ಹರ್ಷ ಮಂದರ್ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ

Date:

ಸಾಮಾಜಿಕ ಕಾರ್ಯಕರ್ತ ಹರ್ಷ ಮಂದರ್ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ

ಸಾಮಾಜಿಕ ಕಾರ್ಯಕರ್ತ ಮತ್ತು ಈಕ್ವಿಟಿ ಸ್ಟಡೀಸ್ ಚಿಂತನ ಕೇಂದ್ರದ ನಿರ್ದೇಶಕ ಹರ್ಷ ಮಂದರ್ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡಸಿದೆ. ಸಂಶೋಧನಾ ಮತ್ತು ಅಧ್ಯಯನ ಸಂಸ್ಥೆ ಮತ್ತು ಅದರ ನಿರ್ದೇಶಕರಾದ ಹರ್ಷ ಮಂದರ್ ಮೇಲೆ ವಿದೇಶಿ ಅನುದಾನ (ನಿಯಂತ್ರಣ) ಕಾಯ್ದೆ (ಎಫ್‌ಸಿಆರ್‌ಎ)  ನಿಯಮಗಳ ಉಲ್ಲಂಘನೆ ಆರೋಪ ಹೊರಿಸಲಾಗಿದೆ. 

ದಾಳಿಯ ಸಂದರ್ಭದಲ್ಲಿ ಪ್ರಾಥಮಿಕ ತನಿಖೆಯ ಅಂಗವಾಗಿ ಸಿಬಿಐ ಕಚೇರಿಯ ಸಿಬ್ಬಂದಿ ಸೇರಿದಂತೆ ಹಲವರನ್ನು ಪ್ರಶ್ನಿಸಿದೆ. ದೆಹಲಿಯ ಅದ್ಚಿನಿ ಪ್ರದೇಶದಲ್ಲಿರುವ ಅಧ್ಯಯನ ಕೇಂದ್ರ ಮತ್ತು ವಸಂತ್ ಕುಂಜ್ ಪ್ರದೇಶದಲ್ಲಿರುವ ಹರ್ಷ ಮಂದರ್ ಮನೆ ಮೇಲೆ ದಾಳಿ ನಡೆಸಲಾಗಿದೆ.

ಕಳೆದ ಜೂನ್‌ನಲ್ಲಿ ಕೇಂದ್ರ ಗೃಹ ಸಚಿವಾಲಯ ಚಿಂತನ ಕೇಂದ್ರದ ವಿದೇಶಿ ಅನುದಾನ (ನಿಯಂತ್ರಣ)  ಕಾಯ್ದೆಯ ಪರವಾನಗಿಯನ್ನು 180 ದಿನಗಳವರೆಗೆ ರದ್ದುಪಡಿಸಿತ್ತು. ಮಂದರ್ ನಿಯಮಿತವಾಗಿ ಅನೇಕ ದಿನಪತ್ರಿಕೆಗಳಿಗೆ ಅಂಕಣ ಬರೆಯುತ್ತಿದ್ದರು ಎಂದು ಆಗ ಸಚಿವಾಲಯ ತಿಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2011-12ರಿಂದ 2017-18ರ ನಡುವೆ ವೃತ್ತಿಪರ ರಶೀದಿ/ ಪಾವತಿಯಲ್ಲಿ ಮಂದರ್  ರೂ 12,64,671 ವಿದೇಶಿ ಅನುದಾನವನ್ನು ಸಂಸ್ಥೆಯ  ವಿದೇಶಿ ಅನುದಾನ (ನಿಯಂತ್ರಣ) ಕಾಯ್ದೆ ಖಾತೆಗೆ ಸ್ವೀಕರಿಸಿದ್ದಾರೆ. ಇದು (ಎಫ್‌ಸಿಆರ್‌ಎ) ವಿದೇಶಿ ಅನುದಾನ (ನಿಯಂತ್ರಣ) ಕಾಯ್ದೆ ನಿಯಮದ ಉಲ್ಲಂಘನೆ ಎಂದು ಗೃಹ ಸಚಿವಾಲಯ ಆರೋಪಿಸಿದೆ.

ಹರ್ಷ ಮಂದರ್ ನಿವೃತ್ತ ಐಎಎಸ್ ಅಧಿಕಾರಿ ಎನ್ನುವುದನ್ನೂ ನೆನಪಿಟ್ಟುಕೊಳ್ಳಬೇಕಿದೆ. ಕಳೆದ ವರ್ಷ ಮಂದರ್‌ ಸ್ಥಾಪಿಸಿದ್ದ ಸರ್ಕಾರೇತರ ಸಂಘಟನೆ ಅಮನ್ ಬಿರಾದರಿ ಟ್ರಸ್ಟ್‌ಗೆ ವಿದೇಶಿ ಅನುದಾನದ ಸಿಬಿಐ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಶಿಫಾರಸು ಮಾಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...