ಕಾವೇರಿ ವಿವಾದ | ಕಲಾವಿದರನ್ನು ಹಿಂಸಿಸುವುದು ತಪ್ಪು; ಬಹುಭಾಷಾ ನಟ ಪ್ರಕಾಶ್ ರಾಜ್

Date:

  • ತಮಿಳು ನಟ ಸಿದ್ದಾರ್ಥ್ ಪತ್ರಿಕಾಗೋಷ್ಠಿ ತಡೆದಿದ್ದ ಕರವೇ ನಡೆಗೆ ಕ್ಷಮೆ ಕೇಳಿದ ಪ್ರಕಾಶ್ ರಾಜ್
  • ‘ಬೇರೆ ರಾಜ್ಯಗಳಲ್ಲಿ ನಮ್ಮ ಕಲಾವಿದರಿಗೆ ತೊಂದರೆಯಾದರೆ ಯಾರು ಹೊಣೆ’ ಎಂದ ನೆಟ್ಟಿಗರು

ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಇಂದು ಕರ್ನಾಟಕ ಬಂದ್​ ಆಚರಣೆ ನಡೆಯುತ್ತಿದೆ. ನಿನ್ನೆ ಬೆಂಗಳೂರಿನಲ್ಲಿ ತಮಿಳು ನಟ ಸಿದ್ದಾರ್ಥ್ ಪತ್ರಿಕಾಗೋಷ್ಠಿ ನಡೆಸುತ್ತಿದ್ದುದನ್ನು ತಡೆದ ಕನ್ನಡಪರ ಸಂಘಟನೆಗಳ ನಡೆಯನ್ನು ಬಹುಭಾಷಾ ನಟ ಪ್ರಕಾಶ್​ ರಾಜ್​ ಖಂಡಿಸಿದ್ದಲ್ಲದೇ, ಕನ್ನಡಿಗರ ಪರವಾಗಿ ಸಿದ್ದಾರ್ಥ್ ಕ್ಷಮೆ ಕೋರಿದ್ದಾರೆ.

ತನ್ನ ಅಭಿನಯದ ಚಿಕ್ಕು ಚಿತ್ರದ ಕನ್ನಡ ಡಬ್ಬಿಂಗ್ ಮಾಡಿರುವ ಹಿನ್ನೆಲೆಯಲ್ಲಿ ಅದರ ಪ್ರಚಾರಕ್ಕೆಂದು ನಟ ಸಿದ್ಧಾರ್ಥ್​ ನಿನ್ನೆ (ಸೆ.28) ಬೆಂಗಳೂರಿಗೆ ಬಂದಿದ್ದರು. ನಗರದ ಖಾಸಗಿ ಪ್ರದೇಶವೊಂದರಲ್ಲಿ ಸಿನಿಮಾ ಪ್ರಚಾರದ ನಿಮಿತ್ತ ಸುದ್ದಿಗೋಷ್ಠಿ ನಡೆಸುವಾಗ ಅಲ್ಲಿಗೆ ಮಧ್ಯ ಪ್ರವೇಶ ಮಾಡಿದ್ದ ಕರವೇ ಸ್ವಾಭಿಮಾನಿ ಸೇನೆಯ ಕಾರ್ಯಕರ್ತರು, ನಟ ಸಿದ್ಧಾರ್ಥ್​ ಅವರನ್ನು ಬಲವಂತವಾಗಿ ಸುದ್ದಿಗೋಷ್ಠಿಯನ್ನು ನಿಲ್ಲಿಸುವಂತೆ ಸೂಚಿಸಿ, ಹೊರಗಡೆ ಕಳುಹಿಸಿದ್ದ ಘಟನೆ ನಡೆದಿತ್ತು.

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ನಡೆಗೆ ಬಹುಭಾಷಾ ನಟ ಪ್ರಕಾಶ್ ರಾಜ್ ವಿರೋಧ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ದಶಕಗಳಷ್ಟು ಹಳೆಯದಾದ ಈ ಸಮಸ್ಯೆಯನ್ನು ಬಗೆಹರಿಸುವಲ್ಲಿ ವಿಫಲವಾಗಿರುವ ಎಲ್ಲ ರಾಜಕೀಯ ಪಕ್ಷಗಳು ಹಾಗೂ ಕೇಂದ್ರ ಮಧ್ಯಸ್ಥಿಕೆ ವಹಿಸುವಂತೆ ಒತ್ತಡ ಹಾಕದ ಉಪಯೋಗಕ್ಕೆ ಬಾರದ ಸಂಸದರನ್ನು ಪ್ರಶ್ನಿಸುವ ಬದಲು, ಜನಸಾಮಾನ್ಯ ಹಾಗೂ ಕಲಾವಿದರಿಗೆ ತೊಂದರೆ ಕೊಡುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡಿಗನಾಗಿ, ಕನ್ನಡಿಗರ ಪರವಾಗಿ ಕ್ಷಮೆ ಇರಲಿ” ಎಂದು ನಟ ಸಿದ್ಧಾರ್ಥ್​ ಕ್ಷಮೆಯಾಚಿಸಿದ್ದಾರೆ.

ಕಾವೇರಿ ವಿಚಾರವಾಗಿ ಕನ್ನಡಪರ ಸಂಘಟನೆಗಳು ಮಾಡಿರುವ ಈ ಕ್ರಮಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದ್ದು, ಇದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕನ್ನಡ ಸಿನಿಮಾಗಳು ಇಂದು ಬೇರೆ ಬೇರೆ ರಾಜ್ಯಗಳಲ್ಲಿ ಬಿಡುಗಡೆ ಆಗುತ್ತಿವೆ. ಕೆಜಿಎಫ್, ಕಾಂತಾರ ರೀತಿಯ ಚಿತ್ರಗಳನ್ನು ಬೇರೆ ಭಾಷಿಕರೂ ಗೆಲ್ಲಿಸಿದ್ದಾರೆ. ನಾಳೆ ಇದೇ ರೀತಿ ಬೇರೆ ರಾಜ್ಯಗಳಲ್ಲಿ ನಮ್ಮ ಕಲಾವಿದರಿಗೆ ತೊಂದರೆಯಾದರೆ ಯಾರು ಹೊಣೆ” ಎಂದು ಕೆಲವು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...