ಕಾವೇರಿ ವಿವಾದ | ಕರ್ನಾಟಕ ಬಂದ್‌ಗೆ ಮುಂದಾದ ವಾಟಾಳ್‌ ನಾಗರಾಜ್‌

Date:

  • ಸೆ.26ರಂದು ನಡೆಯುವ ಬಂದ್​ಗೆ ನನ್ನ ವಿರೋಧವಿಲ್ಲ
  • ಸೋಮವಾರ ಕರ್ನಾಟಕ ಬಂದ್‌ ದಿನಾಂಕ ಘೋಷಣೆ

ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಅಖಂಡ ಕರ್ನಾಟಕ ಬಂದ್‌ಗೆ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಮುಂದಾಗಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಶನಿವಾರ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, “ಸೆ.26ಕ್ಕೆ ಬಂದ್​ಗೆ ಕರೆ ನೀಡಿರುವುದಕ್ಕೆ ನನ್ನ ವಿರೋಧವಿಲ್ಲ. ಆ ದಿನವೇ ಕರ್ನಾಟಕ ಬಂದ್‌ ದಿನಾಂಕ್ ಘೋಷಿಸುತ್ತೇನೆ. ಎಲ್ಲರೂ ಒಟ್ಟಿಗೆ ಸೇರಿ ಅಖಂಡ ಕರ್ನಾಟಕ ಬಂದ್ ಮಾಡೋಣ ಅಂತ ಮನವಿ ಮಾಡುತ್ತೇನೆ. ಎಲ್ಲರೂ ಸೇರಿ ಬಂದ್ ಮಾಡಿದರೆ ಹೋರಾಟಕ್ಕೆ ಮತ್ತಷ್ಟು ಶಕ್ತಿ ಬರಲಿದೆ” ಎಂದರು.

“ನದಿ, ನೀರು ಹಾಗೂ ಗಡಿ ವಿಚಾರದಲ್ಲಿ ಹಿಂದಿನಿಂದಲೂ ನಾವು ಯಾರಿಗೂ ಭಯಪಡದೆ ಹೋರಾಟ ಮಾಡಿದ್ದೇವೆ. ಈಗ ನಾವು ಬಹಳ ಗಂಭೀರ ಪರಿಸ್ಥಿತಿಯಲ್ಲಿದ್ದೇವೆ. ನೀವು ಯಾರನ್ನು ಕೇಳಿಕೊಂಡು ತಮಿಳುನಾಡಿಗೆ ನೀರು ಬಿಡುತ್ತಿದ್ದೀರಾ? ಕರ್ನಾಟಕದಲ್ಲಿ ಕನ್ನಡಿಗರು ಇಲ್ಲವೇ? ಹೋರಾಟಗಾರರು ಇಲ್ಲವೇ?” ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನೀವು ಹಿರಿಯರು ಮತ್ತು ಪ್ರಾಮಾಣಿಕರಿದ್ದೀರಿ, ನಿಮ್ಮ ನಿಲುವು ಸ್ಪಷ್ಟವಾಗಿ ಇರಲಿ. ತುರ್ತು ಶಾಸಕರ ಸಭೆ ಕರೆದು ಸರ್ವಾನುಮತದಿಂದ ನೀರು ಬಿಡಲು ಸಾಧ್ಯವಿಲ್ಲ ಎಂದು ತೀರ್ಮಾನ ಮಾಡಿ. ಅದರ ಮೇಲೂ ನೀರು ಬಿಡಬೇಕು ಎಂಬ ನಿಲುವು ನಿಮ್ಮದಾಗಿದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೊರಗೆ ಬನ್ನಿ” ಎಂದು ವಾಟಾಳ್ ನಾಗರಾಜ್ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಿ ಅನುದಾನಿತ ಉತ್ಸವಗಳೆಲ್ಲ ಸರಳಗೊಳ್ಳಲಿ

“ನಿಮ್ಮ ತಂಟೆಗೆ ಬರುವುದಿಲ್ಲ ಎಂದು ನ್ಯಾಯಾಲಯ ಈಗಾಗಲೇ ಹೇಳಿ ಅರ್ಜಿ ವಜಾ ಮಾಡಿದೆ. ನೀವು ನಮ್ಮ ಹತ್ತಿರ ಬರಬೇಡಿ ಕಾವೇರಿ ನಿರ್ವಹಣಾ ಪ್ರಾಧಿಕಾರದ ಬಳಿ ಹೋಗುವಂತೆ ಸೂಚಿಸಿತ್ತು. ಆದರೆ, ನಮ್ಮ ಎಲ್ಲ ಸಂಸದರು ಪ್ರಧಾನ ಮಂತ್ರಿಗಳ ಮನೆ ಮುಂದೆ ಹೋಗಲು ಏನು ದಾಡಿ. ಈ ಹಿಂದೆ ಇದ್ದ ಪ್ರಧಾನ ಮಂತ್ರಿಗಳಾದ ಮನಮೋಹನ್ ಸಿಂಗ್, ಪಿವಿ ನರಸಿಂಹ ರಾವ್ ನಮ್ಮನ್ನು ಕರೆದು ಮಾತಾಡಿದ್ದರು. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಯಿ ಅವರೇ ನಿಮಗೆ ಮೈಸೂರು ಬ್ಯಾಂಕ್ ಸರ್ಕಲ್ ಗೊತ್ತು, ಪ್ರಧಾನ ಮಂತ್ರಿ ಗೊತ್ತಿಲ್ಲವೇ?” ಎಂದು ಕಿಡಿಕಾರಿದರು.

“ಜೆಡಿಎಸ್​ನವರು ಶುಕ್ರವಾರ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಆದರೆ ಕಾವೇರಿ ನೀರಿನ ಬಗ್ಗೆ ಮಾತಾಡಿಲ್ಲ. ಪ್ರಧಾನ ಮಂತ್ರಿಗಳ ಮೇಲೆ ಒತ್ತಡ ತರದೆ ಮೈಸೂರು ಬ್ಯಾಂಕ್ ಸರ್ಕಲ್​ನಲ್ಲಿ ಯಾಕೆ ಪ್ರತಿಭಟನೆ ಮಾಡಿದ್ದೀರಿ” ಎಂದು ಬಿಜೆಪಿಗರನ್ನು ಪ್ರಶ್ನಿಸಿದರು.

ರಜಿನಿಕಾಂತ್ ರಾಜ್ಯಕ್ಕೆ ಬೇಡ

“ಬೊಮ್ಮಾಯಿ ಅವರೇ ಸೂಪರ್ ಸ್ಟಾರ್ ರಜಿನಿಕಾಂತ್ ಅವರನ್ನು ಕರೆಸಿ ಪಾದ ಪೂಜೆ ಮಾಡಿದ್ದೀರಿ. ಅವರನ್ನು ರಾಜ್ಯಕ್ಕೆ ಕರೆಯಿಸಬೇಡಿ. ಈಗ ರಜನಿಕಾಂತ್ ಏನ್ ಮಾಡುತ್ತಾರೆ ಕೇಳಿ. ರಾಜ್ಯದ ಸಂಸದರಿಗೆ ನಾಚಿಕೆ ಆಗಬೇಕು” ಎಂದು ವಾಗ್ದಾಳಿ ನಡೆಸಿದರು.

“ಎಂಕೆ ಸ್ಟಾಲಿನ್ ಅವರೇ ಕರ್ನಾಟಕ ಮುಖ್ಯಮಂತ್ರಿ ಅವರನ್ನು ಮಾತುಕತೆಗೆ ಕರೆಯಿರಿ. ಸೋಮವಾರದವರೆಗೆ ನಿಮಗೆ ಅವಕಾಶ ಕೊಡುತ್ತೇವೆ. ಸೋಮವಾರ ವುಡ್ ಲ್ಯಾಂಡ್ಸ್ ಹೋಟೆಲ್​ನಲ್ಲಿ ಸಭೆ ಕರೆದಿದ್ದೇವೆ. ಆ ಸಭೆಯಲ್ಲಿ ಹುಬ್ಬಳ್ಳಿ, ಧಾರವಾಡ, ಕೋಲಾರ, ರಾಜ್ಯದ ಎಲ್ಲ ಭಾಗದ ಜನರ ಸಮಸ್ಯೆ ಬಗ್ಗೆ ತೀರ್ಮಾನ ಮಾಡುತ್ತೇವೆ. ವಿಧಾನಸೌಧ ಮುತ್ತಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ತಡೆಯುತ್ತೇವೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...