ಬರ ಅಧ್ಯಯನ ಮುಗಿಸಿದ ಕೇಂದ್ರ ತಂಡದಿಂದ ಶೀಘ್ರ ಪರಿಹಾರ ಬಿಡುಗಡೆ: ಸಚಿವ ಕೃಷ್ಣಬೈರೇಗೌಡ ವಿಶ್ವಾಸ

Date:

  • ಎರಡನೇ ಹಂತದಲ್ಲಿ ಮತ್ತೆ 21 ತಾಲೂಕುಗಳ ಬರ ಘೋಷಣೆಗೆ ಸಿದ್ದತೆ
  • ಕೇಂದ್ರ ಸಚಿವರ ಭೇಟಿಗೆ ಇಂದು ಮತ್ತೊಂದು ಪತ್ರ; ಹಸಿರು ಬರದ ಬಗ್ಗೆ

ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಕೇಂದ್ರ ಅಧ್ಯಯನ ತಂಡ ರಾಜ್ಯ ಸರ್ಕಾರದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ವಾರದೊಳಗೆ ಅಧ್ಯಯನ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಲಿದೆ. ಶೀಘ್ರದಲ್ಲೇ ಬರ ಪರಿಹಾರ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಸಚಿವ ಕೃಷ್ಣಬೈರೇಗೌಡ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೋಮವಾರ ಕೇಂದ್ರ ಬರ ಅಧ್ಯಯನ ತಂಡದ ಅಧಿಕಾರಿಗಳ ಜೊತೆಗಿನ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ‘ಕೇಂದ್ರ ಬರ ಅಧ್ಯಯನ ತಂಡದ ಅಧಿಕಾರಿಗಳು ಕಳೆದ ಮೂರು ದಿನಗಳಲ್ಲಿ ಮೂರು ತಂಡವಾಗಿ ರಾಜ್ಯದ ಎಲ್ಲ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಬೆಳೆ ಹಾನಿಯ ವಾಸ್ತವ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ರೈತರು ಹಾಗೂ ಜನಪ್ರತಿನಿಧಿಗಳ ಜೊತೆಗೂ ಚರ್ಚಿಸಿದ್ದಾರೆ’ ಎಂದು ತಿಳಿಸಿದರು.

bara

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಬರ ಘೋಷಣೆ ಸಂಬಂಧ ರಾಜ್ಯ ಸರ್ಕಾರ ಸಲ್ಲಿಸಿರುವ ಮನವಿಯು ವಸ್ತುಸ್ಥಿತಿಯಿಂದ ಕೂಡಿದೆ ಎಂದು ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹೀಗಾಗಿ ಶೀಘ್ರದಲ್ಲೇ ಬರ ಪರಿಹಾರ ಹಣ ರಾಜ್ಯಕ್ಕೆ ಸಂದಾಯವಾಗಲಿದೆ ಎಂಬ ವಿಶ್ವಾಸ ಇದೆ. ಆದರೆ ಎಷ್ಟು ಹಣ ಬಿಡುಗಡೆ ಮಾಡಲಿದ್ದಾರೆ ಎಂದು ಕಾದು ನೋಡಬೇಕಿದೆ’ ಎಂದರು.

‘ಬರ ಪರಿಶೀಲನೆ ನಂತರ ಕೇಂದ್ರ ತಂಡ ನಮ್ಮ ಜೊತೆಯೂ ಚರ್ಚೆ ನಡೆಸಿದ್ದು, ರಾಜ್ಯದಲ್ಲಿ ಅಧಿಕ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ಇದರಿಂದ ರೈತರು ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಇದೆ ಎಂದು ಸ್ವತಃ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ’ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

195 ತಾಲೂಕುಗಳ ಜೊತೆಗೆ ಎರಡನೇ ಹಂತದಲ್ಲಿ ಕೇಂದ್ರದ ಮಾನದಂಡದಂತೆ ಮತ್ತೆ 21 ತಾಲೂಕುಗಳ ಬರ ಘೋಷಣೆಗೆ ಸಿದ್ದತೆ ನಡೆಸಲಾಗಿದೆ. ಅಕ್ಟೋಬರ್ ತಿಂಗಳ ಕೊನೆಯವರೆಗೆ ಮತ್ತೊಂದು ಹಂತದಲ್ಲಿ ಬರ ಪೀಡಿತ ತಾಲೂಕುಗಳ ಘೋಷಿಸಲು ರಾಜ್ಯ ಸರ್ಕಾರಕ್ಕೆ ಅವಕಾಶ ಇದೆ. ಹೀಗಾಗಿ ಉಳಿದ 41 ತಾಲೂಕುಗಳ ಪೈಕಿ 11 ಜಿಲ್ಲೆಗಳ 21 ತಾಲೂಕುಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಬೆಳೆ ಸಮೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

bara 2

ರಾಜ್ಯದ ಸಣ್ಣ-ಅತಿಸಣ್ಣ ರೈತರ ಅಂಕಿಸಂಖ್ಯೆ ಬಗ್ಗೆ ಕೇಂದ್ರ ಸರ್ಕಾರದ ಬಳಿ ಇರುವ ಮಾಹಿತಿ ಅವಾಸ್ತವವಾಗಿದೆ. ಕೇಂದ್ರದ ಮಾಹಿತಿಯ ಪ್ರಕಾರ ರಾಜ್ಯದ ಸಣ್ಣ-ಅತಿಸಣ್ಣ ರೈತರ ಸಂಖ್ಯೆ ಶೇ.46 ರಷ್ಟು ಮಾತ್ರ. ಆದರೆ, ವಾಸ್ತವದಲ್ಲಿ ಈ ಸಂಖ್ಯೆ ಶೇ.60ಕ್ಕೂ ಅಧಿಕವಾಗಿದೆ. ಈ ಮಾಹಿತಿಯನ್ನು ಕೇಂದ್ರಕ್ಕೆ ದೃಢಪಡಿಸಲು ಕೆಲವು ಪೂರಕ ಮಾಹಿತಿಯನ್ನು ಕಲೆ ಹಾಕುತ್ತಿದ್ದೇವೆ. ಇನ್ನು ಒಂದು ವಾರದಲ್ಲಿ ಈ ಮಾಹಿತಿಯನ್ನು ಕೇಂದ್ರಕ್ಕೆ ನೀಡಲಾಗುವುದು ಎಂದರು.

ಹಸಿರು ಬರಕ್ಕೆ ಕೇಂದ್ರ ತಂಡ ಒಪ್ಪಿಗೆ
ಕೆಲವು ಬರ ಪೀಡಿತ ತಾಲೂಕುಗಳಲ್ಲಿ ಹಸಿರು ತೆನೆಗಳು ಕಾಣಿಸಿಕೊಳ್ಳುತ್ತಿವೆ. ಆದರೆ, ಬೆಳೆ ಮಾತ್ರ ರೈತರ ಕೈಸೇರುತ್ತಿಲ್ಲ. ಮನವಿ ಪತ್ರದಲ್ಲಿ ಇದನ್ನು ರಾಜ್ಯ ಸರ್ಕಾರ ಹಸಿರು ಬರ ಎಂದು ಉಲ್ಲೇಖಿಸಿತ್ತು. ಹಲವೆಡೆ ಬರ ಪರಿಶೀಲನೆ ನಡೆಸಿದ ಕೇಂದ್ರ ಅಧ್ಯಯನ ತಂಡಕ್ಕೆ ವಿಜ್ಞಾನಿಗಳ ಮೂಲಕ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಡಲಾಗಿದೆ. ಹೀಗಾಗಿ ಹಸಿರು ಬರವನ್ನು ಕೇಂದ್ರದ ತಂಡವೂ ಒಪ್ಪಿಕೊಂಡಿದೆ ಎಂದು ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದರು.

ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ರೈತರ ಪರವಾಗಿಲ್ಲ, ಈ ಯೋಜನೆಯಲ್ಲಿ ಸಾಕಷ್ಟು ಅನಾನುಕೂಲತೆಗಳಿವೆ. ಈ ವಿಚಾರವನ್ನು ಕೇಂದ್ರದ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡುವಂತೆ ಬರ ಅಧ್ಯಯನ ತಂಡಕ್ಕೆ ಮನವಿ ಮಾಡಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...