ಹಿಂದೂ ವಿವಾಹ ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟದಲ್ಲಿ ಅನುಮೋದನೆ: ವಿವಾಹ ನೋಂದಣಿ ಇನ್ನುಮುಂದೆ ಆನ್‌ಲೈನ್

Date:

ಹಿಂದೂ ವಿವಾಹ ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ಅನುಮೋದಿಸಿದೆ. ನೋಂದಣಿ ವಿವಾಹ ಸರಳೀಕರಣಕ್ಕೆ ರಾಜ್ಯ ಸರ್ಕಾರದ ಸಮ್ಮತಿ ನೀಡಿದ್ದು, ಹಿಂದೂ ವಿವಾಹ ನೋಂದಣಿ ಕಾಯ್ದೆ 2024ಕ್ಕೆ ಒಪ್ಪಿಗೆ ಸೂಚಿಸಿದೆ ಎಂದು ಕಾನೂನು ಸಚಿವ ಎಚ್‌ ಕೆ ಪಾಟೀಲ್‌ ಹೇಳಿದರು.

ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ಕರೆದು ಮಾತನಾಡಿದರು.

“ಕಚೇರಿಗಳಲ್ಲಿ ಮೊದಲು ವಿವಾಹ ನೋಂದಣಿ ಆಗುತ್ತಿದ್ದವು. ಈಗ ಆನ್ಲೈನ್ ಮೂಲಕ ನೋಂದಣಿಗೆ ಅವಕಾಶವಿದೆ. ಗ್ರಾಮ 1, ಕಾವೇರಿ 2, ಬಾಪೂಜಿ ಸೇವಾಕೇಂದ್ರಗಳಲ್ಲಿ ನೋಂದಣಿ ಮಾಡಬಹುದು. ಇನ್ನುಮುಂದೆ ಸಬ್ ರಿಜಿಸ್ಟರ್ ಕಚೇರಿಗೆ ಅಲೆಯುವಂತಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಧುನಿಕ ಅನಿಲ ವಿದ್ಯುತ್ ಚಿತಾಗಾರ

“10 ಮಹಾನಗರ ಪಾಲಿಕೆಗಳಲ್ಲಿ, 24 ನಗರಸಭೆ ವ್ಯಾಪ್ತಿಯಲ್ಲಿ 34 ಆಧುನಿಕ ಅನಿಲ ವಿದ್ಯುತ್ ಚಿತಾಗಾರ ಸ್ಥಾಪನೆಗೆ 36 ಕೋಟಿ ರೂ.ಗೆ ಕ್ಯಾಬಿನೆಟ್ ಅನುಮೋದನೆ ನೀಡಲಾಗಿದೆ. ಹಾಸನ ವೈದ್ಯಕೀಯ ಕಾಲೇಜಿನಲ್ಲಿ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಮೊತ್ತ 142 ಕೋಟಿ ರೂ. ಆಡಳಿತಾತ್ಮಕ ಅನುಮೋದನೆ ದೊರಕಿದೆ” ಎಂದು ಹೇಳಿದರು.

“ರಾಯಚೂರು ವಿವಿ ಆವರಣದಲ್ಲಿ ಮಾನವ ಜಿನೋಮ್ ಸಂಸ್ಥೆ ಸ್ಥಾಪನೆಗೆ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. 104 ಪಬ್ಲಿಕ್ ಶಾಲೆಗಳ ಅಭಿವೃದ್ಧಿಗೆ 26 ಕೋಟಿ ರೂ. ಅನುಮೋದನೆ ಮತ್ತು ಅಸ್ತಿತ್ವದಲ್ಲಿರುವ 82 ಪಬ್ಲಿಕ್ ಶಾಲೆಗಳ ಅಭಿವೃದ್ಧಿಗೂ ಸಂಪುಟ ಒಪ್ಪಿಗೆ ಸೂಚಿಸಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರವಾಹಕ್ಕೆದುರು ದಶಕ ಕಾಲದ ಈಜು-  Scroll.in ಗೆ ಅಭಿನಂದನೆ!

ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ 158 ಕೋಟಿ

“ರಾಯಚೂರು ತಾಲೂಕಿನ ಚಿಕ್ಕ ಮಂಚಾಲಿ ಗ್ರಾಮದ ಹತ್ತಿರ ತುಂಗಭದ್ರ ನದಿಗೆ ಅಡ್ಡಲಾಗಿ ಮಂತ್ರಾಲಯದ ಬಳಿ ಆಂಧ್ರದ ಅನುಮತಿ ಪಡೆದು ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ 158 ಕೋಟಿ ರೂ. ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ” ಎಂದರು.

“ಜಲ ಸಂಪನ್ಮೂಲ ಇಲಾಖೆಯ ಅಡಿ ಬೆಳಗಾವಿಯ ಉಚಗಾಂವ್, ಬಸ್ತವಾಡಿಯ 20 ಕೆರೆಗಳ ತುಂಬಿಸುವ 250 ಕೋಟಿ ರೂ. ವೆಚ್ಚದ ಯೋಜನೆ ಮತ್ತು ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ 61 ಕೆರೆ ತುಂಬಿಸುವ ಯೋಜನೆ 519 ಕೋಟಿ ರೂ. ಅಂದಾಜಿಗೆ ಅನುಮೋದಿಸಲಾಗಿದೆ. ಘಟಪ್ರಭಾ ನದಿಯಿಂದ ನೀರು ಪೂರೈಕೆ ಮಾಡಲಾಗುವುದು”ಎಂದು ಹೇಳಿದರು.

“ಚಿಕ್ಕಮಗಳೂರು ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಹೊಸ ವೈದ್ಯಕೀಯ ಕಾಲೇಜು ಹಾಸ್ಟೆಲ್ ಬೋಧಕ ಬೋಧಕೇತರ ಸಿಬ್ಬಂದಿ ವಸತಿ ನಿಲಯ, ಎಲ್ಲ ಕಟ್ಟಡ ಕಾಮಗಾರಿಗಳ ನಿರ್ಮಾಣಕ್ಕೆ 455 ಕೋಟಿ ರೂ. ಅಂದಾಜು ವೆಚ್ಚಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದೆ” ಎಂದು ಸಚಿವರು ವಿವರಿಸಿದರು.

“ರಾಜ್ಯದ ಆರು ಜಿಲ್ಲೆಗಳಲ್ಲಿ ಕೃಷಿ ಉತ್ಪನ್ನಗಳ ಸಂಗ್ರಹಣೆಗೆ ಶೈತ್ಯಾಗಾರ ನಿರ್ಮಾಣಕ್ಕೆ, ಮಾಜಿ ಎಂಎಲ್ಸಿ ಸಿಎಂ ನಿಂಗಪ್ಪಗೆ ಹಂಚಿಕೆಯಾದ ಜಿ ಕ್ಯಾಟಗರಿ ನಿವೇಶನ ಮಾರಾಟಕ್ಕೆ, ಪೊಲೀಸ್ ಇಲಾಖೆಯ ಪ್ರಧಾನ ಕಚೇರಿ ಸೇರಿದಂತೆ ಇತರ ಘಟಕಗಳಲ್ಲಿ ವಾಹನಗಳಿಗೆ ಪೆಟ್ರೋ ಕಾರ್ಡ್ ಮೂಲಕ ಇಂಧನ ಮತ್ತು ತೈಲವನ್ನು ಮೂರು ವರ್ಷಗಳ ಅವಧಿಗೆ 120 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಖರೀದಿಸಲು ಅನುಮತಿ ನೀಡಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...