‘ಬ್ರ್ಯಾಂಡ್ ಬೆಂಗಳೂರು’ ಮಾಡಲಾಗದವರು ‘ಗ್ರೇಟರ್ ಬೆಂಗಳೂರು’ ಮಾಡುತ್ತಾರಾ: ಛಲವಾದಿ ಪ್ರಶ್ನೆ

Date:

ಬಿಬಿಎಂಪಿಗೆ ಚುನಾವಣೆ ಮುಂದೂಡುತ್ತ ಹೋಗುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಚ್ಯುತಿ ಬರುವ ಕೆಲಸ.
ಬೆಂಗಳೂರನ್ನು ಏಳು ಭಾಗ ಮಾಡುವುದು ಸರಿಯಾದ ಕ್ರಮ ಅಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರು.

ರಾಜ್ಯ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಗ್ರೇಟರ್ ಬೆಂಗಳೂರು ಮಾಡಿ ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಛಿದ್ರಗೊಳಿಸಲು ನೀವು ಹೊರಟಿದ್ದೀರಿ. ಇದು ಬೆಂಗಳೂರನ್ನು ಒಗ್ಗಟ್ಟಾಗಿ ಇಟ್ಟು ಉತ್ತಮವಾಗಿ ಬೆಳೆಸಬೇಕೆಂಬ ನೀತಿಯಲ್ಲ. ಬ್ರ್ಯಾಂಡ್ ಬೆಂಗಳೂರು ಎನ್ನುತ್ತಿದ್ದವರು ಈಗ ಗ್ರೇಟರ್ ಬೆಂಗಳೂರಿಗೆ ಯಾಕೆ ಹೋದರು? ಬ್ರ್ಯಾಂಡ್ ಬೆಂಗಳೂರು ಮಾಡಲು ಆಗದವರು ಯಾವ ಗ್ರೇಟರ್ ಬೆಂಗಳೂರು ಮಾಡುತ್ತಾರ” ಎಂದು ಪ್ರಶ್ನಿಸಿದರು.

“ಈಗಾಗಲೇ ಬೆಂಗಳೂರು ಹಾಳಾಗೋಗಿದೆ. ಎಲ್ಲಿ ಬಾಂಬ್ ಹಾಕಬೇಕೋ, ಎಲ್ಲಿ ಏನೇನು ಮಾಡಬೇಕೋ ಅದನ್ನೆಲ್ಲ ಮಾಡುತ್ತಿದ್ದಾರೆ. ಅಂಥವುಗಳನ್ನು ತಡೆದು ಬೆಂಗಳೂರನ್ನು ಇನ್ನಷ್ಟು ಸುಭದ್ರಗೊಳಿಸಬೇಕಿದೆ. ಇದೆಲ್ಲ ಬಿಟ್ಟು ಆರು ಭಾಗ, ಏಳು ಭಾಗ ಮಾಡಿ ಮೇಯರ್ ಹುದ್ದೆ ಸೃಷ್ಟಿ ಮಾಡಲು ಹೊರಟಿದ್ದೀರಿ. ಮೇಯುವವರಿಗೆ ಅವಕಾಶ ಸಿಗುತ್ತದೆಯೇ ಹೊರತು ಬೆಂಗಳೂರನ್ನು ಕಟ್ಟುವವರಿಗೆ ಅವಕಾಶ ಕೊಡಬೇಕಲ್ಲವೇ? ಸರಕಾರ ಅದರಲ್ಲಿ ಎಡವಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇವರು ಬಂದರೂ ಬೆಂಗಳೂರನ್ನು ಕಾಪಾಡಲಾಗದು ಎಂದರೆ ನಿಮ್ಮ ಕೆಲಸ ಏನು? ರಾಜೀನಾಮೆ ಕೊಟ್ಟು ತೊಲಗಿ, ಬಂದವರು ಯಾರೋ ಆಡಳಿತ ಮಾಡುತ್ತಾರೆ. ನಿಮಗಿಂತ ಚೆನ್ನಾಗಿ ನಾವು ಬೆಂಗಳೂರು ಕಟ್ಟಬಲ್ಲೆವು. ಕೈಲಾಗದವರು ಮೈ ಪರಚಿಕೊಂಡರಂತೆ; ಹಾಗೆ ಮಾಡುತ್ತೇವೆ, ಹೀಗೆ ಮಾಡುತ್ತೇವೆಂದು ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ. ಅವರು ಇನ್ನೂ ಗ್ಯಾರಂಟಿಗಳಿಂದ ಹೊರಬಂದಿಲ್ಲ” ಎಂದರು.

“ಕನ್ನಡದ ಜನರ ಮೇಲೆ ಇವತ್ತು ಗಡಿಭಾಗದಲ್ಲಿ ದಾಳಿ ನಡೆದಿದೆ. ಪುಂಡಾಟಿಕೆ ನಡೆಯುತ್ತಿದೆ. ನಿಮ್ಮ ಆಡಳಿತ ವ್ಯವಸ್ಥೆ ಕುಸಿದುಬಿದ್ದಿದೆ. ಕಾನೂನು- ಸುವ್ಯವಸ್ಥೆ ಕಾಪಾಡಲು ನಿಮ್ಮಿಂದ ಆಗುತ್ತಿಲ್ಲ. ಒಂದೆಡೆ ಪೊಲೀಸ್ ಠಾಣೆಗಳ ಮೇಲೆ ಕಲ್ಲು ತೂರಾಟ, ಬೆಂಕಿ ಹಚ್ಚುವ ಕೆಲಸ ನಡೆಯುತ್ತಿದೆ. ನನ್ನ ಬ್ರದರ್ ಎಂದು ಸರ್ಟಿಫಿಕೇಟ್ ಕೊಡುತ್ತೀರಲ್ಲವೇ? ಈಗ ನಿಮ್ಮ ಬ್ರದರ್‌ಗಳಿಗೆ ಬುದ್ಧಿ ಹೇಳಿ” ಎಂದು ಆಗ್ರಹಿಸಿದರು.

“ಮುಖ್ಯಮಂತ್ರಿಗಳು ಮುಡಾ ಮೂಡಿನಲ್ಲೇ ಇದ್ದಾರೆ. ಅವರ ಮೂಡ್ ಇನ್ನೂ ಬದಲಾಗಿಲ್ಲ. ಮುಡಾ ಅವರನ್ನು ಕಾಡುತ್ತಿದೆ. ಮುಡಾ ಇಲ್ಲಿಗೇ ನಿಲ್ಲುವಂಥದ್ದಲ್ಲ. ನೀವು ಯಾರಿಂದ ಏನು ಬೇಕಾದರೂ ಸರ್ಟಿಫಿಕೇಟ್ ತೆಗೆದುಕೊಳ್ಳಿ. ಈ ದೇಶದ ಕಾನೂನು ಸತ್ತಿಲ್ಲ. ಕೋರ್ಟ್‍ಗಳು ಉತ್ತಮವಾಗಿಯೇ ನಡೆಯುತ್ತಿದ್ದು, ನ್ಯಾಯ ಕೊಡುವ ಕೆಲಸ ಮಾಡಿಯೇ ಮಾಡುತ್ತವೆ. ಮುಡಾ ವಿಚಾರದಲ್ಲಿ ನೀವು ಜೈಲಿಗೆ ಹೋಗುವುದನ್ನು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...