ಜಾತಿ ಜನಗಣತಿ | ಅನ್ಯಾಯವಾದವರಿಗೆ ನ್ಯಾಯ ಒದಗಿಸುತ್ತೇವೆ: ಡಿಸಿಎಂ ಡಿ ಕೆ ಶಿವಕುಮಾರ್‌

Date:

ಸರ್ವರಿಗೂ ಸಮಬಾಳು, ಸಮಪಾಲು ಎಂಬ ಬಸವಣ್ಣನವರ ಆಚಾರ ವಿಚಾರ ನಮ್ಮ ಪಕ್ಷದಲ್ಲಿ ಬೆರೆತಿದೆ. ನಾವು ಸಂವಿಧಾನದಲ್ಲಿ ನಂಬಿಕೆ ಇಟ್ಟುಕೊಂಡಿದ್ದೇವೆ. ಯಾರಿಗೆ ನ್ಯಾಯ ಒದಗಿಸಿಕೊಡಬೇಕೋ ಅವರಿಗೆ ನ್ಯಾಯ ಒದಗಿಸಿಕೊಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಆದಿಚುಂಚನಗಿರಿ ಮಠದ ಆವರಣದಲ್ಲಿ ಅಭಯ ಆಂಜನೇಯ ಸ್ವಾಮಿ, ಪ್ರಸನ್ನ ಮಹಾಗಣಪತಿ ಮತ್ತು ಮಾತಾ ಲಲಿತಾಂಬಿಕಾ ದೇವಾಲಯದ ಕುಂಭಾಭಿಷೇಕ ಮಹೋತ್ಸವ ಹಾಗೂ ಲೋಕಾರ್ಪಣಾ ಸಮಾರಂಭ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ಇದು ಜಾತಿಗಣತಿಯೋ ಅಥವಾ ದ್ವೇಷ ಗಣತಿಯೋ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮಾತಿನ ಬಗ್ಗೆ ಕೇಳಿದಾಗ, “ಅವರು ಬಹಳ ದೊಡ್ಡವರು. ದೊಡ್ಡ ಮಾತುಗಳನ್ನು ಆಡುತ್ತಾರೆ. ಅವರು ತಮ್ಮ ಅನುಕೂಲಕ್ಕೆ ತಕ್ಕಂತೆ ಮಾತನಾಡುತ್ತಾರೆ. ನಮ್ಮ ಪಕ್ಷ ತನ್ನದೇ ಆದ ತತ್ವ ಸಿದ್ಧಾಂತಗಳನ್ನು ಹೊಂದಿದ್ದು, ಪಕ್ಷದಲ್ಲಿ ಅನೇಕ ತೀರ್ಮಾನ ಮಾಡಲಾಗಿದ್ದು, ಕಾನೂನಿನಲ್ಲಿ ಯಾರು ಯಾವ ಕೆಲಸ ಮಾಡಬೇಕು ಎಂದು ಇದೆ. ಅದನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಅನೇಕ ತೀರ್ಮಾನ ಮಾಡಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾನು ಪಂಡಿತನೂ ಅಲ್ಲ, ಸರ್ವಜ್ಞನೂ ಅಲ್ಲ

ಒಕ್ಕಲಿಗ ಶಾಸಕರ ಸಭೆ ಬಗ್ಗೆ ಕೇಳಿದಾಗ, “ನಾನು ಈ ಸಮಾಜದ ಪ್ರತಿನಿಧಿಯಾಗಿ, ಸಚಿವ ಸಂಪುಟ ಸಭೆಯಲ್ಲಿ ನಮ್ಮ ವಿಚಾರವನ್ನು ಹೇಗೆ ಮಂಡಿಸಬೇಕು, ಯಾವ ರೀತಿ ಸಲಹೆ ನೀಡಬೇಕು ಎಂದು ಚರ್ಚೆ ಮಾಡಬೇಕಲ್ಲವೇ? ಏಕಾಏಕಿ ನಾನೊಬ್ಬನೇ ಸರ್ವಜ್ಞನಲ್ಲ. ದೊಡ್ಡ ಪಂಡಿತನೂ ಅಲ್ಲ. ನಾನು ಹಳ್ಳಿಯಿಂದ ಬಂದು ಬೆಂಗಳೂರು ಸೇರಿರುವವನು. ಹಿರಿಯರು, ಸ್ನೇಹಿತರು, ಶಾಸಕರ ಅನುಭವ, ತಮ್ಮ ಕ್ಷೇತ್ರಗಳಲ್ಲಿ ಜನ ಏನು ಹೇಳುತ್ತಿದ್ದಾರೆ, ಮಾಧ್ಯಮಗಳು ನೀಡಿರುವ ವರದಿ ಎಲ್ಲವನ್ನು ಚರ್ಚೆ ಮಾಡಿ ಅವಲೋಕಿಸಿ ಚರ್ಚೆ ಮಾಡಬೇಕಿದೆ. ನಾನು ಈ ವಿಚಾರವನ್ನು ಮಾಧ್ಯಮಗಳ ಮುಂದೆ ಮಾತನಾಡುವವನಲ್ಲ” ಎಂದು ತಿಳಿಸಿದರು.

ಜಾತಿಗಣತಿ ವಿಚಾರವಾಗಿ ನಿರ್ಮಲಾನಂದ ಶ್ರೀಗಳ ಜತೆ ಚರ್ಚೆ ಮಾಡಲಾಗಿದೆಯೇ ಎಂದು ಕೇಳಿದಾಗ, “ಇಲ್ಲಾ” ಎಂದು ಉತ್ತರಿಸಿದರು.

ಡಿ.ಕೆ. ಶಿವಕುಮಾರ್ ಅವರು ಅಧಿಕಾರಕ್ಕೆ ಯೋಗ್ಯರು ಎಂಬ ನಿರ್ಮಲಾನಂದ ಶ್ರೀಗಳು ಆಶೀರ್ವಾದ ಮಾಡಿರುವ ಬಗ್ಗೆ ಕೇಳಿದಾಗ, “ಈಗ ನಾನು ಆ ವಿಚಾರವಾಗಿ ಚರ್ಚೆ ಮಾಡಲು ಹೋಗುವುದಿಲ್ಲ. ನನಗೆ ನೀವುಗಳು (ಮಾಧ್ಯಮಗಳು) ಆಶೀರ್ವಾದ ಮಾಡಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...