ಜಾತಿ ಗಣತಿ ವರದಿ ವೈಜ್ಞಾನಿಕ ದತ್ತಾಂಶ ಹೊಂದಿದೆ, ನಾನು ಓದಿದ್ದೇನೆ: ಗೃಹ ಸಚಿವ ಪರಮೇಶ್ವರ್‌

Date:

ಜಾತಿ ಗಣತಿ ವರದಿ ವೈಜ್ಞಾನಿಕ ದತ್ತಾಂಶವನ್ನು ಹೊಂದಿದೆ. ವರದಿ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಲು ಸಚಿವರಿಗೆ ಹೇಳಿದ್ದಾರೆ. ಚರ್ಚೆ ಮುಂದುವರಿದಿದ್ದು ಅವರವರ ಅಭಿಪ್ರಾಯ ತಿಳಿಸಲಿದ್ದಾರೆ. ಎಲ್ಲರ ಅಭಿಪ್ರಾಯ ಕೇಳಿದ ಬಳಿಕ ಸರ್ಕಾರ ಅಂತಿಮ ತೀರ್ಮಾನ ತಗೆದುಕೊಳ್ಳಲಿದೆ ಗೃಹ ಸಚಿವ ಪರಮೇಶ್ವರ್‌ ತಿಳಿಸಿದರು.

ಬೆಂಗಳೂರಿನಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ಇದು ಒಬ್ಬರ ತೀರ್ಮಾನ ಅಗುವುದಿಲ್ಲ. ಕ್ಯಾಬಿನೆಟ್ ತೀರ್ಮಾನ ಅಗುತ್ತದೆ‌. ಇದು ಮುಖ್ಯಮಂತ್ರಿಯೊಬ್ಬರ ತೀರ್ಮಾನವೂ ಅಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ಪ್ರತಿ ಪಕ್ಷಗಳ ಟೀಕೆಗಳನ್ನು ಗಮನಿಸಿದ್ದೇವೆ. ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲ ಉದ್ದೇಶವಿರುವುದು ಯಾವ ಸಮುದಾಯ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಯಾವ ಸ್ಥಿತಿಯಲ್ಲಿದೆ ಎಂಬುದನ್ನು ಅಧ್ಯಯನ‌ ಮಾಡಿ ಸರ್ಕಾರಕ್ಕೆ ತಿಳಿಸುವುದು. ಸ್ವಾಭಾವಿಕವಾಗಿ ಯಾವ ಸಮುದಾಯ ಎಷ್ಟೆಷ್ಟು ಜನಸಂಖ್ಯೆ ಇದೆ ಎಂಬ ಅಂಕಿ-ಅಂಶಗಳನ್ನು ಸರ್ಕಾರಕ್ಕೆ ಕೊಟ್ಟಿದ್ದಾರೆ‌. ಅದರ ಮೇಲೆ ಚರ್ಚೆಯಾಗುತ್ತಿದೆ. ಅಂತಿಮವಾಗಿ ಸರ್ಕಾರ ಒಪ್ಪಬೇಕು. ಮುಂದೆ ಯೋಜನೆಗಳನ್ನು ಮಾಡಬೇಕು” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆಲ ಸಮುದಾಯದವರು ತಮ್ಮ ಆತಂಕವನ್ನು ವ್ಯಕ್ತ ಮಾಡಿದ್ದಾರೆ. ವರದಿಯನ್ನು ನಾನು ಓದಿದ್ದೇನೆ. ವೈಜ್ಞಾನಿಕ ದತ್ತಾಂಶವನ್ನು ಹೊಂದಿರುವ ವರದಿ‌ಯಾಗಿದೆ. ಒಂದು ಕುಟುಂಬದಲ್ಲಿ ಬೋರ್‌ವೆಲ್ ಹಾಕಿಸಿದ್ದರೆ, ಅದರಲ್ಲಿ ನೀರು ಬಂದಿದೆಯೇ? ನೀರು ಬಂದಿಲ್ಲವೇ? ನೀರು ಸಿಕ್ಕಿಲ್ಲವೇ? ಎಂಬ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಸಮೀಕ್ಷೆ ವೇಳೆ ಮನೆಗೆ ಹೋದಾಗ ಮನೆಯವರಿಂದ ಸಹಿ ಮಾಡಿಸಿಕೊಂಡಿದ್ದಾರೆ. ಇದರ ಮೇಲುಸ್ತುವಾರಿಗಳು ಸಹಿ ಹಾಕಿರುವ ಡೇಟಾ ನಮ್ಮ ಬಳಿ ಇದೆ‌. ಈ ಎಲ್ಲ ಡೇಟಾ ವರದಿಯಲ್ಲಿದೆ. 1.37 ಲಕ್ಷ ಕುಟುಂಬಗಳ ಮನೆಗೆ ಭೇಟಿ ಕೊಟ್ಟಿದ್ದಾರೆ‌. ಅಷ್ಟು ಡೇಟಾ ಇದೆ. ಇದನ್ನೆಲ್ಲ ಮರದ ಕೆಳಗೆ ಕುಳಿತು ಬರೆದುಕೊಂಡು ಬರಲು ಆಗುವುದಿಲ್ಲ‌” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಬ್ಬಳ್ಳಿ, ಮಂಗಳೂರು ಅತ್ಯಾಚಾರ ಪ್ರಕರಣ; ಪೊಲೀಸ್‌ ಇಲಾಖೆ ಎಚ್ಚೆತ್ತುಕೊಳ್ಳಬೇಕು

“ಒಳ ಮೀಸಲಾತಿ ಹಂಚಿಕೆಗೆ ಈ ಡೇಟಾವನ್ನು ಬಳಸಲು ಪರಿಶೀಲನೆ ಮಾಡುತ್ತಾರೆ. ಈಗಾಗಲೇ ಜಸ್ಟೀಸ್ ನಾಗಮೋಹನ್ ದಾಸ್ ಅವರಿಗೆ ಡೇಟಾ ಸಂಗ್ರಹಿಸಲು ಆದೇಶ‌ ಮಾಡಲಾಗಿದೆ. ಆ ಡೇಟಾವನ್ನು ಇದರೊಂದಿಗೆ ಜಾತಿಗಣತಿ ವರದಿಯೊಂದಿಗೆ ಹೋಲಿಕೆ ಮಾಡುತ್ತಾರೆ. ಜಾತಿಗಣತಿ ವರದಿ ಬಿಡುಗಡೆಯಾಗುವ ಮೊದಲೇ ಡೇಟಾ ಸಂಗ್ರಹಿಸಲು ಆದೇಶ ಮಾಡಿದ್ದೇವೆ. ಈಗ ವಾಪಸ್ ಪಡೆಯಲು ಆಗುವುದಿಲ್ಲ” ಎಂದು ತಿಳಿಸಿದರು.

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿರುವ ವಿಚಾರ ಗೊತ್ತಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡುವಂತೆ ಅಧಿಕಾರಿಗಳನ್ನು ಕೇಳಿದ್ದೇನೆ. ಗಾಯಾಳುವನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ” ಎಂದರು.

ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂಬ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, “ಕಳೆದ ವರ್ಷಕ್ಕೆ ಹೋಲಿಸಿದರೆ ಎಲ್ಲ ಪ್ರಕರಣಗಳು ಕಡಿಮೆಯಾಗಿವೆ‌.‌ಸೈಬರ್ ಪ್ರಕರಣಗಳು ಕಡಿಮೆಯಾಗಿದೆ. ಕಾನೂನು ಸುವ್ಯವಸ್ಥೆ ಸರಿ ಇಲ್ಲ ಎಂದರೆ ಯಾವ ಆಧಾರದ ಮೇಲೆ ಹೇಳುವುದು. ಈ ಬಗ್ಗೆ ಆರೋಪ ಮಾಡುವವರು ಸ್ವಲ್ಪ ಯೋಚಿಸಿ ಮಾತನಾಡಬೇಕು‌” ಎಂದು ಎಚ್ಚರಿಸಿದರು.

“ಸಿಇಟಿ ಪರೀಕ್ಷೆ ವೇಳೆ ಜಾನಿವಾರ ತೆಗೆಸಿರುವುದು ಬಹಳ ದೊಡ್ಡ ತಪ್ಪು. ನಾನು ಕೂಡ ಅದನ್ನು ಒಪ್ಪುವುದಿಲ್ಲ‌.‌ ಪರೀಕ್ಷೆ ವೇಳೆ ಕೈಗೊಳ್ಳಬೇಕಾದ ಕೆಲವು ನಿಯಮಗಳ ಬಗ್ಗೆ ಸೂಚನೆಗಳನ್ನು ನೀಡಲಾಗಿರುತ್ತದೆ‌‌. ಇದನ್ನೆಲ್ಲ ಹೇಳಿರುವುದಿಲ್ಲ. ಯಾರೋ ಒಬ್ಬ ಮಾಡಿರುವುದು ಇಡೀ ಸಮಾಜಕ್ಕೆ ಸರಿ ಕಾಣುತ್ತಿಲ್ಲ” ಎಂದು ಖಂಡಿಸಿದರು.

“ಎತ್ತಿನಹೊಳೆ ಯೋಜನೆಯ ಕೆರೆ ತುಂವಬಿಸುವ ಕೆಲಸಕ್ಕೆ ಇಂದು ಶಂಕುಸ್ಥಾಪನೆ ಮಾಡಲಾಗುತ್ತಿದೆ. 288 ಕೋಟಿ ರೂ. ಖರ್ಚು ಮಾಡಿ 62 ಕೆರೆಗಳನ್ನು ತುಂಬಿಸಲು ಶಂಕುಸ್ಥಾಪನೆ ಮಾಡಲಾಗುತ್ತಿದೆ. ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ಸಚಿವ ರಾಜಣ್ಣ, ಕೇಂದ್ರ ಅಚಿವ ವಿ.ಸೋಮಣ್ಣ ಹಾಗೂ ಸ್ಥಳೀಯ ಶಾಸಕರು ಆಗಮಿಸಲಿದ್ದಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...