ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ರಾಜ್ಯ ಸರ್ಕಾರ

Date:

ರಾಜ್ಯವು ತೀವ್ರ ಬರದಿಂದ ಸಂಕಷ್ಟಕ್ಕೆ ಸಿಲುಕಿದ್ದು, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್‌ಡಿಆರ್‌ಎಫ್‌) ಆರ್ಥಿಕ ನೆರವು ಬಿಡುಗಡೆ ಮಾಡಲು ಕೇಂದ್ರದ ಗೃಹ ಇಲಾಖೆಗೆ ನಿರ್ದೇಶಿಸಬೇಕು ಎಂದು ಕೋರಿ ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿರುವುದಾಗಿ ‘ಬಾರ್ & ಬೆಂಚ್’ ವರದಿ ಮಾಡಿದೆ.

ಅರ್ಜಿಯು ರಜಾಕಾಲೀನ ಪೀಠದ ಮುಂದೆ ವಿಚಾರಣೆಗೆ ಬರಲಿದೆ ಎಂದು ವರದಿ ತಿಳಿಸಿದ್ದು, ಸಂವಿಧಾನದ 32ನೇ ವಿಧಿಯ ಅಡಿ ರಿಟ್‌ ಅರ್ಜಿಯನ್ನು ಕರ್ನಾಟಕ ಸರ್ಕಾರವು ಸರ್ವೋಚ್ಚ ನ್ಯಾಯಾಲಯದಲ್ಲಿ ಸಲ್ಲಿಕೆ ಮಾಡಿದೆ ಎಂದು ಉಲ್ಲೇಖಿಸಿದೆ.

ಕೇಂದ್ರ ಗೃಹ ಇಲಾಖೆಯ ಕ್ರಮವು ಸಂವಿಧಾನದ 14 ಮತ್ತು 21ನೇ ವಿಧಿಯಡಿ ಕಲ್ಪಿಸಿರುವ ರಾಜ್ಯದ ಜನರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ರಾಜ್ಯ ಸರ್ಕಾರವು ಆಕ್ಷೇಪಿಸಿದ್ದು, ಅರ್ಜಿಯಲ್ಲಿ ಕೇಂದ್ರ ಗೃಹ, ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವನ್ನು (ಎನ್‌ಡಿಎಂಎ) ಪ್ರತಿವಾದಿಗಳನ್ನಾಗಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬರದಿಂದ ರಾಜ್ಯದಲ್ಲಿ ರೂ.35,162.05 ಕೋಟಿ ಮೌಲ್ಯದ ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದ್ದು, ಎನ್‌ಡಿಆರ್‌ಎಫ್‌ನಿಂದ ರಾಜ್ಯ ಸರ್ಕಾರವು ರೂ.18,171.44 ಕೋಟಿ ಆರ್ಥಿಕ ನೆರವು ಕೋರಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಬರ ಪರಿಹಾರ ಬಿಡುಗಡೆ ಮಾಡುವ ನಿಟ್ಟಿನಲ್ಲಿ ಯಾವುದೇ ಕ್ರಮಕೈಗೊಳ್ಳದ ಮತ್ತು ಸ್ವೇಚ್ಛೆಯಿಂದ ನಡೆದುಕೊಳ್ಳುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಸಂವಿಧಾನದ 32ನೇ ವಿಧಿಯಡಿ ಜನರ ಕಾನೂನುಬದ್ಧ ರಕ್ಷಕನಾದ (parens patriae) ಕರ್ನಾಟಕ ಸರ್ಕಾರವು ತನ್ನ ಹೊಣೆಗಾರಿಕೆ ನಿಭಾಯಿಸುವ ನಿಟ್ಟಿನಲ್ಲಿ ನ್ಯಾಯಾಲಯದ ಮೆಟ್ಟಿಲೇರಿದೆ.

ವಿಪತ್ತು ನಿರ್ವಹಣಾ ಕಾಯಿದೆ 2005, ಬರ ನಿರ್ವಹಣೆ ಕೈಪಿಡಿ ಮತ್ತು ರಾಜ್ಯ ವಿಪತ್ತು ಪರಿಹಾರ ನಿಧಿಯ ರಚನೆಯ ಮಾರ್ಗಸೂಚಿ ಮತ್ತು ಆಡಳಿತ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಅಡಿ ಕ್ರಮಕೈಗೊಳ್ಳದ ಕೇಂದ್ರ ಸರ್ಕಾರದ ಕ್ರಮ ಕಾನೂನುಬಾಹಿರ ಎಂದು ರಾಜ್ಯ ಸರ್ಕಾರ ಅರ್ಜಿಯಲ್ಲಿ ವಾದಿಸಿದೆ.

ವಿಪತ್ತು ನಿರ್ವಹಣಾ ಕೈಪಿಡಿಯ ಅಡಿ ಅಂತರ-ಸಚಿವಾಲಯ ಕೇಂದ್ರ ತಂಡ (ಐಎಂಸಿಟಿ) ವರದಿ ನೀಡಿದ ತಿಂಗಳ ಒಳಗೆ ಎನ್‌ಡಿಆರ್‌ಎಫ್‌ನಿಂದ ನೆರವು ಬಿಡುಗಡೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಅಂತಿಮ ನಿರ್ಧಾರ ಕೈಗೊಳ್ಳಬೇಕು. ಐಎಂಸಿಟಿ ತಂಡವು 2023ರ ಅಕ್ಟೋಬರ್‌ 4ರಿಂದ 9ರವರೆಗೆ ಹಲವು ಜಿಲ್ಲೆಗಳಿಗೆ ಭೇಟಿ ನೀಡಿ ಬರದ ಸಮಗ್ರ ವರದಿ ಸಲ್ಲಿಸಿ ಆರು ತಿಂಗಳಾದರೂ ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರ ಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಈ ಪೈಕಿ 196 ತಾಲೂಕುಗಳು ಗಂಭೀರ ಬರ ಪೀಡಿತವಾಗಿದ್ದು, 27 ತಾಲೂಕುಗಳು ಅರೆ ಬರಪೀಡಿತವಾಗಿವೆ. ಮಳೆಯ ಕೊರತೆಯಿಂದ ರೈತರು ಬೆಳೆದಿರುವ ಬೆಳೆ ನಾಶವಾಗಿದ್ದು, ಅಂತರ್ಜಲ ಕುಸಿತವಾಗಿದೆ. ಇದರಿಂದ ದಿನ ಬಳಕೆ, ಕೃಷಿ ಹಾಗೂ ಕೈಗಾರಿಕೆಗೆ ನೀರು ಪೂರೈಕೆ ದುರ್ಲಭವಾಗಿದೆ. ಜಾನುವಾರುಗಳಿಗೆ ತೀವ್ರ ಸಮಸ್ಯೆಯಾಗಿದ್ದು, ರೈತರ ಬದುಕು ದಯನೀಯವಾಗಿದೆ. ಬರದಿಂದಾಗಿ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿದ್ದು, ಆದಾಯ ನಷ್ಟ, ಉದ್ಯೋಗಕ್ಕೆ ಹಾನಿ ಸೇರಿದಂತೆ ರಾಜ್ಯದ ಆರ್ಥಿಕತೆಗೆ ಭಾರೀ ಹೊಡೆತ ನೀಡಿದೆ ಎಂದು ವಿವರಿಸಲಾಗಿದೆ.

ವಿಪತ್ತು ನಿರ್ವಹಣಾ ಕಾಯಿದೆ 2005ರ ಅಡಿ ರಾಜ್ಯ ಸರ್ಕಾರಗಳಿಗೆ ಆರ್ಥಿಕ ನೆರವು ನೀಡುವ ಹೊಣೆಗಾರಿಕೆ ಕೇಂದ್ರ ಸರ್ಕಾರದ ಮೇಲಿದೆ. ಪ್ರಧಾನ ಮಂತ್ರಿ, ಗೃಹ ಮಂತ್ರಿ, ಕೃಷಿ ಮಂತ್ರಿ ಹಾಗೂ ಹಣಕಾಸು ಮಂತ್ರಿಯನ್ನು ಮುಖತಃ ಭೇಟಿ ಮಾಡಿ, ಹಲವು ಬಾರಿ ಪತ್ರ ಬರೆದಿದ್ದರೂ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ರಾಜ್ಯ ಸರ್ಕಾರವು ದೂರಿದೆ.

ಕೇಂದ್ರ ಗೃಹ ಇಲಾಖೆ ರಚಿಸಿರುವ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಉಪಸಮಿತಿಯು ಅಧ್ಯಕ್ಷರು ಕರ್ನಾಟಕಕ್ಕೆ ಎನ್‌ಡಿಆರ್‌ಎಫ್‌ ಅಡಿ ಆರ್ಥಿಕ ನೆರವು ನೀಡಲು ಶಿಫಾರಸ್ಸು ಪತ್ರವನ್ನು 2023ರ ನವೆಂಬರ್‌ 20ರಂದೇ ಗೃಹ ಇಲಾಖೆಗೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ, ಕೇಂದ್ರ ಗೃಹ ಇಲಾಖೆಯು ಉನ್ನತ ಮಟ್ಟದ ಸಮಿತಿಯ ಸಭೆ ನಡೆಸಿ ಪರಿಹಾರ ಬಿಡುಗಡೆ ಮಾಡುವ ನಿಟ್ಟಿನಲ್ಲಿ ವಿಳಂಬ ನೀತಿ ಅನುಸರಿಸಿದೆ ಎಂದು ಸುಪ್ರೀಂ ಕೋರ್ಟಿಗೆ ಸಲ್ಲಿಸಿರುವ ಅರ್ಜಿಯಲ್ಲಿ ಸಿದ್ದರಾಮಯ್ಯ ಸರ್ಕಾರವು ಮಾಹಿತಿ ನೀಡಿದೆ.

ಇದನ್ನು ಓದಿದ್ದೀರಾ? ರಾಜಸ್ಥಾನ | ನಿರಂತರ ದ್ವೇಷ ಹರಡುವ ‘ಜೈಪುರ್ ಡೈಲಾಗ್ಸ್‌’ನ ನಿರ್ದೇಶಕನಿಗೆ ಕಾಂಗ್ರೆಸ್ ಟಿಕೆಟ್!

ಎನ್‌ಡಿಆರ್‌ಎಫ್‌ನಿಂದ ರಾಜ್ಯ ಸರ್ಕಾರವು ₹18,171.44 ಕೋಟಿ ಪರಿಹಾರ ಕೋರಿದ್ದು, ಇದರಲ್ಲಿ ₹4663.12 ಕೋಟಿ ಬೆಳೆ ನಷ್ಟ, ₹12577.9 ಕೋಟಿ ದವಸ-ಧಾನ್ಯದ ರೂಪದಲ್ಲಿನ ಪರಿಹಾರ ಹಾಗೂ ₹566.78 ಕೋಟಿ ಕುಡಿಯುವ ನೀರಿಗೆ ಮತ್ತು ₹363.68 ಕೋಟಿ ಜಾನುವಾರುಗಳ ಮೇವಿಗೆ ಕೋರಿರುವ ಪರಿಹಾರ ಸೇರಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...