ರಾಜ್ಯದ ಬರ ಪರಿಹಾರ ಮನವಿಗೆ ಡಿ.23ರಂದು ಕೇಂದ್ರದಿಂದ ಸಭೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ

Date:

  • ನ್ಯಾಫೆಡ್ ಮುಖಾಂತರ ಕೊಬ್ಬರಿ ಬೆಳೆ ಖರೀದಿಗೂ ಮನವಿ
  • ರೂ. 18,171 ಕೋಟಿ ಬರ ಪರಿಹಾರಕ್ಕೆ ಮನವಿ ಸಲ್ಲಿಸಿರುವ ರಾಜ್ಯ

ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೊಳಿಸುವ ಸಂಬಂಧ ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಡಿ.23 ರಂದು ಉನ್ನತ ಮಟ್ಟದ ಸಭೆ ನಡೆಯಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಹಾಗೂ ಕೇಂದ್ರ ಕೃಷಿ ಸಚಿವರಾದ ಅಜುರ್ನ್ ಮುಂಡಾ ಅವರನ್ನು ಭೇಟಿಯಾದ ಬಳಿಕ ಪತ್ರಕರ್ತರ ಜೊತೆ ಅವರು ಮಾತನಾಡಿದರು.

“ರಾಜ್ಯ ಈ ವರ್ಷ ಭೀಕರ ಬರತ್ತೆ ತುತ್ತಾಗಿದೆ. ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರಿಯಾದ ಸಮಯದಲ್ಲಿ ಅವರಿಗೆ ಪರಿಹಾರ ಧನ ನೀಡಬೇಕಿದೆ. ಹೀಗಾಗಿ ಕೇಂದ್ರ ಸರ್ಕಾರ ಶೀಘ್ರವಾಗಿ ಕರ್ನಾಟಕದ ಬರ ಪರಿಹಾರ ಮನವಿಯ ಬಗ್ಗೆ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಬೇಕು, ಆದಷ್ಟು ಶೀಘ್ರದಲ್ಲಿ ಹಣ ಬಿಡುಗಡೆ ಮಾಡಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುವುದಾಗಿ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಅಮಿತ್ ಶಾ ಡಿ.23 ರಂದು ಉನ್ನತ ಮಟ್ಟದ ಸಭೆ ನಡೆಸಿ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವ ಸಂಬಂಧ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ರಾಜ್ಯದಲ್ಲಿರುವ ಸಣ್ಣ ರೈತರ ಸಂಖ್ಯೆಯ ನಿಖರ ಮಾಹಿತಿಯನ್ನು ಕೇಂದ್ರ ಸಚಿವರಿಗೆ ನೀಡಲಾಗಿದೆ” ಎಂದು ಅವರು ತಿಳಿಸಿದರು.

“ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬಿಡುಗಡೆಯಾಗಲಿರುವ ಬರ ಪರಿಹಾರ ಹಣದ ಮೊತ್ತ ಸಣ್ಣ ರೈತರ ಸಂಖ್ಯೆಗೆ ಅನುಗುಣವಾಗಿರುತ್ತದೆ. ಆದರೆ, ರಾಜ್ಯದ ಸಣ್ಣ ರೈತರ ಸಂಖ್ಯೆಯ ಬಗ್ಗೆ ಕೇಂದ್ರ ಸರ್ಕಾರದ ಬಳಿ ವಾಸ್ತವ ಅಂಕಿ-ಅಂಶಗಳಿಲ್ಲ” ಎಂದರು.

ನ್ಯಾಫೆಡ್ ಮೂಲಕ ಕೊಬ್ಬರಿ ಖರೀದಿಗೆ ಒತ್ತಾಯ

ಅಮಿತ್ ಶಾ ಭೇಟಿಯ ಬೆನ್ನಿಗೆ ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ ಅವರನ್ನು ಭೇಟಿ ಮಾಡಿರುವ ಸಚಿವ ಕೃಷ್ಣ ಬೈರೇಗೌಡ, ಕೊಬ್ಬರಿ ಬೆಳೆಯನ್ನು ಕೇಂದ್ರ ಸರ್ಕಾರವೇ “ನ್ಯಾಫೆಡ್” ಮುಖಾಂತರ ಖರೀದಿ ಮಾಡಬೇಕು ಎಂದು ಮನವಿ ಸಲ್ಲಿಸಿರುವುದಾಗಿ ತಿಳಿಸಿದರು.

“ರಾಜ್ಯದಲ್ಲಿ ಕೊಬ್ಬರಿ ಬೆಳೆಯುವ ರೈತರು ಅನೇಕರಿದ್ದಾರೆ. ಅನೇಕ ಜಿಲ್ಲೆಗಳಲ್ಲಿ ಕೊಬ್ಬರಿ ಬೆಳೆಗಾರರಿದ್ದಾರೆ. ಆದರೆ, ಈಗ ಕೊಬ್ಬರಿ ಬೆಲೆ ತೀವ್ರ ಕುಸಿತ ಕಂಡಿದೆ. ಪರಿಣಾಮ ರೈತರು ಸಂಕಷ್ಟಕ್ಕೀಡಾಗಿದ್ಧಾರೆ. ಹೀಗಾಗಿ ಕೇಂದ್ರ ಸರ್ಕಾರ ನ್ಯಾಫೆಡ್ ಮುಖಾಂತರ ಮಾರುಕಟ್ಟೆಯಿಂದ ನೇರವಾಗಿ ಕೊಬ್ಬರಿ ಖರೀದಿಸಬೇಕು. ಈ ಪ್ರಕ್ರಿಯೆ ತಕ್ಷಣ ಆರಂಭವಾಗಬೇಕು. ನ್ಯಾಫೆಡ್ ಮೂಲಕ ಕೊಬ್ಬರಿ ಖರೀದಿಗೆ ಮುಂದಾದರೆ, ಬೆಲೆ ತನ್ನಿಂದ ತಾನೇ ನಿಯಂತ್ರಣವಾಗುತ್ತದೆ” ಎಂದು ಕೇಂದ್ರ ಸಚಿವರ ಬಳಿ ಮನವಿ ಮಾಡಲಾಗಿದೆ ಎಂದರು.

“ಬರ ಪರಿಹಾರದ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಕೃಷಿ ಸಚಿವರೂ ಓರ್ವ ಸದಸ್ಯರಾಗಿದ್ದು, ಕರ್ನಾಟಕಕ್ಕೆ ಶೀಘ್ರ ಪರಿಹಾರ ಹಣ ಬಿಡುಗಡೆ ಮಾಡುವ ಸಂಬಂಧ ಸಭೆಯಲ್ಲಿ ಮಾತನಾಡಲು ಕೋರಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಆ ಪತ್ರವನ್ನು ನಾನೇ ನೇರವಾಗಿ ಅರ್ಜುನ್ ಮುಂಡಾ ಅವರಿಗೆ ನೀಡಿದ್ದೇನೆ. ರೈತರ ಸಂಕಷ್ಟವನ್ನು ಬಗೆಹರಿಸಲು ಮನವಿ ಮಾಡಿದ್ದೇನೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಈ ಸಂದರ್ಭ ಶಾಸಕ ಶಿವಲಿಂಗೇಗೌಡ ಜೊತೆಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...