ಸೋನಮ್ ವಾಂಗ್‌ಚುಕ್, ಸಂಸ್ಥೆಯ ವಿರುದ್ಧ ಎಫ್‌ಸಿಆರ್‌ಎ ಉಲ್ಲಂಘನೆ ಆರೋಪ; ಸಿಬಿಐ ತನಿಖೆ

Date:

ಲಡಾಖ್‌ಗೆ ರಾಜ್ಯತ್ವ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹೋರಾಟ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಮತ್ತು ಅವರು ಸ್ಥಾಪಿಸಿದ ಸಂಸ್ಥೆಯ ವಿರುದ್ಧ ವಿದೇಶಿ ಹಣಕಾಸು ಕಾನೂನು ಉಲ್ಲಂಘನೆ ಆರೋಪದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ಪ್ರಾಥಮಿಕ ವಿಚಾರಣೆ (ಪಿಇ) ನಡೆಸುತ್ತಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಇನ್ನು ಈ ಹಿಂದೆಯೇ ಈ ಬಗ್ಗೆ ಮಾತನಾಡಿರುವ ಸೋನಮ್ ವಾಂಗ್‌ಚುಕ್ ಅವರು ಸ್ಪಷ್ಟನೆಯನ್ನು ನೀಡಿದ್ದರು. “ಸಂಸ್ಥೆಯು ವಿದೇಶಿ ಹಣವನ್ನು ಪಡೆದಿರುವುದು ನಿಜ. ಆದರೆ ನಮ್ಮ ಸಂಸ್ಥೆಯ ಸಂಶೋಧನೆಯನ್ನು ವಿದೇಶದ ಸಂಸ್ಥೆಗೆ ಮಾರಾಟ ಮಾಡಿ ಅದರ ಪಾವತಿಯನ್ನು ಪಡೆದಿದ್ದೇವೆಯೇ ಹೊರತು, ದತ್ತಿ ಹಣವಲ್ಲ” ಎಂದು ತಿಳಿಸಿದ್ದರು. ಹಾಗೆಯೇ ಲಡಾಖ್‌ ಹೋರಾಟ ಆರಂಭಿಸಿದ ಬಳಿಕ ನಿರಂತರವಾಗಿ ಕೇಂದ್ರ ಸರ್ಕಾರ ತಮ್ಮನ್ನು ಗುರಿಯಾಗಿಸಿಕೊಂಡಿದೆ ಎಂದು ಸೋನಮ್ ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಲಡಾಖ್ ಹಿಂಸಾಚಾರಕ್ಕೆ ಸೋನಮ್ ವಾಂಗ್‌ಚುಕ್ ಪ್ರಚೋದನಾಕಾರಿ ಹೇಳಿಕೆ ಕಾರಣ: ಕೇಂದ್ರ ಸರ್ಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಮಾರು ಎರಡು ತಿಂಗಳ ಹಿಂದೆ ವಾಂಗ್‌ಚುಕ್ ಮತ್ತು ಹಿಮಾಲಯನ್ ಇನ್‌ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ ಲಡಾಖ್ (ಎಚ್‌ಐಐಎಎಲ್) ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. ಸದ್ಯ ಲಡಾಖ್ ಹಿಂಸಾಚಾರದ ನಡುವೆ ಸುದ್ದಿ ಮುನ್ನಲೆಗೆ ಬಂದಿದೆ. ಸದ್ಯ ತನಿಖೆಯ ಭಾಗವಾಗಿ ಸಿಬಿಐ ಎಚ್‌ಐಐಎಎಲ್ ಮತ್ತು ವಾಂಗ್‌ಚುಕ್‌ನ ಹಣಕಾಸು ವಹಿವಾಟುಗಳನ್ನು ಪರಿಶೀಲಿಸುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.

2022 ಮತ್ತು 2024ರ ನಡುವೆ ಪಡೆದ ವಿದೇಶಿ ನಿಧಿಗಳ ವಿವರಗಳನ್ನು ಪಡೆಯಲು ಸಿಬಿಐ ತಂಡವು ಕಳೆದ ವಾರ ಎಚ್‌ಐಐಎಎಲ್‌ಗೆ ಮತ್ತು ಲಡಾಖ್‌ನ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಳವಳಿ (SECMOL) ಗೆ ಭೇಟಿ ನೀಡಿದೆ ಎಂದು ಸೋನಮ್ ತಿಳಿಸಿದ್ದಾರೆ.

“ವಿದೇಶಿ ನಿಧಿಗಳನ್ನು ಸ್ವೀಕರಿಸಲು ನಾವು ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ (FCRA) ಅಡಿಯಲ್ಲಿ ಅನುಮತಿ ಪಡೆದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ನಾವು ವಿದೇಶಿ ನಿಧಿಗಳ ಮೇಲೆ ಅವಲಂಬಿತರಾಗಲು ಬಯಸಲ್ಲ. ನಾನು ನಮ್ಮ ಯೋಜನೆಯನ್ನು ರಫ್ತು ಮಾಡಿ, ಆದಾಯವನ್ನು ಗಳಿಸಿದ್ದೇವೆ. ಅದನ್ನು ವಿದೇಶಿ ಕೊಡುಗೆ ಎಂದು ಭಾವಿಸಲಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...