ದೇವರೊಂದಿಗೆ ಯಾರಾದರೂ ಮೈತ್ರಿಮಾಡಿಕೊಳ್ಳಬಹುದೇ: ಮೋದಿ ಕಾಲೆಳೆದ ಕಪಿಲ್ ಸಿಬಲ್

Date:

ಬಿಜೆಪಿ ಸ್ವತಂತ್ರ್ಯವಾಗಿ ಸರ್ಕಾರ ರಚಿಸುವಷ್ಟು ಬಲ ಹೊಂದಿಲ್ಲದ ಕಾರಣ ಸದ್ಯ ಮೈತ್ರಿ ಪಕ್ಷದ ಮೇಲೆ ಅವಲಂಭಿಸಿದ್ದು ಇದನ್ನು ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ರಾಜಕಾರಣಿ ಕಪಿಲ್ ಸಿಬಲ್ ಲೇವಡಿ ಮಾಡಿದ್ದಾರೆ. ದೇವರೊಂದಿಗೆ ಯಾರಾದರೂ ಮೈತ್ರಿಮಾಡಿಕೊಳ್ಳಬಹುದೇ ಎಂದು ವ್ಯಂಗ್ಯವಾಡಿದ್ದಾರೆ.

ಈ ಹಿಂದೆ ನರೇಂದ್ರ ಮೋದಿ ಮಾಧ್ಯಮದೊಂದಿಗೆ ಮಾತನಾಡುತ್ತಾ, “ನಾನು ಜೈವಿಕವಾಗಿ ಜನಿಸಿಲ್ಲ, ದೇವರೇ ನನ್ನನ್ನು ಕಳುಹಿಸಿದ್ದು” ಎಂದು ಹೇಳಿದ್ದರು. ಇದು ಸಾಕಷ್ಟು ಟ್ರೋಲ್ ಕೂಡಾ ಆಗಿತ್ತು. ಇನ್ನೊಂದೆರಡು ವರ್ಷವಾದರೆ ಮೋದಿ ತಾನೇ ದೇವರು ಅನ್ನುತ್ತಾರೆ ಎಂದು ನೆಟ್ಟಿಗರು ಅಭಿಪ್ರಾಯಿಸಿದ್ದರು.

ಇದನ್ನು ಓದಿದ್ದೀರಾ?  ‘ನಾನು ಜೈವಿಕವಾಗಿ ಜನಿಸಿಲ್ಲ, ಪರಮಾತ್ಮನೇ ನನ್ನನ್ನು ಕಳುಹಿಸಿದ್ದು’ ಎಂದ ಪ್ರಧಾನಿ ಮೋದಿ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೋದಿಯ ಈ ಹೇಳಿಕೆಗೆ ಪರೋಕ್ಷವಾಗಿ ಲೇವಡಿ ಮಾಡಿರುವ ಹಿರಿಯ ರಾಜಕಾರಣಿ ಕಪಿಲ್ ಸಿಬಲ್, “ಮೋದಿ ಅವರೇ ನಾನು ಕೇಳುತ್ತೇನೆ, ಭಗವಂತನ ಜೊತೆ ಯಾರಾದರೂ ಮೈತ್ರಿಮಾಡಿಕೊಳ್ಳಬಹುದೇ” ಎಂದು ಮೋದಿ ಕಾಲೆಳೆದಿದ್ದಾರೆ.

“ನನ್ನ ತಾಯಿ ಜೀವಂತವಾಗಿರುವವರೆಗೂ ನಾನು ಜೈವಿಕವಾಗಿ ಜನಿಸಿದ್ದೇನೆ ಎಂದು ನಾವು ನಂಬಿದ್ದೆ. ನನ್ನ ತಾಯಿ ಮರಣ ಹೊಂದಿದ ಬಳಿಕ ನಾನು ನನ್ನ ಎಲ್ಲಾ ಅನುಭವಗಳನ್ನು ಜೊತೆಗೂಡಿಸಿ ನೋಡುತ್ತೇನೆ. ನನ್ನನ್ನು ಪರಮಾತ್ಮನೇ ಕಳುಹಿಸಿದ್ದು ಎಂದು ನನಗೆ ಮನವರಿಕೆಯಾಗಿದೆ” ಎಂದು ಮೋದಿ ಈ ಹಿಂದೆ ಮೋದಿ ಹೇಳಿದ್ದರು.

ಇನ್ನು ಮೋದಿ ನೇತೃತ್ವದ ನೂತನ ಸರ್ಕಾರವನ್ನು ಲೇವಡಿ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ “ಈಗ ಮೋದಿ 3.0 ಸರ್ಕಾರ ರಚನೆಯಾಗಲಿದೆ ಎಂದು ಮತ್ತೆ ಮತ್ತೆ ಹೇಳಲಾಗುತ್ತಿದೆ. ಆದರೆ ವಾಸ್ತವವೆಂದರೆ ಈ ಬಾರಿ ಮೋದಿ 1/3ನೇ ಸರ್ಕಾರ” ಎಂದು ಲೇವಡಿ ಮಾಡಿದ್ದಾರೆ.

<blockquote class=”twitter-tweet”><p lang=”hi” dir=”ltr”>बार बार दावा किया जा रहा है कि अब मोदी ३.० सरकार बनेगी।<br>हक़ीक़त यह है कि अबकी बार मोदी १/३ सरकार।</p>&mdash; Jairam Ramesh (@Jairam_Ramesh) <a href=”https://twitter.com/Jairam_Ramesh/status/1798562418098159716?ref_src=twsrc%5Etfw”>June 6, 2024</a></blockquote> <script async src=”https://platform.twitter.com/widgets.js” charset=”utf-8″></script>

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 293 ಸ್ಥಾನಗಳನ್ನು ಗಳಿಸಿದ್ದು ನರೇಂದ್ರ ಮೋದಿ ಅವರು ಜೂನ್ 8ರಂದು ಮೂರನೇ ಅವಧಿಗೆ ಪ್ರಧಾನಿಯಾಗಲಿದ್ದಾರೆ. ಆದರೆ ಬಿಜೆಪಿ ಈ ಹಿಂದಿನ 2019ರ ಚುನಾವಣೆಯಲ್ಲಿ ಗಳಿಸಿದ್ದಕ್ಕಿಂತ ಅತೀ ಕಡಿಮೆ ಮತಗಳನ್ನು ಮತ್ತು ಲೋಕಸಭೆ ಕ್ಷೇತ್ರಗಳನ್ನು ತನ್ನದಾಗಿಸಿಕೊಂಡಿದೆ.

ಆದರೆ ಇಂಡಿಯಾ ಒಕ್ಕೂಟವು ನಿರೀಕ್ಷೆಗಿಂತ ಅಧಿಕ ಸ್ಥಾನಗಳನ್ನು ಪಡೆದುಕೊಂಡು ಪ್ರಬಲ ವಿಪಕ್ಷಗಳ ಮೈತ್ರಿಕೂಟವಾಗಿದೆ. ಲೋಕಸಭೆ ಫಲಿತಾಂಶಗಳನ್ನು ನರೇಂದ್ರ ಮೋದಿ ವಿರುದ್ಧದ ದೊಡ್ಡ ಜನಾದೇಶ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...