ಸಿಂಗ್‌ ಸ್ಮಾರಕ ನಿರ್ಮಾಣಕ್ಕೆ ಕೇಂದ್ರ ‌ಸರ್ಕಾರ ಜಾಗ ನೀಡದಿರುವುದು ತಪ್ಪು ನಿರ್ಧಾರ : ಡಿ ಕೆ ಶಿವಕುಮಾರ್

Date:

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡದೆ ಇರುವುದು ಕೇಂದ್ರ ಸರ್ಕಾರದ ತಪ್ಪು. ಮಲ್ಲಿಕಾರ್ಜುನ ಖರ್ಗೆ ಅವರು ಕೇಳಿದ್ದರಲ್ಲಿ ತಪ್ಪಿಲ್ಲ. ಕೇಂದ್ರ ಸರ್ಕಾರ ಹೃದಯ ಶ್ರೀಮಂತಿಕೆಯನ್ನು ತೋರಿಸಬೇಕಾಗಿತ್ತು. ಒಳ್ಳೆಯ ಮನಸುಗಳು ಈ ಕೆಲಸಕ್ಕೆ ಹೃದಯ ಶ್ರೀಮಂತಿಕೆಯನ್ನು ತೋರಿಸಲಿ ಎಂದು ನಂಬಿದ್ದೇವೆ. ಈಗಲೂ ಕಾಂಗ್ರೆಸ್ ಪಕ್ಷದ ಬೇಡಿಕೆಗೆ ಮನ್ನಣೆ ದೊರೆಯುತ್ತದೆ ಎನ್ನುವ ವಿಶ್ವಾಸವಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ದೆಹಲಿಯಲ್ಲಿ ಶನಿವಾರ ಪುಷ್ಪಗುಚ್ಛ ಇರಿಸಿ, ಅಂತಿಮ ನಮನ ಸಲ್ಲಿಸಿ ಹೊರ ಬಂದ ಬಳಿಕ ‘ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡುವಂತೆ’ ಮನವಿ ಬಗ್ಗೆ ಕೇಳಿದಾಗ ಉತ್ತರಿಸಿದರು.

“ಇತಿಹಾಸ ಮನಮೋಹನ್ ಸಿಂಗ್ ಅವರನ್ನು ನೆನಪಿನಲ್ಲಿಟ್ಟುಕೊಳ್ಳುತ್ತದೆ. ನೀವು (ಮಾಧ್ಯಮದವರು), ವಿರೋಧ ಪಕ್ಷದವರು ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ” ಎಂದು ಹೇಳುತ್ತಾ ಇದ್ದರು. ಅದು ಇಂದು ಆಗುತ್ತಿದೆ. ಜನಪರ ಕಾಯ್ದೆಗಳ ಮೂಲಕ ಭಾರತದ ಭವಿಷ್ಯವನ್ನು ಬದಲಾಯಿಸಿದವರು ಮನಮೋಹನ್ ಸಿಂಗ್” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮನಮೋಹನ್ ಸಿಂಗ್ ಎಂಬ ‘ಕುರಿಮರಿ’ಯ ಮುಂದೆ ಸೋತಿದ್ದ ‘ಉಕ್ಕಿನ ಮನುಷ್ಯ’ ಆಡ್ವಾಣಿ

“ಅರಣ್ಯ ಭೂಮಿ ಹಕ್ಕು ಕಾಯ್ದೆ, ಆಹಾರ ಭದ್ರತಾ ಕಾಯ್ದೆ, ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ, ಶಿಕ್ಷಣದ ಹಕ್ಕು ಕಾಯ್ದೆಗಳು ಗ್ರಾಮೀಣ ಭಾಗದ ಜನರ ಏಳಿಗೆಗೆ ಕಾರಣವಾಯಿತು. ಮಾಹಿತಿ ಹಕ್ಕು ಸೇರಿದಂತೆ ಹಲವಾರು ಯೋಜನೆಗಳು ಆಡಳಿತದಲ್ಲಿ ಪಾರದರ್ಶಕತೆ ತಂದವು. ಆರೋಗ್ಯ ಕ್ಷೇತ್ರದಲ್ಲಿ ಆಶಾ ಕಾರ್ಯಕರ್ತರ ಯೋಜನೆ ಜಾರಿಗೆ ತಂದರು. ತಾವು ಜಾರಿಗೊಳಿಸಿದ ಅನೇಕ ಕಾಯ್ದೆಗಳ ಮೂಲಕ ಮನಮೋಹನ್ ಸಿಂಗ್ ಅವರು ಜನ ಸಾಮಾನ್ಯರ ನಡುವೆ ಇಂದಿಗೂ ಜೀವಂತವಾಗಿದ್ದಾರೆ. ಸಿಂಗ್ ಅವರು ಜನಸಾಮಾನ್ಯರ ಬದುಕಿನಲ್ಲಿ ಬದಲಾವಣೆ ತಂದವರು” ಎಂದು ಹೇಳಿದರು.

“ಭೂಸ್ವಾಧೀನವಾದ ನಂತರ ಅನೇಕ ರೈತರಿಗೆ ತಕ್ಕನಾದ ಪರಿಹಾರ ಸಿಗುತ್ತಿರಲಿಲ್ಲ. ರೈತರ ಭೂಮಿಗೆ ನ್ಯಾಯಯುತವಾದ ಪರಿಹಾರ ನೀಡಿದರು. ಸಮಾಜದ ಎಲ್ಲಾ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ಆಡಳಿತ ನಡೆಸಿದರು. ಮಾಧ್ಯಮಗಳು ಹಾಗೂ ವಿರೋಧ ಪಕ್ಷಗಳು ಮನಮೋಹನ್ ಸಿಂಗ್ ಅವರ ಕೆಲಸಗಳನ್ನು ಈಗ ನೆನಪಿಸಿಕೊಳ್ಳುತ್ತಿವೆ. ಸಂವಿಧಾನ ಹಾಗೂ ನಮ್ಮ ನೆಲದ ಕಾನೂನುಗಳನ್ನು ರಕ್ಷಣೆ ಮಾಡಿದವರು ಮನಮೋಹನ್ ಸಿಂಗ್. ಆರ್ಥಿಕ ಸಚಿವರಾಗಿದ್ದ ಕಾಲದಿಂದ ಇಲ್ಲಿಯತನಕ ಈ ದೇಶದ ಆರ್ಥಿಕತೆಯನ್ನು ಸುಭದ್ರವಾಗಿ ಇಡಲು ಶ್ರಮಿಸಿದರು. ಇದನ್ನು ವಿರೋಧ ಪಕ್ಷದವರು ಕೂಡ ಒಪ್ಪಿದ್ದಾರೆ” ಎಂದರು.

“ಸೋನಿಯಾ ಗಾಂಧಿ ಅವರು ತಮಗೆ ದೊರೆತ ಪ್ರಧಾನಿಯಾಗುವ ಅವಕಾಶವನ್ನು ನಿರಾಕರಿಸಿ, ಈ ದೇಶಕ್ಕೆ ಉತ್ತಮ ಆರ್ಥಿಕ ತಜ್ಞನ ಅವಶ್ಯಕತೆಯಿದೆ ಎಂದು ಅಧಿಕಾರ ತ್ಯಾಗ ಮಾಡಿದರು. ನೆಹರು- ಗಾಂಧಿ ಕುಟುಂಬದ ತ್ಯಾಗವನ್ನು ಈ ದೇಶದ ಇತಿಹಾಸ ಮರೆಯುವುದಿಲ್ಲ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...