ಜಾತಿಗಣತಿ ರಾಜಕೀಯ ಪ್ರೇರಿತ; ಅದಕ್ಕೆ ನಮ್ಮ ಸಂಪೂರ್ಣ ವಿರೋಧ ಇದೆ: ಡಾ.ಅಶ್ವತ್ಥ್ ನಾರಾಯಣ

Date:

ಜಾತಿಗಣತಿ ವರದಿ ರಾಜಕೀಯ ಪ್ರೇರಿತ. ಹಾಗಾಗಿ ಅದಕ್ಕೆ ನಮ್ಮ ಸಂಪೂರ್ಣ ವಿರೋಧ ಇದೆ ಎಂದು ಮಲ್ಲೇಶ್ವರಂ ಬಿಜೆಪಿ ಶಾಸಕ, ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ(ನ.22)ದಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಸರ್ಕಾರ ಜನರಿಗೆ ಗುಣಮಟ್ಟದ ಆರೋಗ್ಯ ವ್ಯವಸ್ಥೆ ಕಲ್ಪಿಸುತ್ತಿಲ್ಲ. ಕುಡಿಯುವ ನೀರಿನಿಂದ ಹಿಡಿದು ಎಲ್ಲ ಮೂಲಭೂತ ಸೌಕರ್ಯವನ್ನು ನೀಡುತ್ತಿಲ್ಲ. ಈ ಯಾವುದಕ್ಕೂ ಸಿಎಂ ಸಿದ್ದರಾಮಯ್ಯನವರಲ್ಲಿ ಉತ್ತರವಿಲ್ಲ. ಕಾಂತರಾಜ್ ವರದಿಯ ಮೂಲಕ ಬರೀ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.

ರಾಜ್ಯ ಸರ್ಕಾರ ಸದುದ್ದೇಶದಿಂದ ಜಾತಿಗಣತಿ ವರದಿ ಪಡೆಯುತ್ತಿಲ್ಲ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಿನಿಂದ ರಾಜಕೀಯ ಮಾಡುತ್ತಿದ್ದಾರೆ. ಈ ಸಮೀಕ್ಷೆ ಸರಿಯಾಗಿ ಆಗಿಲ್ಲ ಅಂತ ಪ್ರತಿಯೊಬ್ಬರೂ ಆರೋಪಿಸುತ್ತಿದ್ದಾರೆ. ಜಾತಿ ಗಣತಿಗೆ ನಮ್ಮ ಸಂಪೂರ್ಣ ವಿರೋಧ ಇದೆ. ಸರ್ಕಾರ ಈವರೆಗೆ ಒಂದೂ ಭರವಸೆದಾಯಕ ಕೆಲಸ ಮಾಡಿಲ್ಲ. ರಾಹುಲ್ ಹೇಳಿದರೆಂದು ವರದಿ ಮೇಲೆ ರಾಜಕೀಯ ಮಾಡ್ತಿದ್ದಾರೆ. ಸರ್ಕಾರದ ನಿಲುವು ನೋಡಿಕೊಂಡು ನಾವು ಮುಂದುವರಿಯುತ್ತೇವೆ ಎಂದು ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂತರಾಜ್ ವರದಿ ಸಮೀಕ್ಷೆ ಅಂತ ಹೇಳುತ್ತಿದ್ದಾರೆ. ಇದಕ್ಕೆ ಕಾನೂನಾತ್ಮಕವಾಗಿ ಅವಕಾಶವಿಲ್ಲ. ಸರ್ವರಿಗೂ ಸಮಪಾಲು, ಸಮಪಾಲು ಎಂಬುದು ನಮ್ಮ ಸದುದ್ದೇಶ ಎಂದು ಸಿಎಂ ಹೇಳುತ್ತಿದ್ದಾರೆ. ಆದರೆ ಅದು ಹೇಳಿಕೆಗೆ ಮಾತ್ರ. ನಿಮಗೆ ಯಾವುದೇ ಸದುದ್ದೇಶವಿಲ್ಲ. ಎಲ್ಲವೂ ಸ್ವಾರ್ಥ. ಕುಟುಂಬ ಆಧಾರಿತವಾಗಿ ಕೆಲಸ ಮಾಡುತ್ತಿದ್ದೀರಾ. ಜನಗಳ ಬಗ್ಗೆ ನಿಮಗೆ ಎಳ್ಳಷ್ಟೂ ಕಾಳಜಿ ಇಲ್ಲ. ನಿಮ್ಮ ಎಲ್ಲ ನಡೆಗಳು ರಾಜಕೀಯ ಪ್ರೇರಿತವಾದುದು ಎಂದು ತಿಳಿಸಿದರು.

ನ.24ಕ್ಕೆ ಜಯಪ್ರಕಾಶ್ ಹೆಗಡೆ ಸರ್ಕಾರಕ್ಕೆ ಜಾತಿಗಣತಿ ವರದಿ ಸಲ್ಲಿಕೆ ಮಾಡುವ ಬಗ್ಗೆ ಮಾತನಾಡಿದ ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ, ‘ಎಲ್ಲವನ್ನೂ ನಾವು ಗಮನಿಸುತ್ತಿದ್ದೇವೆ. ಸರ್ಕಾರದ ನಡೆಯನ್ನು ನೋಡಿಕೊಂಡು ನಮ್ಮ ನಿಲುವನ್ನು ಕೂಡ ತಿಳಿಸುತ್ತೇವೆ. ನಮ್ಮ ಸಂಪೂರ್ಣ ವಿರೋಧ ಇದೆ’ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...