ಎಲ್ಲ ಪಕ್ಷಗಳೂ ಹಣ ಹಂಚಿವೆ, ಆಯೋಗ ಭ್ರಷ್ಟಾಚಾರದ ಚುನಾವಣೆ ನಡೆಸಿದೆ: ವಾಟಾಳ್ ನಾಗರಾಜ್ ಕಿಡಿ

Date:

  • ಪಾರದರ್ಶಕ ಚುನಾವಣೆ ಸಲುವಾಗಿ ಮರುಚುನಾವಣೆ ನಡೆಸಿ ಎಂದ ವಾಟಾಳ್ ನಾಗರಾಜ್
  • ಭ್ರಷ್ಟಾಚಾರದಲ್ಲಿ ತೊಡಗಿದ ಜನಪ್ರತಿನಿಧಿಗಳನ್ನು ವಜಾಗೊಳಿಸಲು ನಾಗರಾಜ್ ಆಗ್ರಹ

ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಟ್ಟಿರುವ 2023ರ ಸಾಲಿನ ವಿಧಾನಸೌಧ ಚುನಾವಣೆ ರದ್ದುಗೊಳಿಸಿ, ಮರು ಚುನಾವಣೆ ನಡೆಸಬೇಕು ಎಂದು ಕನ್ನಡ ವಾಟಾಳ್‌ ಪಕ್ಷದ ವಾಟಾಳ್‌ ನಾಗರಾಜ್‌ ಆಗ್ರಹಿಸಿದರು.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು ಸೋಲಿಗೆ ಎಂದೂ ಹೆದರಿದವನಲ್ಲ. ಭ್ರಷ್ಟಾಚಾರದ ಚುನಾವಣೆ ಮಾಡಿದ ಆಯೋಗಕ್ಕೆ ನನ್ನ ಧಿಕ್ಕಾರ. ಚುನಾವಣಾ ಆಯೋಗ ಭ್ರಷ್ಟಾಚಾರದ ಚುನಾವಣೆ ನಡೆಸಿದೆ. ಇದರ ವಿರುದ್ದ ಚಳವಳಿ ನಡೆಸುತ್ತೇನೆ ಎಂದು ಅವರು ಹೇಳಿದರು.

ಎಲ್ಲ ಪಕ್ಷಗಳೂ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆದುಕೊಂಡಿವೆ. ಹಣ ಹಂಚಿ ಚುನಾವಣೆ ಮಾಡಿವೆ. ಈ ರೀತಿಯ ಚುನಾವಣೆಗೆ ಅವಕಾಶ ನೀಡಿದ ಆಯೋಗ ನಿಜಕ್ಕೂ ಹೊಣೆಗೇಡಿ ಎಂದು ವಾಟಾಳ್ ನಾಗರಾಜ್ ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನರ ಒತ್ತಾಯದ ಮೇರೆಗೆ ನಾನು ಚಾಮರಾಜನಗರದಲ್ಲಿ ಕಣಕ್ಕಿಳಿದಿದ್ದೆ. ತತ್ವ ಸಿದ್ದಾಂತದ ಪರ ನಾನು ಎಂದಿಗೂ ಹೋರಾಟ ನಡೆಸಿದ್ದೆ. ಇದಕ್ಕೆ ಜನ ಮನ್ನಣೆ ಕೊಡಲಿಲ್ಲ. ಹೀಗಾಗಿ ನಾನು ಇನ್ನುಮಂದೆ ಈ ಜಿಲ್ಲೆಯಿಂದ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದರು.

ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಪಕ್ಷವೊಂದರ ಪರ ಪ್ರಚಾರ ಮಾಡಲು ಸರ್ಕಾರಿ ಆದಾಯ ವಿನಿಯೋಗ ಮಾಡಿದ್ದು, ಸಾರ್ವಜನಿಕ ಸೇವಾ ವಲಯದ ಇಲಾಖೆಗಳನ್ನ ತಮ್ಮ ಕೆಲಸಕ್ಕೆ ಬಳಸಿಕೊಂಡಿದ್ದಾರೆ. ಇವರ ಮೇಲೂ ಕ್ರಮ ಜರುಗಿಸುವಂತಾಗಬೇಕು ಎಂದು ಅವರು ಹೇಳಿದರು.

ಪಕ್ಷದ ಪರ ಪ್ರಚಾರ ಮಾಡಲು ಬರುವ ಇವರುಗಳು ರಾಜೀನಾಮೆ ನೀಡಿ ಪ್ರಚಾರದಲ್ಲಿ ತೊಡಗಿಸಿಕೊಳ್ಳಬೇಕಿತ್ತು ಎಂದು ವಾಟಾಳ್ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?:ರಾಜ್ಯದಲ್ಲಿ ಅತಂತ್ರ ಅಲ್ಲ, ಕಾಂಗ್ರೆಸ್‌ನ ಸ್ವತಂತ್ರ ಸರ್ಕಾರ: ಸಿದ್ದರಾಮಯ್ಯ–ಡಿಕೆಶಿ ವಿಶ್ವಾಸ

ಭ್ರಷ್ಟಾಚಾರಯುಕ್ತ ಚುನಾವಣೆಯನ್ನು ರದ್ದು ಮಾಡಬೇಕು. ಇದು ಭ್ರಷ್ಟಾಚಾರದ ಪರಮಾವಧಿ. ಈ ದೃಷ್ಟಿಯಿಂದ ಚುನಾವಣೆ ರದ್ದು ಮಾಡಿ ಪ್ರಾಮಾಣಿಕ ಪಾರದರ್ಶಕ ಚುನಾವಣೆ ನಡೆಸಲಿ ಎಂದು ಒತ್ತಾಯಿಸಿದರು.

ಹಿಂದೆ ಟಿ ಎನ್ ಶೇಷನ್ ಎನ್ನುವ ಚುನಾವಣಾಧಿಕಾರಿ ಇದ್ದರು. ಅವರ ಅವಧಿಯಲ್ಲಿ ಭ್ರಷ್ಟಾಚಾರ ರಹಿತ ಚುನಾವಣೆ ನಡೆದಿತ್ತು. ಅಂತಹ ಚುನಾವಣೆಗಳು ಈಗ ನಡೆಯುವಂತಾಗಬೇಕು. ಜನ ಮತ್ತು ಮಾಧ್ಯಮಗಳು ಈ ನಿಟ್ಟಿನಲ್ಲಿ ಜಾಗೃತರಾಗಬೇಕು ಎಂದು ವಾಟಾಳ್ ಕರೆನೀಡಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...