾರವು ವಾಸ್ತವವನ್ನು ಕಡೆಗಣಿಸುತ್ತಿರುವುದು ಖಂಡನೀಯ. ನಾವು ಒಂದಾಗೋಣ, ವಾಸ್ತವಾಂಶಗಳನ್ನು ಜನರ ಮುಂದಿಡೋಣ. ಅಧಿಕಾರಕ್ಕೆ ಬರೋಣ. ನಮ್ಮ ನಾಗರಿಕರನ್ನು ಧರ್ಮ, ಭಾಷೆ ಮತ್ತು ಜಾತಿಯ ಆಧಾರದ ಮೇಲೆ ವಿಭಜಿಸಲು ಪ್ರಯತ್ನಿಸುವವರಿಗೆ ಮುಂದಿನ ಚುನಾವಣೆಯಲ್ಲಿ ವಾಸ್ತವಾಂಶ ದೊರೆಯುತ್ತದೆ” ಎಂದು ಕಮಲ್ ಹಾಸನ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...