ಸಚಿವ ಸಂಪುಟ ಸಭೆ | 7ನೇ ವೇತನ ಆಯೋಗದ‌ ಶಿಫಾರಸು ಜಾರಿ ಅಧಿಕಾರ ಮುಖ್ಯಮಂತ್ರಿಗೆ

Date:

ವಿಧಾನಸೌಧದಲ್ಲಿ ಗುರುವಾರ (ಜೂ.20) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ‌ ಶಿಫಾರಸು ಜಾರಿ ಕುರಿತು ಗಂಭೀರ ಚರ್ಚೆ ನಡೆದಿದ್ದು, 7ನೇ ವೇತನ ಆಯೋಗದ‌ ಶಿಫಾರಸು ಜಾರಿ ಅಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಹಿಸಲಾಗಿದೆ.

ಈ ಮೂಲಕ 7ನೇ ವೇತನ ಆಯೋಗ ಜಾರಿ ಮಾಡಬೇಕೆಂಬ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರುವ ಕಾಲ ಸನ್ನಿಹಿತವಾಗಿದೆ. ಶಿಫಾರಸು ಜಾರಿ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ವಹಿಸುವ ನಿರ್ಧಾರಕ್ಕೆ ಸಚಿವ ಸಂಪುಟ ಸಭೆ ಬಂದಿದೆ.

ರಾಜ್ಯ ಸರ್ಕಾರ ಶೀಘ್ರದಲ್ಲೇ ಅಧಿಕೃತ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ ಶೇ.25ರಷ್ಟು ಹೆಚ್ಚಳಕ್ಕೆ ಸಚಿವ ಸಂಪುಟ ಸಭೆಯಲ್ಲಿ ಸಚಿವರು ಸಲಹೆ ನೀಡಿದ್ದಾರೆ. ಅಂತಿಮವಾಗಿ ಸಂಪುಟ ಸಭೆ ಆಯೋಗದ ಶಿಫಾರಸು ಜಾರಿ ಅಧಿಕಾರವನ್ನ‌ ಸಿಎಂಗೆ ನೀಡಲಾಗಿದ್ದು, ವೇತನ ಶೇ.27ರಷ್ಟು ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಸಹ ಒಲವು ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಳನೇ ವೇತನ ಆಯೋಗ ಜಾರಿಯಾದರೆ 13.5 ಲಕ್ಷ ನೌಕರರಿಗೆ ಅನುಕೂಲವಾಗಲಿದೆ. 6 ಲಕ್ಷ ಸರ್ಕಾರಿ ನೌಕರರು, ನಿಗಮ-ಮಂಡಳಿ, ಪ್ರಾಧಿಕಾರಿಗಳ 3 ಲಕ್ಷ ಮತ್ತು ಪಿಂಚಣಿ ಪಡೆಯುತ್ತಿರುವ 4.5 ಲಕ್ಷ ನಿವೃತ್ತರಿಗೆ 7ನೇ ವೇತನ ಆಯೋಗ ಅನ್ವಯವಾಗಲಿದೆ.

20 ವಿಷಯಗಳ ಮೇಲೆ ಚರ್ಚೆ

ಸಚಿವ ಸಂಪುಟ ಸಭೆಯಲ್ಲಿ ಗಣಿ ಗುತ್ತಿಗೆ ಅವಧಿ ಮುಗಿದ ಕೆಜಿಎಫ್ ಪ್ರದೇಶದಲ್ಲಿ ಕೇಂದ್ರದಿಂದ ಗಣಿ ಚಟುವಟಿಕೆ ಕೈಗೊಳ್ಳಲು ಅನುಮತಿ ಸೇರಿದಂತೆ ಒಟ್ಟು 20 ವಿಷಯಗಳ ಮೇಲೆ ಚರ್ಚೆ ಮಾಡಿ ನಿರ್ಣಯ ಕೈಗೊಳ್ಳಲಾಗಿದೆ.

ಸಂಪುಟ ಸಭೆ ನಂತರ ಕಾನೂನು ಸಚಿವ ಹೆಚ್ ಕೆ ಪಾಟೀಲ್‌ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿ, ವಾಣಿಜ್ಯ ಕೈಗಾರಿಕೆ ಇಲಾಖೆ ಗೆ ಸಂಬಂಧಿಸಿದಂತೆ ಗಣಿ ಗುತ್ತಿಗೆ ಅವಧಿ ಮುಗಿದ ಕೆಜಿಎಫ್ ಪ್ರದೇಶದಲ್ಲಿ ಕೇಂದ್ರದಿಂದ ಗಣಿ ಚಟುವಟಿಕೆ ಕೈಗೊಳ್ಳಲು ಅನುಮತಿ ನೀಡಲಾಗಿದೆ. ನಿಷ್ಕ್ರಿಯವಾಗಿದ್ದ 1304 ಎಕರೆ ಪ್ರದೇಶದಲ್ಲಿ ಗಣಿ ಗುತ್ತಿಗೆ ಚಟುವಟಿಕೆ ಮುಂದುವರಿಸಲು ಕೇಂದ್ರದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಸಹಮತಿಸಿದೆ. ಗಣಿ ಚಟುವಟಿಕೆಗಳ ಪ್ರಾರಂಭಕ್ಕೆ ಅನುಮತಿ ನೀಡಲು ಸಂಪುಟ ಒಪ್ಪಿಗೆ ಸೂಚಿಸಿದೆ” ಎಂದರು.

“ವಿಶ್ವವಿದ್ಯಾಲಯಗಳ ಅಭಿವೃದ್ದಿಗೆ 297.77 ಕೋಟಿ ರೂ. ಬಿಡುಗಡೆಗೆ ಕ್ಯಾಬಿನೆಟ್ ಅನುಮೋದಿಸಲಾಗಿದೆ. ಶಿಕ್ಷಣ ಇಲಾಖೆಯ ಎಲ್ಲ ಸರ್ಕಾರಿ ಶಾಲೆ ಹಾಗೂ ಪದವಿ ಕಾಲೇಜುಗಳಿಗೆ ಉಚಿತ ವಿದ್ಯುತ್ ಪೂರೈಕೆಗೆ ನಿರ್ಧಾರ ಮಾಡಲಾಗಿದ್ದು, 29.15 ಕೋಟಿ ರೂ. ಅಂದಾಜು ವೆಚ್ಚದಲ್ಲಿ 46,829 ಸರ್ಕಾರಿ ಶಾಲೆ, 1434 ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಉಚಿತ ನೀರಿನ ಸೌಲಭ್ಯ ಒದಗಿಸಲು ನಿರ್ಧರಿಸಲಾಗಿದೆ” ಎಂದು ವಿವರಿಸಿದರು.

“ಕೋಟಿ ಅಂದಾಜು ವೆಚ್ಚದಲ್ಲಿ 46,829 ಸರ್ಕಾರಿ ಶಾಲೆ, 1434 ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಉಚಿತ ನೀರಿನ ಸೌಲಭ್ಯ, ಕ್ರೈಸ್ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮಗ್ರ ವ್ಯಕ್ತಿತ್ವ ಅಭಿವೃದ್ಧಿ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗಿದೆ. ರೋಟರಿ ಸಂಸ್ಥೆಗೆ ಇದರ ಜವಾಬ್ದಾರಿ ನೀಡಲಾಗಿದೆ” ಎಂದರು.

“ಟೇನಿಂಗ್ ಡಂಪ್ಸ್ ಬಳಸಿ ಗಣಿ ಚಟುವಟಿಕೆ ಮುಂದುವರಿಸಲು ಅವಕಾಶ ನೀಡಲಾಗಿದ್ದು, 2230 ಎಕರೆ ಭೂಮಿ ಕೈಗಾರಿಕಾ ವಸಾಹತು ನಿರ್ಮಾಣಕ್ಕೆ ನೀಡಬೇಕು. 75.24 ಕೋಟಿ ರೂ. ಸರ್ಕಾರಕ್ಕೆ ಪಾವತಿ ಮಾಡುವುದು ಬಾಕಿ ಇದೆ. ಅದನ್ನೂ ಭರಿಸುವಂತೆ ಭಾರತ್ ಮೈನಿಂಗ್ಸ್​​ಗೆ ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.

“ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಬೆಳಗಾವಿ ಬಳಿಯಲ್ಲಿ ಬಡಾವಣೆ ನಿರ್ಮಾಣಕ್ಕೆ 137 ಕೋಟಿ ರೂ. ಅಂದಾಜು ವೆಚ್ಚಕ್ಕೆ ಕ್ಯಾಬಿನೆಟ್ ಅನುಮೋದನೆ ನೀಡಲಾಗಿದೆ” ಎಂದು ಎಚ್‌ ಕೆ ಪಾಟೀಲ್‌ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...