ಕೇಂದ್ರ ಸರ್ಕಾರಿ ನೌಕರರಿಗೆ 18 ತಿಂಗಳಿಂದ ‘ತುಟ್ಟಿಭತ್ಯೆ’ ಪಾವತಿಸದ ಕೇಂದ್ರ; ಅಖಿಲೇಶ್ ವಾಗ್ದಾಳಿ

Date:

ಕೇಂದ್ರ ಸರ್ಕಾರಿ ನೌಕರರಿಗೆ 18 ತಿಂಗಳಿಂದ ತುಟ್ಟಿಭತ್ಯೆ (ಡಿಎ) ಬಾಕಿ ಪಾವತಿಸಲಾಗಿಲ್ಲ. ಕೇಂದ್ರವು ನೌಕರರ ಡಿಎಯನ್ನು ಬಾಕಿ ಉಳಿಸಿಕೊಂಡಿದೆ. ಜಾಗತಿಕವಾಗಿ ಆರ್ಥಿಕತೆಯಲ್ಲಿ ‘ಸೂಪರ್ ಪವರ್’ ಎಂದು ಹೇಳಿಕೊಳ್ಳುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ‘ಪವರ್’ ಎಲ್ಲಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅಖಿಲೇಶ್‌, “ನಿರಂತರವಾಗಿ ಹೆಚ್ಚುತ್ತಿರುವ ಜಿಎಸ್‌ಟಿ ಸಂಗ್ರಹದ ಹಣ ಎಲ್ಲಿಗೆ ಹೋಗುತ್ತಿದೆ” ಎಂದು ಪ್ರಶ್ನಿಸಿದ್ದಾರೆ.

‘ಜಾಗತಿಕವಾಗಿ ಆರ್ಥಿಕತೆಯಲ್ಲಿ ಭಾರತವು ಸೂಪರ್ ಪವರ್ ಆಗುತ್ತಿದೆ’ ಎಂದು ಹೇಳಿಕೊಂಡಿರುವ ಕೇಂದ್ರ ಸರ್ಕಾರದ ಹೇಳಿಕೆಯನ್ನು ಲೇವಡಿ ಮಾಡಿರುವ ಅವರು, “ಆರ್ಥಿಕತೆಯಲ್ಲಿ ‘ಸೂಪರ್ ಪವರ್’ ಆಗುತ್ತಿದೆ ಎಂದರೆ, ನೌಕರರು ತಮ್ಮ ಬಾಕಿಯನ್ನು ಪಡೆಯಲಾಗುವುದಿಲ್ಲ ಎಂದರ್ಥವೇ? ಕೇಂದ್ರ ಸರ್ಕಾರವು ಕೇಂದ್ರ ನೌಕರರಿಗೆ 18 ತಿಂಗಳ ತುಟ್ಟಿಭತ್ಯೆಯನ್ನು ಬಾಕಿ ಉಳಿಸಿಕೊಂಡಿದ್ದು, ಅದನ್ನು ಪಾವತಿಸಲು ನಿರಾಕರಿಸಿರುವುದು ಒಂದು ರೀತಿಯಲ್ಲಿ ‘ಸರ್ಕಾರಿ ಗ್ಯಾರಂಟಿ’ಯ ನಿರಾಕರಣೆಯಾಗಿದೆ,” ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿರಂತರವಾಗಿ ಹೆಚ್ಚುತ್ತಿರುವ ಜಿಎಸ್‌ಟಿ ಸಂಗ್ರಹ, ಟ್ರಿಲಿಯನ್ ಡಾಲರ್ ಆರ್ಥಿಕತೆಯ ಹಣ ಎಲ್ಲಿಗೆ ಹೋಗುತ್ತಿದೆ ಎಂಬುದನ್ನು ಸರ್ಕಾರ ವಿವರಿಸಬೇಕು. ಸೋರಿಕೆಯಾಗುವ ಶತಕೋಟಿ ಮೌಲ್ಯದ ಹಡಗುಗಳು ಮತ್ತು ಕಟ್ಟಡಗಳಿಗೆ ಹಣವಿದೆ. ಆದರೆ, ಸರ್ಕಾರವನ್ನು ನಡೆಸುವ ಉದ್ಯೋಗಿಗಳಿಗೆ ಪಾವತಿಸಲು ಹಣವಿಲ್ಲ. ಒಂದೆಡೆ, ಹೆಚ್ಚುತ್ತಿರುವ ಹಣದುಬ್ಬರ ಮತ್ತು ಇನ್ನೊಂದೆಡೆ, ತುಟ್ಟಿಭತ್ಯೆ ಸಿಗದಿರುವುದು ಸೀಮಿತ ಆದಾಯ ಹೊಂದಿರುವ ಉದ್ಯೋಗಿಗಳಿಗೆ ಭಾರೀ ಹೊಡೆತ ನೀಡುತ್ತಿದೆ,” ಎಂದು ಅವರು ಹೇಳಿದ್ದಾರೆ.

“ಬಾಕಿ ಪಾವತಿ ಮಾಡದಿರುವುದು ಉದ್ಯೋಗಿಗಳ ದಕ್ಷತೆಯ ಮೇಲೂ ಪರಿಣಾಮ ಬೀರುತ್ತದೆ. ಕೆಲಸ ಮಾಡುವವರಿಗೆ ಬಿಜೆಪಿಯವರು ಸರಿಯಾದ ಸಂಬಳ ನೀಡುವುದಿಲ್ಲ. ಸರ್ಕಾರವು ವೃದ್ಧರನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಅವರ ವೈದ್ಯಕೀಯ ವೆಚ್ಚಗಳು ಹೆಚ್ಚಾಗುತ್ತಿವೆ. ಆದರೆ, ಅವರ ಪಿಂಚಣಿ ಹೆಚ್ಚುತ್ತಿಲ್ಲ,” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಈಗ ಹಿರಿಯ ನಾಗರಿಕರು ಪಿಂಚಣಿಗಾಗಿ ಉಪವಾಸ ಸತ್ಯಾಗ್ರಹ ನಡೆಸುವುದನ್ನು ಸರ್ಕಾರವು ಬಯಸುತ್ತದೆಯೇ? ರೈಲ್ವೇ ಪ್ರಯಾಣದಲ್ಲಿ ರಿಯಾಯಿತಿಗಳನ್ನು ನಿಲ್ಲಿಸುವ ಮೂಲಕ ಹಿರಿಯ ನಾಗರಿಕರನ್ನು ಬಿಜೆಪಿ ಅವಮಾನಿಸಿದೆ,” ಎಂದು ಅವರು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...