ಜಾತಿಗಣತಿ | ಒಕ್ಕಲಿಗ ಸಮಾಜದ ಸ್ವಾಭಿಮಾನಕ್ಕಾಗಿ ಸಹಿ ಹಾಕಿದ್ದೇನೆ, ತಪ್ಪೇನು? ಡಿಕೆ ಶಿವಕುಮಾರ್

Date:

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಜಾತಿಗಣತಿ ವರದಿಯ ಬಗ್ಗೆ ಚರ್ಚೆ ಕಾವೇರಿದ್ದು, ರಾಜಕೀಯ ಪಕ್ಷಗಳಿಗೆ ಮುಖ್ಯ ವಿಷಯವಾಗಿ ಮಾರ್ಪಟ್ಟಿದೆ. ಜಾತಿಗಣತಿ ವರದಿ ಸ್ವೀಕಾರದ ಕುರಿತಾಗಿ ಪರ ಹಾಗೂ ವಿರೋಧದ ಅಭಿಪ್ರಾಯಗಳು ಕೂಡ ಬಹಿರಂಗವಾಗಿಯೇ ವ್ಯಕ್ತವಾಗುತ್ತಿದೆ.

ಜಾತಿಗಣತಿ ವರದಿಗೆ ಕುರಿತಾದ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು ಹಾಗೂ ಸಂಘದ ಪದಾಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿರುವ ಆಕ್ಷೇಪ ಪತ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಚಲುವರಾಯಸ್ವಾಮಿ, ಎಂಸಿ ಸುಧಾಕರ್ ಕೂಡ ಸಹಿ ಹಾಕಿದ್ದಾರೆ. ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಮೀಕ್ಷೆ ‘ಅವೈಜ್ಞಾನಿಕ’ ಎಂದು ಒಕ್ಕಲಿಗರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರು ಮಾತ್ರ ಜಾತಿಗಣತಿ ವರದಿ ಸ್ವೀಕರಿಸುವ ನಿರ್ಧಾರ ಅಚಲ ಎಂದಿದ್ದಾರೆ.

ಜಾತಿಗಣತಿ ವರದಿ ಸ್ವೀಕಾರ ಮಾಡದಂತೆ ಸಿಎಂ ಸಿದ್ದರಾಮಯ್ಯನವರಿಗೆ ಒಕ್ಕಲಿಗರು ಬರೆದ ಪತ್ರಕ್ಕೆ ಸಹಿ ಹಾಕಿರುವ ವಿಚಾರಕ್ಕೆ ಸಂಬಂಧಿಸಿ ಹೇಳಿಕೆ ನೀಡಿರುವ ಡಿಸಿಎಂ ಡಿ ಕೆ ಶಿವಕುಮಾರ್, ‘ಜಾತಿಗಣತಿ ಮಾಡಬೇಕು, ಸಾಮಾಜಿಕ ಪರಿಸ್ಥಿತಿ ಅರಿತುಕೊಳ್ಳಬೇಕು ಎಂಬುದು ನಮ್ಮ ಕಾಂಗ್ರೆಸ್‌ ಪಕ್ಷದ ನಿಲುವಿದೆ. ಆ ನಿಲುವಿಗೆ ಇವತ್ತೂ ಕೂಡ ಬದ್ಧವಿದ್ದೇವೆ. ಆದರೆ ನಾವು ಏನು ಹೇಳುತ್ತಿದ್ದೇವೆ ಅಂದರೆ ನಮ್ಮ ಸಮಾಜದ ನಾಯಕರುಗಳು, ಶಾಸಕರುಗಳೆಲ್ಲ ನಮ್ಮ ನಮ್ಮ ಮನೆಗಳಿಗೆಲ್ಲ ಬಂದಿಲ್ಲ. ಯಾವ ಮಾಹಿತಿಯೂ ಕೇಳಿಲ್ಲ. ಸ್ವಲ್ಪ ಸರಿಯಾಗಿ ಅದನ್ನು ವೈಜ್ಞಾನಿಕವಾಗಿ ಮಾಡಿ ಎಂಬುದಷ್ಟೇ ಆಗ್ರಹ’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
dk shivakumar signature
ಡಿ ಕೆ ಶಿವಕುಮಾರ್ ಸಹಿ ಹಾಕಿರುವ ಪತ್ರದ ಪ್ರತಿ

‘ಜನಸಂಖ್ಯೆಯ ಆಧಾರದ ಮೇಲೆ ತೀರ್ಮಾನ ಆಗಬೇಕು ಅನ್ನುವ ದೃಷ್ಟಿಯಿಂದ ಸಮುದಾಯಗಳು ಆತಂಕ ಹೊರಹಾಕಿವೆ. ಎಲ್ಲ ಸಮುದಾಯಗಳ ನಾಯಕರುಗಳು ಅವರ ಸಮುದಾಯಕ್ಕೆ ಅನ್ಯಾಯ ಆಗಬಾರದು ಎಂದು ಪಕ್ಷಭೇದ ಮರೆತು ಹೋರಾಟ ಮಾಡುತ್ತಿದ್ದಾರೆ. ಹಾಗೆಯೇ ಒಕ್ಕಲಿಗರು ಕೂಡ ಮಾಡ್ತಾ ಇದ್ದಾರೆ. ಅದರಲ್ಲಿ ತಪ್ಪೇನಿದೆ?’ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ನೀವು ಕೂಡ ಸಹಿ ಹಾಕಿದ್ದೀರಲ್ವ ಎಂದು ಪ್ರಶ್ನಿಸಿದಾಗ, ‘ಸಹಿ ಹಾಕಿದ್ದು ತಪ್ಪೇ? ಮಾಡಬಾರದಾ? ಎಷ್ಟೋ ಸಚಿವರು ಸಭೆಗಳನ್ನು ನಡೆಸಿಲ್ವಾ? ನಮ್ಮ ಒಕ್ಕಲಿಗ ಸಮಾಜದ ಗೌರವ, ಸ್ವಾಭಿಮಾನ ಉಳಿಸಿಕೊಳ್ಳಬೇಕು ಅಂತ ಎಲ್ಲರಿಗೂ ಇದ್ದೇ ಇರುತ್ತದೆ. ಹಾಗಾಗಿ, ನಾನೂ ಕೂಡ ಸಹಿ ಹಾಕಿದ್ದೇನೆ’ ಎಂದು ಹೇಳಿದ ಉಪ ಮುಖ್ಯಮಂತ್ರಿ ಶಿವಕುಮಾರ್ ಕಾರು ಹತ್ತಿ ಹೊರಟರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...