ಜಾನುವಾರು ವ್ಯಾಪಾರಿ ಸಾವು ಪ್ರಕರಣ; ಬಿಜೆಪಿ ನಾಯಕರನ್ನು ವಿಚಾರಣೆಗೊಳಪಡಿಸಿ: ಕಾಂಗ್ರೆಸ್ ಆಗ್ರಹ

Date:

  • ವ್ಯಾಪಾರಿ ಸಾವಿನ ಹಿಂದೆ ಬಿಜೆಪಿ ಕೈವಾಡದ ಶಂಕೆ ವ್ಯಕ್ತಪಡಿಸಿದ ಕಾಂಗ್ರೆಸ್
  • ಇದು ಸುಪಾರಿ ಕೊಲೆಯೋ ಅಥವಾ ಪ್ರಾಯೋಜಿತ ಕೊಲೆಯೋ ಎಂದ ವಿಪಕ್ಷ

ಸಾತನೂರಿನಲ್ಲಿನ ಜಾನುವಾರು ವ್ಯಾಪಾರಿ ಸಾವಿನ ಪ್ರಕರಣ ಸಂಬಂಧ ರಾಜ್ಯ ಬಿಜೆಪಿ ನಾಯಕರನ್ನು ವಿಚಾರಣೆಗೊಳಪಡಿಸುವಂತೆ ವಿಪಕ್ಷ ಕಾಂಗ್ರೆಸ್ ಆಗ್ರಹಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ರಾಜ್ಯ ಬಿಜೆಪಿಯನ್ನು ತರಾಟೆಗೆತ್ತಿಕೊಂಡಿದೆ. ಜಾನುವಾರು ಸಾಗಣೆ ವಾಹನದ ಚಾಲಕನನ್ನು ಕೊಲೆಗೈದ ಪುಢಾರಿ ಕಮಲ ಪಕ್ಷದ ನಾಯಕರೊಂದಿಗೆ ಖಾಸಾ ಸಂಬಂಧ ಹೊಂದಿದ್ದಾನೆ ಎಂದು ದೂರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಚುನಾವಣೆಯ ಹಿನ್ನೆಲೆಯಲ್ಲಿ ಗಲಭೆ ಎಬ್ಬಿಸಲು ಈ ಕೊಲೆಗೆ ರಾಜ್ಯ ಬಿಜೆಪಿ ನಾಯಕರೇ ಸುಪಾರಿ ನೀಡಿದ್ದರೇ?’ ಎಂದು ಪ್ರಶ್ನಿಸಿರುವ ಕಾಂಗ್ರೆಸ್, ‘ಇದು ಭಾರತೀಯ ಜನತಾ ಪಕ್ಷದ ಪ್ರಾಯೋಜಿತ ಕೊಲೆಯೇ?’ ಎಂದು ಕೇಳಿದೆ.

ಜೊತೆಗೆ ಈ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕಾಂಗ್ರೆಸ್, ಪೋಲಿಸರು ಆತನೊಂದಿಗೆ ನಿಕಟ ಸಂಬಂಧವಿರುವ ಕಮಲ ಪಕ್ಷದ ನಾಯಕರನ್ನೂ ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದೆ.

ಈ ಸುದ್ದಿ ಓದಿದ್ದೀರಾ? :ಸಾತನೂರು | ಜಾನುವಾರು ವ್ಯಾಪಾರಿಯ ಅನುಮಾನಾಸ್ಪದ ಸಾವು; ಪುನೀತ್ ಕೆರೆಹಳ್ಳಿ ಬಂಧನ

ಘಟನೆ ಹಿನ್ನೆಲೆ

ರಾಮನಗರ ಜಿಲ್ಲೆಯ ಸಾತನೂರಿನಲ್ಲಿ ಜಾನುವಾರು ವ್ಯಾಪಾರಿ ಇದ್ರೀಸ್ ಪಾಷಾ (38) ಎಂಬುವವರ ಮೃತದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ಅವರ ಸಹವರ್ತಿಗಳು ಇದೇ ಸ್ಥಳದಲ್ಲಿ ಜಾನುವಾರುಗಳ ರಕ್ಷಣೆ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದರು.

ಸಾತನೂರು ಬಳಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿ 16 ಜಾನುವಾರುಗಳನ್ನು ರಕ್ಷಿಸಲಾಗಿದೆ ಎಂದು
ಹೇಳಲಾಗಿತ್ತು. ಅದೇ ಸ್ಥಳದಲ್ಲಿ ದನದ ವ್ಯಾಪಾರಿ ಇದ್ರೀಸ್ ಪಾಷಾ ಅವರ ಮೃತದೇಹ ಪತ್ತೆಯಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಮುಂದಾಗಿದ್ದ ರಾಮನಗರ ಪೊಲೀಸರು ಭಾನುವಾರ ಮಧ್ಯಾಹ್ನದ ವೇಳೆಗೆ ಘಟನೆ ಹಿಂದಿನ ರೂವಾರಿ, ಪ್ರಮುಖ ಆರೋಪಿ, ಬಲಪಂಥೀಯ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿ ಕೈವಾಡ ಇರುವುದನ್ನು ಖಾತರಿ ಪಡಿಸಿಕೊಂಡಿದ್ದರು.

ಸಾವಿನ ವಿಚಾರ ತಿಳಿಯುತ್ತಿದ್ದಂತೆಯೇ ಪುನೀತ್‌ ಕೆರೆಹಳ್ಳಿ ಸೇರಿದಂತೆ ಇತರರ ವಿರುದ್ಧ ರಾಮನಗರ ಜಿಲ್ಲೆ ಸಾತನೂರು ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದರು.

ಘಟನೆ ಖಂಡಿಸುವುದರ ಜೊತೆಗೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕನಕಪುರ ಸರ್ಕಲ್‌ ಇನ್‌ಸ್ಪೆಕ್ಟರ್‌ ಕಚೇರಿ ಎದುರು ಇಂದು (ಭಾನುವಾರ) ದಲಿತ ಸಂಘಟನೆಗಳ ನೇತೃತ್ವದಲ್ಲಿ ಸಂಬಂಧಿಕರು, ಸ್ಥಳೀಯ ಮುಸ್ಲಿಮರು ಪ್ರತಿಭಟನೆ ನಡೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...