ಸಚಿವ ಸಂಪುಟ ಸಭೆ | ಪಿಎಸ್‌ಐ ಅಕ್ರಮ, ಹೆಚ್ಚುವರಿ ತನಿಖೆಗಾಗಿ ಎಸ್​ಐಟಿ‌ ರಚಿಸಲು ತೀರ್ಮಾನ

Date:

ವಿಧಾನಸೌಧದಲ್ಲಿ ಸತತ 3 ಗಂಟೆಗಳ ಕಾಲ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆದಿದ್ದು, ಬಹು ನಿರೀಕ್ಷಿತ ಜಾತಿ ಗಣತಿ ವರದಿ ಮತ್ತು ಸಿಎಎ ಬಗ್ಗೆ ಯಾವುದೇ ಚರ್ಚೆ ಸಭೆಯಲ್ಲಿ ನಡೆದಿಲ್ಲ.

ಸಚಿವ ಸಂಪುಟ ಬಳಿಕ ಕಂದಾಯ‌ ಸಚಿವ ಕೃಷ್ಣಬೈರೇಗೌಡ ಸುದ್ದಿಗೋಷ್ಠಿ ಕರೆದು ಮಾತನಾಡಿ, ಜಾತಿ ಗಣತಿ ವರದಿ ಮತ್ತು ಸಿಎಎ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದರು.

“ವಿಧಾನಸೌಧದ ಆವರಣದಲ್ಲಿ 23 ಕೋಟಿ‌ ರೂ. ವೆಚ್ಚದಲ್ಲಿ‌ ಭುವನೇಶ್ವರಿ ಪ್ರತಿಮೆ ಸ್ಥಾಪನೆ ಮಾಡಬೇಕು ಅಂತ ತೀರ್ಮಾನ ಆಗಿದೆ. ಕೆಂಗಲ್ ಹನುಮಂತಯ್ಯ ಪ್ರತಿಮೆಯ ರಸ್ತೆಯ ಪಕ್ಕದಲ್ಲಿ‌ ಸ್ಥಾಪನೆ ಆಗಲಿದೆ. ಇದಕ್ಕೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫೇಸ್ 3 ಒಪ್ಪಿಗೆ

“ಕಲ್ಲು, ಲೋಹದ ಪ್ರತಿಮೆಗೆ ಎಲ್ಲದಕ್ಕೂ ಹಣ ಬೇಕಾಗುತ್ತದೆ. ಏರ್ಪೋಟ್​​ನಲ್ಲಿ ಕೆಂಪೇಗೌಡ ಪ್ರತಿಮೆಗೆ 40-60 ಕೋಟಿ ರೂ. ಆಗಿತ್ತು. ಬೆಂಗಳೂರಿನಲ್ಲಿ ಅವಶ್ಯಕತೆಗಳು ಬೆಳೆಯುತ್ತಿದೆ. ಸಂಚಾರದ್ದೇ ದೊಡ್ಡ ಸಮಸ್ಯೆ ಆಗಿದೆ. ಟ್ರಾಫಿಕ್‌ ಸಮಸ್ಯೆ ಬಗೆಹರಿಸುವುದಕ್ಕೆ ಮೆಟ್ರೋ ಒಂದೇ ಪರ್ಯಾಯ ಮಾರ್ಗ. ಭವಿಷ್ಯದ ಅವಶ್ಯಕತೆ ಗಮನದಲ್ಲಿ ಇಟ್ಟುಕೊಂಡು‌ ಫೇಸ್ 3 ಒಪ್ಪಿಗೆ ನೀಡಿದೆ. ಎರಡು ಮಾರ್ಗಗಳನ್ನ‌ ಕೈಗೆ ಎತ್ತಿಕೊಳ್ಳಲು ಒಪ್ಪಿಗೆ ನೀಡಿದೆ” ಎಂದು ಹೇಳಿದರು.

“ಮೂರನೇ ಹಂತದ 15,611 ಕೋಟಿ‌ ರೂ. ವೆಚ್ಚದಲ್ಲಿ‌ ಕೈಗೆತ್ತುಕೊಳ್ಳಲು‌ ಸಂಪುಟ ಒಪ್ಪಿಗೆ ನೀಡಿದೆ. ಜೆಪಿ ನಗರ, ಸಿಲ್ಕ್ ಬೋರ್ಡ್​​ನಿಂದ ಕೆಲಸ ನಡೆದಿದೆ. ಸಿಲ್ಕ್ ಬೋರ್ಡ್​​ನಿಂದ ಹೆಬ್ಬಾಳ ಮೇಲ್ಸೇತುವೆವರೆಗೆ ಬಂದಿದೆ. ಸುಮಾರು 35.5 ಕಿ.ಲೋ ಮೀಟರ್​ವರೆಗೆ ನಡೆಯಲಿದೆ” ಎಂದು ತಿಳಿಸಿದರು.

ಸಭೆಯ ಚರ್ಚೆಯಾದ ಸಂಗತಿಗಳು

“ರೈತರ ಉತ್ಪಾದನೆ, ಲಾಭಾಂಶ ಜಾಸ್ತಿ ಆಗಬೇಕು. ಬೆಳೆ ಸಂರಕ್ಷಣೆ, 67 ಕೋಟಿ‌ ವೆಚ್ಚದಲ್ಲಿ ಬಯೋಟೆಕ್ ಅಭಿವೃದ್ಧಿಗೆ ಅಗ್ರಿ‌ ಇನ್ನೊವೇಷನ್ ಸೆಂಟರ್ ಮಾಡಲು‌ ತೀರ್ಮಾನ ಆಗಲಿದೆ. ಬೆಂಗಳೂರಿನಲ್ಲೇ ಎಲೆಕ್ಟ್ರಾನಿಕ್‌ ಸಿಟಿ ಬಳಿ ಕೊಡುತ್ತೇವೆ” ಎಂದು ಹೇಳಿದರು.

“ಕಲ್ಯಾಣ ಕರ್ನಾಟಕದಲ್ಲಿ 33 ಪ್ರಾಥಮಿಕ ಆರೋಗ್ಯ ಕೇಂದ್ರ ಓಪನ್​​ಗೆ ಒಪ್ಪಿಗೆ. ಕಡಬ ವೆಟರ್ನರಿ‌ ಕಾಲೇಜಿನ ಅಭಿವೃದ್ದಿಗೆ 163 ಕೋಟಿ ರೂ. ಮೈಸೂರಿನಲ್ಲಿ ಮಹಾರಾಣಿ ಕಾಲೇಜು ಹೊಸ ಹಾಸ್ಟೆಲ್​ ಸ್ಥಾಪನೆಗೆ 170 ಕೋಟಿ ರೂ. ಪ್ರಸ್ತಾವನೆಗೆ ಸಂಪುಟ ಒಪ್ಪಿಗೆ ನೀಡಿದೆ” ಎಂದರು.

“ಕೆಂಪೇಗೌಡ ಲೇಔಟ್​ಗಳ ಸೈಟ್​​ಗಳನ್ನ‌ ಲೀಸ್ ಆಧಾರವಾಗಿ ಕೊಟ್ಟಿದ್ದಾರೆ. ಕೆಲವರು ಕಂತುಗಳನ್ನ ಕಟ್ಟೋಕೆ ಆಗಿಲ್ಲ. ಬಿಡಿಎಗೆ ಅರ್ಜಿ ಸಲ್ಲಿಸಿ ಮನವಿ ಮಾಡಿದ್ದಾರೆ. ಅಲಾಟ್ಮೆಂಟ್ ಆದವರಿಗೆ ಮತ್ತೊಮ್ಮೆ ಅವಕಾಶ ಮಾಡಿಕೊಡಲು ಮನವಿ ಮಾಡಿದ್ದಾರೆ. ಬಾಕಿ‌ ಹಣ ಪಾವತಿಸಿದವರಿಗೆ ಕೊಡಲಿದ್ದೇವೆ. ಲೀಜ್ ಅಂಡ್ ಸೇಲ್‌ ಮಾಡಿಕೊಡಲು‌ ಸಂಪುಟ ಒಪ್ಪಿಗೆ ನೀಡಿದೆ” ಎಂದು ವಿವರಿಸಿದರು.

ಪಿಎಸ್‌ಐ ಅಕ್ರಮ, ಎಸ್​ಟಿಐ ರಚಿಸಲು ಸಲಹೆ

“ಪಿಎಸ್‌ಐ ನೇಮಕಾತಿ ಹಗರಣ ಸಂಬಂಧ ಬಿ.ವೀರಪ್ಪ ಸಮಿತಿ ರಚಿಸಿದ್ವಿ. ಈ ಸಂಬಂಧ ಬಿ.ವೀರಪ್ಪ ನೇತೃತ್ವದ ಸಮಿತಿ ವರದಿ ಸಲ್ಲಿಕೆ ಮಾಡಿದೆ. ಸರ್ಕಾರಿ, ಖಾಸಗಿ ವ್ಯಕ್ತಿಗಳು ಸೇರಿ 113 ಜನರು ಭಾಗಿ ಎಂದು ವರದಿ ನೀಡಲಾಗಿದೆ. ಪ್ರಕರಣ ಸಂಬಂಧ ಎಸ್​ಟಿಐ ರಚಿಸಬೇಕೆಂದು ವೀರಪ್ಪ ಹೇಳಿದ್ದಾರೆ. ಹೆಚ್ಚುವರಿ ತನಿಖೆಗಾಗಿ ಎಸ್​ಐಟಿ‌ ರಚಿಸಲು ತೀರ್ಮಾನ ಮಾಡಿದ್ದೇವೆ” ಎಂದು ಸಚಿವರು ತಿಳಿಸಿದರು.

“ಕೆ.ಆರ್.ಪುರದ ಎನ್‌ಜಿಎಫ್​ನಲ್ಲಿ‌ಇರುವ ಜಾಗದಲ್ಲಿ ನಾನಾ ಪ್ರಪೋಸಲ್​ಗಳು ಬಂದಿವೆ. 65 ಎಕರೆ ಜಾಗ ಇದೆ. ಆ ಭಾಗದಲ್ಲಿ ದೊಡ್ಡ ಪಾರ್ಕ್ ಇಲ್ಲ. ಟ್ರೀ ಪಾರ್ಕ್ ಮಾಡ್ಬೇಕು, ವಾಕಿಂಗ್, ಸೈಕಲ್ ಟ್ರಾಕ್, ಆಟದ ಮೈದಾನ ಇರಲಿದೆ. ಕೈಗಾರಿಕಾ ಇಲಾಖೆ ವತಿಯಿಂದ ಕೆಲಸ ಆಗಲಿದೆ. ಟ್ರೀ ಪಾರ್ಕ್​​ಗೆ ಒಟ್ಟು 11 ಕೋಟಿ ರೂ. ವೆಚ್ಚ ಆಗಬಹುದೆಂದು‌ ಅಂದಾಜಿಸಲಾಗಿದೆ. 1500 ಕೋಟಿ ರೂ ಬೆಲೆ ಬಾಳುವ ಜಾಗ ಸಾರ್ವಜನಿಕರಿಗೆ ಮೀಸಲಿಡಲಾಗಿದೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...