ವಕ್ಫ್ ಆಸ್ತಿ ಕಾಪಾಡ್ತೀವಿ ಎಂದಿದ್ದ ಬಿಜೆಪಿಯವರು ಈಗ ಡಬಲ್ ಗೇಮ್ ಆಡಬಹುದಾ: ಸಿದ್ದರಾಮಯ್ಯ ಪ್ರಶ್ನೆ

Date:

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು. ಈಗ ರಾಜಕೀಯ ಕಾರಣಕ್ಕಾಗಿ ವಿರುದ್ಧವಾಗಿ ಮಾತನಾಡುತ್ತಾರೆ. ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಬಿಜೆಪಿ ರಾಜಕಾರಣಕ್ಕಾಗಿ ಈ ವಿಚಾರವನ್ನು ಇಟ್ಟುಕೊಂಡು ಹೋರಾಡುತ್ತಿದ್ದಾರೆ. ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟಿಸ್‌ ಕೊಡಲಾಗಿದೆ” ಎಂದರು.

“ವಕ್ಫ್ ಆಸ್ತಿ ವಿಚಾರ ನಮಗೆ ಗೊತ್ತಾದ ತಕ್ಷಣವೇ ನೋಟೀಸು ಹಿಂಪಡೆಯಲಾಗಿದೆ . ಬಿಜೆಪಿ ಅವಧಿಯಲ್ಲಿ 216 ಪ್ರಕರಣಗಳಲ್ಲಿ ನೋಟಿಸ್‌ ಕೊಡಲಾಗಿದೆ. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಹೆಚ್.ಡಿ ಕುಮಾಸ್ವಾಮಿ ಇದ್ದಾಗ ಏಕೆ ನೋಟಿಸ್ ಕೊಟ್ಟಿದ್ದಾರೆ?‌ ಬಿಜೆಪಿಯ ಈ ಡಬಲ್‌ ಗೇಮ್ ವಿಚಾರವನ್ನು ಜನರಿಗೆ ನಾವು ತಲುಪಿಸುತ್ತೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕಕ್ಕೆ ಅನ್ಯಾಯ

16ನೇ ಹಣಕಾಸು ಆಯೋಗದವರು ಬೆಂಗಳೂರಿಗೆ ಭೇಟಿ ನೀಡಿದಾಗ 15ನೇ ಹಣಕಾಸು ಆಯೋಗದಿಂದ ಕರ್ನಾಟಕಕ್ಕೆ ಅನ್ಯಾಯವಾಗಿರುವ ಬಗ್ಗೆ ಗಮನ ಸೆಳೆದಿದ್ದೇವೆ. ಸುಮಾರು 4.50 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಮೊತ್ತವನ್ನು ವರ್ಷಕ್ಕೆ ತೆರಿಗೆ ನೀಡುತ್ತಿದ್ದೇವೆ. ಅದರಲ್ಲಿ ನಮಗೆ ವಾಪಸ್ಸು ಬರುವುದು 55 ರಿಂದ 60 ಸಾವಿರ ಕೋಟಿ ರೂ. ಮಾತ್ರ. ಇದು ನ್ಯಾಯವೇ? ಎಂದು ಪ್ರಶ್ನಿಸಿದರು.

“ಈ ಬಗ್ಗೆ ನಾವು ನ್ಯಾಯಕ್ಕಾಗಿ ಹೋರಾಡುತ್ತಿದ್ದೇವೆ. ಬಿಜೆಪಿಯ ಪ್ರಲ್ಹಾದ್ ಜೋಶಿ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರು ಈ ಬಗ್ಗೆ ಮಾತನಾಡಿದ್ದಾರೆಯೇ? ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದರೆ ಅದು ರಾಜಕೀಯ ಎಂದರೆ ಏನು ಹೇಳಬೇಕು?” ಎಂದರು

ಹಣಕಾಸು ಆಯೋಗ ಶಿಫಾರಸು ಮಾಡಿದ್ದ ವಿಶೇಷ ಅನುದಾನ ನೀಡಿದ್ದರೆ ರಾಜಕೀಯ ಬಿಟ್ಟುಬಿಡುವೆ. 11,495 ಕೋಟಿ ರೂ. ಕೊಟ್ಟಿದ್ದಾರೆಯೇ? ಕೊಟ್ಟಿದ್ದರೆ ನಾನು ರಾಜಕೀಯ ಬಿಟ್ಟುಬಿಡುವೆ. ಪ್ರಲ್ಹಾದ್‌ ಜೋಶಿ ಬಿಡುತ್ತಾರೆಯೇ ಕೇಳಿ ಎಂದು ಪ್ರಶ್ನಿಸಿದರು. ಅವರು ಸುಳ್ಳು ಹೇಳಿದ್ದನ್ನು ಕೇಳಿ ಬರೆಯುತ್ತೀರಿ” ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು.

ಪ್ರತಾಪ್ ಸಿಂಹ ಮಹಾನ್ ಕೋಮುವಾದಿ

ಮಾಜಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿಗಳು ಸಂಪೂರ್ಣ ಮುಸ್ಲಿಂ ಆಗಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಅವರೊಬ್ಬ ಮಹಾನ್ ಕೋಮುವಾದಿ. ಕೋಮುವಾದಿಗಳಿಂದ ಇನ್ನೇನು ನಿರೀಕ್ಷೆ ಮಾಡಲಾಗುತ್ತದೆ. ಅವರಿಗೆ ಸಂವಿಧಾನ, ಪ್ರಜಾಪ್ರಭುತ್ವದ ಬಗ್ಗೆ ಗೌರವವಿಲ್ಲ. ಕೋಮುವಾದ ಮಾಡುವುದೇ ಅವರ ಕಸುಬು. ಸಮಾಜವನ್ನು ಜಾತಿ, ಧರ್ಮದ ಹೆಸರಿನಲ್ಲಿ ಒಡೆಯುವುದೇ ಅವರ ರಾಜಕಾರಣ. ಕೋಮುವಾದದಲ್ಲಿ ತೊಡಗಿ ರಾಜಕೀಯದಲ್ಲಿ ಬದುಕಲು ಹಾಗೂ ಮತ ಪಡೆಯಲು ಪ್ರಯತ್ನ ಮಾಡುತ್ತಾರೆ” ಎಂದು ಟೀಕಿಸಿದರು.

ಶಿಗ್ಗಾಂವಿ ಗೆಲ್ಲಲಿದ್ದೇವೆ : ಸಿಎಂ ವಿಶ್ವಾಸ

“ಇಂದು ಮತ್ತು ನಾಳೆ ಎರಡು ದಿನ ಶಿಗ್ಗಾಂವಿ ಕ್ಷೇತ್ರದಲ್ಲಿ ಪ್ರಚಾರ ಮಾಡಲಾಗುವುದು. ಶಿಗ್ಗಾಂವಿ ಕ್ಷೇತ್ರದಲ್ಲಿ ಹಿಂದೆಯೂ ಪ್ರಚಾರ ಮಾಡಿದ್ದೇನೆ. ಕೊನೆಯಲ್ಲಿ ಅಭ್ಯರ್ಥಿಯನ್ನು ನಿಗದಿ ಮಾಡಿದ್ದರಿಂದ ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಇಲ್ಲಿಗೆ ಭೇಟಿ ನೀಡಲಾಗಲಿಲ್ಲ. ಈ ಬಾರಿ ಮೂರು ದಿನ ಶಿಗ್ಗಾಂವಿ ಭೇಟಿ ನೀಡುತ್ತಿದ್ದು, ಶಿಗ್ಗಾಂವಿ ಯಲ್ಲಿ ನೂರಕ್ಕೇ ನೂರು ಗೆಲ್ಲಲಿದ್ದೇವೆ” ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...