ಹಣದ ಕೊರತೆ | ಚುನಾವಣಾ ನಿಧಿ ಸಂಗ್ರಹಿಸಲು ರಾಜ್ಯ ಘಟಕಗಳಿಗೆ ಕಾಂಗ್ರೆಸ್ ಹೈಕಮಾಂಡ್‌ ಸೂಚನೆ

Date:

ಆದಾಯ ತೆರಿಗೆ ಇಲಾಖೆಯಿಂದ ಹಲವಾರು ಐಟಿ ನೋಟಿಸ್‌ಗಳನ್ನು ಪಡೆದಿರುವ ಕಾಂಗ್ರೆಸ್‌, ಮುಂಬರುವ ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಹಣದ ಕೊರತೆ ಎದುರಿಸುತ್ತಿದೆ. ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ತನ್ನ ಜಾಹೀರಾತು ವೆಚ್ಚವನ್ನು ಕಡಿತಗೊಳಿಸಿದೆ. ಜೊತೆಗೆ, ಚುನಾವಣಾ ನಿಧಿ ಸಂಗ್ರಹಿಸಲು ರಾಜ್ಯ ಘಟಕಗಳಿಗೆ ಕಾಂಗ್ರೆಸ್ ಸೂಚಿಸಿದೆ.

ಪಕ್ಷದ ಹೈಕಮಾಂಡ್ ಈಗಾಗಲೇ ಎಲ್ಲ ರಾಜ್ಯ ಘಟಕಗಳಿಗೆ ಮನೆ ಮನೆಗೆ ಪ್ರಚಾರದ ಮೂಲಕ ಅಥವಾ ಜನರನ್ನು ತಲುಪುವ ಮೂಲಕ ನಿಧಿ ಸಂಗ್ರಹಿಸಲು ತಿಳಿಸಿದೆ. ಹಾಗೆಯೇ ಸಾಮಾಜಿಕ ಮಾಧ್ಯಮ, ಪ್ರಭಾವಿಗಳಿಂದ ಭಾಷಣ ಮತ್ತು ಕೃತಕ ಬುದ್ಧಿಮತ್ತೆ (ಎಐ) ಬಳಕೆಯ ಮೂಲಕ ತನ್ನ ಚುನಾವಣಾ ಪ್ರಚಾರವನ್ನು ಮಾಡಿಕೊಳ್ಳುತ್ತಿದೆ.

ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಪಕ್ಷದ ಖಾತೆಗಳನ್ನು ನಿರ್ಬಂಧಿಸಿರುವ ಕಾರಣದಿಂದಾಗಿ ಪ್ರಚಾರಕ್ಕೆ 2 ರೂಪಾಯಿ ಖರ್ಚು ಮಾಡಲು ಕೂಡಾ ಹಿಂದೆ ಮುಂದೆ ನೋಡುವಂತಾಗಿದೆ” ಎಂದು ಹೇಳಿದ್ದಾರೆ. “ಕೇಂದ್ರದ ಬಿಜೆಪಿ ಸರ್ಕಾರವು ವಿಪಕ್ಷಗಳನ್ನು ಆರ್ಥಿಕವಾಗಿ ದುರ್ಬಲಗೊಳಿಸುತ್ತಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಾಂಗ್ರೆಸ್‌ಗೆ ಮತ್ತೆ ಐಟಿ ನೋಟಿಸ್; ಒಟ್ಟು 3,567 ಕೋಟಿ ರೂ. ತೆರಿಗೆ ಪಾವತಿ ಬೇಡಿಕೆ!

“ತಮಿಳುನಾಡಿನಲ್ಲಿ ಕಾಂಗ್ರೆಸ್ ಈಗಾಗಲೇ ಕ್ರೌಡ್ ಫಂಡಿಂಗ್ ಮೂಲಕ ನಿಧಿ ಸಂಗ್ರಹಿಸಲು ಪ್ರಾರಂಭಿಸಿದೆ” ಎಂದು ವಿರುದುನಗರದಿಂದ ಸತತ ನಾಲ್ಕನೇ ಬಾರಿಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಸಂಸದ ಬಿ ಮಾಣಿಕಂ ಟ್ಯಾಗೋರ್ ಹೇಳಿದ್ದಾರೆ.

“ಬಿಜೆಪಿಯು ಪ್ರತಿಪಕ್ಷಗಳನ್ನು ನಾಶ ಮಾಡಲು ಇಡಿ ಮತ್ತು ಆದಾಯ ತೆರಿಗೆ ಇಲಾಖೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಇದನ್ನು ನಾವು ಮನೆ ಮನೆಗೆ ಹೋಗಿ ಪ್ರಚಾರ ಮಾಡುತ್ತಿದ್ದೇವೆ. ವೆಚ್ಚವನ್ನು ಆದಷ್ಟು ಕಡಿಮೆ ಮಾಡುತ್ತಿದ್ದೇವೆ. ರಾಷ್ಟ್ರೀಯ ಮಾಧ್ಯಮಗಳಲ್ಲಿ ಒಂದು ದಿನದ ಪ್ರಚಾರಕ್ಕೆ 50 ಕೋಟಿ ರೂಪಾಯಿ ವೆಚ್ಚವಾಗಬಹುದು. ನಮ್ಮ ಬಳಿ ಅಷ್ಟೊಂದು ಹಣವಿಲ್ಲ” ಎಂದು ತಿಳಿಸಿದರು.

“ನಾವು ಜನರ ಬಳಿಗೆ ಹೋಗಿ ದೇಣಿಗೆ ನೀಡುವಂತೆ ಕೇಳುತ್ತಿದ್ದೇವೆ. ರಾಜ್ಯ ಘಟಕವು ಈಗಾಗಲೇ ಕ್ರೌಡ್ ಫಂಡಿಂಗ್ ಮೂಲಕ ಹಣವನ್ನು ಸಂಗ್ರಹಿಸುತ್ತಿದೆ. ಚುನಾವಣೆ ಸಂದರ್ಭದಲ್ಲೇ ಐಟಿ ಕ್ರಮವು ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆಯಾಗಿದೆ. ಆರು ತಿಂಗಳ ಹಿಂದೆಯೇ ನಮಗೆ ತಿಳಿದಿದ್ದರೆ ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗುತ್ತಿತ್ತು” ಎಂದು ಅಭಿಪ್ರಾಯಿಸಿದರು.

ಇದನ್ನು ಓದಿದ್ದೀರಾ?  ಕಾಂಗ್ರೆಸ್‌ಗೆ ನೀಡಿರುವ ಐಟಿ ನೋಟಿಸ್‌ ಎಲ್ಲ ವಿಪಕ್ಷಗಳಿಗೆ ಎಚ್ಚರಿಕೆ ಸಂದೇಶ: ಪಿ ಚಿದಂಬರಂ

ಇನ್ನು ಲೋಕಸಭೆ ಚುನಾವಣೆಯ ಕಾಂಗ್ರೆಸ್ ವಾರ್ ರೂಮ್ ಅಧ್ಯಕ್ಷ ವೈಭವ್ ವಾಲಿಯಾ ಮಾತನಾಡಿ, “ಹಣದ ಕೊರತೆಯಿಂದಾಗಿ, ಮುದ್ರಣ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಜಾಹೀರಾತು ವೆಚ್ಚದಲ್ಲಿ ಕಾಂಗ್ರೆಸ್ ಬಿಜೆಪಿಗಿಂತ ಹಿಂದುಳಿದಿದೆ. ಮೊದಲ ಹಂತದ ಚುನಾವಣೆಗೆ ಕೇವಲ 19 ದಿನಗಳು ಬಾಕಿಯಿದೆ, ಆದರೆ ನಾವು ಈವರೆಗೂ ಪತ್ರಿಕೆ ಅಥವಾ ಟಿವಿಯಲ್ಲಿ ಪ್ರಚಾರ ಆರಂಭಿಸಿಲ್ಲ. ನಾವೀಗ ಸಾಮಾಜಿಕ ಜಾಲತಾಣವನ್ನೇ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದೇವೆ. ನಾವು ಚುನಾವಣಾ ಬಾಂಡ್‌ಗಳ ಕುರಿತು ಜಾಹೀರಾತು ನೀಡಲು ಪ್ರಯತ್ನಿಸಿದರೂ, ಹೆಚ್ಚಿನ ಪತ್ರಿಕೆಗಳು ಅದನ್ನು ಪ್ರಕಟಿಸಲು ನಿರಾಕರಿಸಿದವು” ಎಂದು ಆರೋಪಿಸಿದರು.

ಇನ್ನು ಕೇರಳದಲ್ಲಿ ಚುನಾವಣಾ ನಿಧಿ ಸಂಗ್ರಹಕ್ಕಾಗಿ ಕೇಂದ್ರ ನಾಯಕತ್ವವು ಸೂಚಿಸಿದ ಬೆನ್ನಲ್ಲೇ ಕೂಪನ್‌ಗಳನ್ನು ಮುದ್ರಿಸಲು ಮತ್ತು ಅವುಗಳನ್ನು ಬೂತ್ ಮಟ್ಟದಲ್ಲಿ ವಿತರಿಸಲು ಕೇರಳ ಕಾಂಗ್ರೆಸ್ ನಿರ್ಧರಿಸಿದೆ. ಇನ್ನು ಒಡಿಶಾದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಆಕಾಂಕ್ಷಿ ಅಭ್ಯರ್ಥಿಗಳಿಂದ ತಲಾ 50,000 ರೂಪಾಯಿ ಸಂಗ್ರಹಿಸಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...