ಜಾತಿ ಗಣತಿ | ವೈಜ್ಞಾನಿಕ ಸಮೀಕ್ಷೆಗೆ ಹಲವು ಸಮುದಾಯಗಳ ಆಗ್ರಹ: ಡಿಕೆ ಶಿವಕುಮಾರ್

Date:

  • ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸುವುದು ಪಕ್ಷದ ನಿಲುವು
  • ನಾನು ಸಹಿ ಮಾಡಬಾರದೇ? ಎಷ್ಟು ಜನ ಮಂತ್ರಿಗಳು ಸಭೆ ಮಾಡಿಲ್ಲ?

“ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪಕ್ಷದ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ. ಆದರೆ ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ಆಗಬೇಕು ಎಂದು ವಿವಿಧ ಸಮುದಾಯಗಳು ಆಗ್ರಹಿಸಿವೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್  ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಬಳಿ ಜಾತಿ ಗಣತಿ ವರದಿ ತಿರಸ್ಕಾರಕ್ಕೆ ನೀವು ಸಹಮತ ವ್ಯಕ್ತಪಡಿಸಿದ್ದೀರಾ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು.

“ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಸಿಗಬೇಕು ಎಂದು ಅನೇಕ ಸಮುದಾಯಗಳು ಆಗ್ರಹ ಮಾಡಿವೆ. ಪರಿಶಿಷ್ಟರು, ಪಂಚಮಸಾಲಿ, ವೀರಶೈವರು, ಒಕ್ಕಲಿಗರು ಸೇರಿದಂತೆ ಹಲವರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟದಲ್ಲಿ ಪಕ್ಷಭೇದ ಮರೆತು ಹೋರಾಟ ಮಾಡಲಾಗುತ್ತಿದೆ. ಕೆಲ ಸಮುದಾಯ ಹಾಗೂ ಅದರ ನಾಯಕರು ಜಾತಿ ಗಣತಿ ಸಮೀಕ್ಷೆ ವೇಳೆ ನಮ್ಮನ್ನು ಸಂಪರ್ಕಿಸಿಲ್ಲ. ಹೀಗಾಗಿ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಮಾಡಬೇಕು ಎಂದು ಕೇಳುತ್ತಿವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೀವು ಕೂಡ ಪತ್ರಕ್ಕೆ ಸಹಿ ಹಾಕಿ ಮುಖ್ಯಮಂತ್ರಿಗಳಿಗೆ ರವಾನಿಸಿದ್ದೀರಾ ಎಂದು ಕೇಳಿದ ಪ್ರಶ್ನೆಗೆ, “ನಾನು ಸಹಿ ಮಾಡಬಾರದೇ? ಎಷ್ಟು ಜನ ಮಂತ್ರಿಗಳು ಈ ವಿಚಾರವಾಗಿ ಸಭೆ ಮಾಡಿಲ್ಲ? ಅದೇ ರೀತಿ ನಾನು ರಾಜಕೀಯ ಪಕ್ಕಕ್ಕಿಟ್ಟು ನಮ್ಮ ಸಮಾಜ, ಅದರ ಗೌರವ, ಅಭಿಮಾನ ಉಳಿಸಿಕೊಳ್ಳಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದೇನೆ. ಇದು ಎಲ್ಲಾ ನಾಯಕರಲ್ಲೂ ಇರುತ್ತದೆ” ಎಂದು ತಿಳಿಸಿದರು.

ನಿಗಮ ಮಂಡಳಿ: 28ಕ್ಕೆ ಮತ್ತೊಂದು ಸುತ್ತಿನ ಸಭೆ

”ನಿಗಮ ಮಂಡಳಿ ನೇಮಕ ವಿಚಾರವಾಗಿ ಚರ್ಚೆ ಮಾಡುತ್ತಿದ್ದೇವೆ. ಹಿರಿಯ ನಾಯಕರು, ಶಾಸಕರ ಅಭಿಪ್ರಾಯವನ್ನು ಪಡೆಯುತ್ತಿದ್ದೇವೆ. ನಾನು ಹಾಗೂ ಮುಖ್ಯಮಂತ್ರಿಗಳು ತೆಲಂಗಾಣ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಹೋಗಬೇಕಿದೆ. 28ರಂದು ನಮ್ಮ ದೆಹಲಿ ನಾಯಕರು ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಆ ಸಭೆ ಬಳಿಕ ನಮ್ಮ ಪಟ್ಟಿಯನ್ನು ಹೈಕಮಾಂಡ್ ನಾಯಕರಿಗೆ ಕಳುಹಿಸುತ್ತೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬ್ರ್ಯಾಂಡ್ ಬೆಂಗಳೂರಿನಲ್ಲಿ ಬಡವರ ಪ್ರಾಣಕ್ಕೆ ಗ್ಯಾರಂಟಿಯಿಲ್ಲ

ಗೃಹಸಚಿವರು ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಅಸಮಾಧಾನ ಹೊಂದಿದ್ದಾರೆಯೇ ಎಂದು ಕೇಳಿದಾಗ, “ಗೃಹಮಂತ್ರಿಗಳು ಮೂರು ದಿನಗಳ ಕಾಲ ಪ್ರವಾಸದಲ್ಲಿದ್ದರು, ಅವರಿಗೆ ಅವರದೇ ಆದ ಕೆಲಸಗಳಿರುತ್ತವೆ. ಸುಮ್ಮನೆ ಯಾರೋ ಹೇಳಿದ್ದನ್ನು ನೀವು (ಮಾಧ್ಯಮಗಳು) ದೊಡ್ಡದಾಗಿ ಬಿಂಬಿಸುತ್ತೀರಿ. ಅವರು ಯಾವ ಕಾರಣಕ್ಕೆ ಅಸಮಾಧಾನಗೊಳ್ಳುತ್ತಾರೆ? ಅಸಮಾಧಾನ ಆಗುವಂತಹದ್ದು ಏನಾಗಿದೆ? ಈ ರೀತಿ ಅಸಮಾಧಾನ ಸೃಷ್ಟಿಸಿ ನಿಮ್ಮ ಘನತೆ ಯಾಕೆ ಹಾಳುಮಾಡಿಕೊಳ್ಳುತ್ತೀರಿ” ಎಂದು ಪ್ರತಿಕ್ರಿಯಿಸಿದರು.

ಅವರ ಬೆಂಬಲಿಗರಿಗೆ ನಿಗಮ ಮಂಡಳಿ ಸ್ಥಾನದ ವಿಚಾರವಾಗಿ ಬೇಸರವಾಗಿದೆ ಎಂದು ಕೇಳಿದಾಗ, “ಇಲ್ಲಿ ಅವರ ಬೆಂಬಲಿಗರು, ನನ್ನ ಬೆಂಬಲಿಗರು ಎಂಬುದಿಲ್ಲ. ಎಲ್ಲ ಒಟ್ಟಾಗಿ ಕಾಂಗ್ರೆಸ್ ಬೆಂಬಲಿಗರು. ನನಗೆ, ಸಿಎಂ, ಗೃಹ ಸಚಿವರಿಗೆ ಬೆಂಬಲಿಗರು ಇಲ್ಲ. ಇರುವವರೆಲ್ಲಾ ಕಾಂಗ್ರೆಸ್ ಬೆಂಬಲಿಗರು. ಮಂತ್ರಿಗಿರಿ ಸಿಗದ ಹಿರಿಯ ಶಾಸಕರಿಗೆ ನಿಗಮ ಮಂಡಳಿ ಸ್ಥಾನ ನೀಡುವ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ನಿಗಮ ಮಂಡಳಿ ನೇಮಕ ವಿಳಂಬ ಮಾಡುತ್ತಿರುವುದು ಕಲೆಕ್ಷನ್ ಗಾಗಿ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ನಾವು ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ನಿಗಮ ಮಂಡಳಿ ನೇಮಕ ಮಾಡುತ್ತಿದ್ದೇವೆ. ಅವರು ಅಧಿಕಾರಕ್ಕೆ ಬಂದ ಎಷ್ಟು ವರ್ಷಗಳ ನಂತರ ಮಾಡಿದರು? ಅವರಿಗೆ ನಾಲ್ಕೈದು ಸಚಿವರನ್ನು ನೇಮಕ ಮಾಡಲಾಗದೇ ಮುಖ್ಯಮಂತ್ರಿಗಳೇ ಖಾತೆಯನ್ನು ಇಟ್ಟುಕೊಂಡಿದ್ದರು. ಬಿಜೆಪಿ ತಟ್ಟಿಯಲ್ಲಿ ಹೆಗಣ ಬಿದ್ದದ್ದು, ಮೊದಲು ಅದನ್ನು ನೋಡಿಕೊಳ್ಳಲಿ” ಎಂದು ತಿರುಗೇಟು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...