ಅನಂತಕುಮಾರ್ ಹೆಗಡೆಯಂಥವರನ್ನು ಸುಸಂಸ್ಕೃತರು ಅಂತ ಹೇಳಕ್ಕಾಗುತ್ತಾ? ಸಿಎಂ ಸಿದ್ದರಾಮಯ್ಯ

Date:

ಅಯೋಧ್ಯೆಯ ರಾಮಮಂದಿರದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಅನಂತಕುಮಾರ್ ಹೆಗಡೆಯ ಬಗ್ಗೆ ಪತ್ರಕರ್ತರು ಕೇಳಿದ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಅನಂತಕುಮಾರ್ ಹೆಗಡೆಯಂಥವರನ್ನು ಸುಸಂಸ್ಕೃತರು ಅಂತ ಹೇಳಕ್ಕಾಗುತ್ತಾ” ಎಂದು ಪ್ರಶ್ನಿಸಿದ್ದಾರೆ.

ಲಿಂಗಾಯತ ಧರ್ಮ ಸಂಸ್ಥಾಪನಾ ದಿನದ ಅಂಗವಾಗಿ ಕೂಡಲ ಸಂಗಮದಲ್ಲಿ ಆಯೋಜಿಸಿದ್ದ 37ನೇ ಶರಣ ಮೇಳವನ್ನು ಉದ್ಘಾಟಿಸಲು ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ, “ಅನಂತಕುಮಾರ್ ಹೆಗಡೆ ಕೇಂದ್ರ ಸರ್ಕಾರದಲ್ಲಿ ಮಂತ್ರಿಯಾಗಿದ್ದಾಗ ನಾವು ಅಧಿಕಾರಕ್ಕೆ ಬಂದಿರೋದೇ ಸಂವಿಧಾನವನ್ನು ಬದಲಾಯಿಸಲು ಅಂತ ಹೇಳಿಕೆ ನೀಡಿದ್ದರು. ಇಂಥವರಿಂದ ನಾವು ಸಂಸ್ಕೃತಿಯನ್ನು ಬಯಸಲಿಕ್ಕಾಗುತ್ತದಾ? ಅನಂತಕುಮಾರ್ ಹೆಗಡೆಯಂಥವರನ್ನು ಸುಸಂಸ್ಕೃತರು ಅಂತ ಹೇಳಕ್ಕಾಗುತ್ತಾ?” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅನಂತಕುಮಾರ್ ಹೆಗಡೆಯಂಥವರ ಬಾಯಲ್ಲಿ ಇಂಥದ್ದೇ ಭಾಷೆ ಬಳಕೆಯಾಗುವುದು. ರಾಜ್ಯದ ಮುಖ್ಯಮಂತ್ರಿಗಳಿಗೆ ಗೌರವ ಕೊಡುವವರೂ ಇದ್ದಾರೆ. ಕೊಡದೇ ಇರುವವರೂ ಇದ್ದಾರೆ. ರಾಜಕೀಯವಾಗಿ ಮಾತನಾಡುವವರಲ್ಲಿ ಗೌರವ ಕೊಡಿ ಎಂದು ಕೇಳಕ್ಕಾಗುತ್ತದೆಯೇ?” ಎಂದು ಕೇಳಿದ ಸಿಎಂ ಸಿದ್ದರಾಮಯ್ಯ, “ಅವರು ರಾಜಕೀಯವಾಗಿ ಅಶ್ಲೀಲ ಪದಗಳನ್ನು ಬಳಸಿದರೆ ಅವರ ಗೌರವಕ್ಕೆ ಕುಂದು ಬರುತ್ತದೆಯೇ ವಿನಃ, ನನಗೇನೂ ಆಗಲ್ಲ. ಕೇಂದ್ರದ ಮಂತ್ರಿಯಾಗಿದ್ದವರಿಗೆ ಯಾವ ರೀತಿಯ ಭಾಷೆ ಬಳಸಬೇಕು ಎನ್ನುವುದು ಗೊತ್ತಿಲ್ಲದಿದ್ದರೆ ಅವರು ಸುಸಂಸ್ಕೃತರಲ್ಲ. ಮನುಷ್ಯರಲ್ಲ. ಅಮಾನವೀಯವಾದಂಥವರು ಅನ್ನುವುದಷ್ಟೇ ತೋರುತ್ತದೆ” ಎಂದು ತಿಳಿಸಿದರು.

ಕುಮಟಾದಲ್ಲಿ ನಡೆದಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ, ಅಯೋಧ್ಯೆಯ ರಾಮಮಂದಿರದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ, “ನೀನು ಬಾ, ಇಲ್ಲ ಬಿಡು. ರಾಮ ಜನ್ಮಭೂಮಿ ಏನೂ ನಿಲ್ಲೋದಿಲ್ಲ ಮಗನೇ” ಎಂದು ನಿಂದಿಸಿದ್ದರು.

ಇದನ್ನು ಓದಿದ್ದೀರಾ? ಬಾಬರಿ ಮಸೀದಿಯಂತೆಯೇ ಭಟ್ಕಳದ ಪಳ್ಳಿಯನ್ನೂ ಒಡೆಯುತ್ತೇವೆ: ಬಿಜೆಪಿ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ

“ನಾನು ಅಯೋಧ್ಯೆಗೆ ಹೋಗುತ್ತೇನೆ. ಆದರೆ 22ಕ್ಕೆ ಹೋಗಲ್ಲ. ಆಮೇಲೆ ಹೊಗುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಮೊದಲು ಹೋಗಲ್ಲ ಅಂದಿದ್ದವರು ಈಗ ಹೋಗುತ್ತೇನೆ ಎನ್ನುತ್ತಿದ್ದಾರೆ. ಇದು ಹಿಂದೂ ಸಮಾಜದ ತಾಕತ್ತು, ಧಮ್ಮು” ಎಂದು ಹೆಗಡೆ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಈಗ ರಾಜ್ಯ ರಾಜಕೀಯದಲ್ಲಿ ವಿವಾದವನ್ನು ಎಬ್ಬಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...