ಅಧಿಕಾರ ಕೇಂದ್ರೀಕರಣ ಪ್ರಜಾಪ್ರಭುತ್ವಕ್ಕೆ ಮಾರಕ: ಡಾ. ಮುಖ್ಯಮಂತ್ರಿ ಚಂದ್ರು

Date:

“ಅವಧಿ ಮುಗಿದು ಮೂರು-ನಾಲ್ಕು ವರ್ಷಗಳಾದರೂ ನಗರ ಪಾಲಿಕೆಗಳ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯದೇ ಇರುವುದು ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಿದೆ. ಜನತಂತ್ರ ವ್ಯವಸ್ಥೆಯಡಿ ಆಡಳಿತ ಮಾಡುತ್ತೇವೆ ಎನ್ನುವ ಪಕ್ಷಗಳು ಯಾಕೆ ಚುನಾವಣೆ ನಡೆಸಲು ಮುಂದಾಗಿಲ್ಲ” ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಟೀಕಿಸಿದರು.

ಕಲಬುರಗಿಯ ಪತ್ರಿಕಾ ಭವನದಲ್ಲಿ ಮಾತನಾಡಿದ ಅವರು, “ಲೋಕಸಭಾ ಚುನಾವಣೆ ಬರುವ ಕಾರಣ, ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಲಾಗುತ್ತಿದೆ. ಒಂದು ದೇಶ, ಒಂದು ಧರ್ಮ, ಒಂದು ಭಾಷೆ ಎನ್ನುವ ಹೆಸರಿನಲ್ಲಿ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರಲಾಗುತ್ತಿದೆ” ಎಂದರು.

“ನಾನು ರಾಮನ ಭಕ್ತನೇ, ನಮ್ಮೂರಿನ ರಾಮ ಮಂದಿರಕ್ಕೆ ನಾನು ಹೋಗುತ್ತೇನೆ. ನಾನು ರಾಮ ಮಂದಿರದ ವಿರೋಧಿಯಲ್ಲ. ಆದರೆ, ಬಡವರು ಅಷ್ಟು ದೂರ ಹೋಗಿ ರಾಮನನ್ನು ನೋಡಲು ಸಾಧ್ಯವಾ? ರಾಮ ಮಂದಿರ ಆದ್ಯತೆಯಾಗಬೇಕಾ, ರಾಮರಾಜ್ಯ ನಿರ್ಮಾಣ ಆದ್ಯತೆಯಾಗಬೇಕಾ?” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಡೀ ದೇಶದಲ್ಲಿ ಯಾವ ರಾಜ್ಯವೂ ಉಳಿತಾಯ ಬಜೆಟ್ ಮಂಡಿಸಿಲ್ಲ. ಎಲ್ಲ ಸರ್ಕಾರಗಳೂ ಸಾಲ ಮಾಡಿ, ಕೊರತೆ ಬಜೆಟ್ ಮಂಡಿಸುತ್ತಿವೆ. ಆದರೆ, ಆಮ್ ಆದ್ಮಿ ಪಕ್ಷ ಮಾತ್ರ ದೆಹಲಿಯಲ್ಲಿ 8 ಸಾವಿರ ಕೋಟಿ ಉಳಿತಾಯ ಬಜೆಟ್ ಮಂಡಿಸಿದೆ. ಅದೂ ಕೂಡ ಉಚಿತ ಶಿಕ್ಷಣ, ನೀರು, ವಿದ್ಯುತ್, ಆರೋಗ್ಯ ಸೇವೆ ಕೊಟ್ಟು ಉಳಿತಾಯ ಬಜೆಟ್ ಮಂಡಿಸಿದೆ” ಎಂದರು.

“₹11 ಲಕ್ಷ ಕೋಟಿ ಉದ್ಯಮಿಗಳ ಸಾಲವನ್ನು ವೇವ್‌ ಆಫ್ ಮಾಡಲಾಗಿದೆ. ರೈತರ ಸಾಲ ಮನ್ನಾ ಮಾಡಲು ಆಗಿಲ್ಲ. ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಬೆಂಬಲ ಬೆಲೆ ನೀಡಿಲ್ಲ. ರೈತರಿಗೆ ಸರಿಯಾಗಿ ವಿದ್ಯುತ್, ನೀರು ಪೂರೈಕೆ ಆಗುತ್ತಿಲ್ಲ” ಎಂದರು.

“ಗ್ಯಾರಂಟಿ ಯೋಜನೆಗಳನ್ನು ನಾನು ಸ್ವಾಗತಿಸುತ್ತೇನೆ. ಆದರೆ, ಕೇಜ್ರಿವಾಲ್ ಅವರ ಯೋಜನೆಗಳನ್ನು ಕದ್ದು ರಾಜ್ಯದಲ್ಲಿ ಜನರಿಗೆ ಗ್ಯಾರಂಟಿ ಕೊಟ್ಟಿದ್ಧಿರಾ ಆದರೆ ಅದನ್ನು ಸರಿಯಾಗಿ ಜಾರಿ ಮಾಡಿಲ್ಲ. ಬೇರೆ ಯೋಜನೆಗಳಿಗೆ ಇಟ್ಟಿದ್ದ ಹಣವನ್ನು ತೆಗೆದು ಗ್ಯಾರಂಟಿಗಳಿಗೆ ಖರ್ಚು ಮಾಡುತ್ತಿದ್ದಾರೆ” ಎಂದು ಹೇಳಿದರು.

“ಪ್ರತಾಪ್ ರೆಡ್ಡಿಯವರು ಸಜ್ಜನ ರಾಜಕಾರಣಿ, ಪದವೀಧರರ ಚುನಾವಣೆಯಲ್ಲಿ ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋತಿದ್ದರು. ಈ ಬಾರಿ ಕೂಡ ಅವರು ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಅವರಿಗೆ ಆಮ್ ಆದ್ಮಿ ಪಕ್ಷ ಬೆಂಬಲ ನೀಡಲಿದೆ. ಅವರ ಗೆಲುವಿಗೆ ಶ್ರಮಿಸುತ್ತೇವೆ” ಎಂದು ಹೇಳಿದರು.

“ಕಾಂಗ್ರೆಸ್ ಅಧಿಕಾರಕ್ಕೆ ಬಂದು 9 ತಿಂಗಳಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಧಿಕಾರಿಗಳಿಗೆ ಹಣ ಮೀಸಲಿಟ್ಟಿಲ್ಲ. 14 ಅಕಾಡಮಿಗಳಿದ್ದು ಅಧ್ಯಕ್ಷರು, ಸದಸ್ಯರನ್ನು ಆಯ್ಕೆ ಮಾಡಿಲ್ಲ. ಕನ್ನಡದ ಬಗ್ಗೆ ಇಷ್ಟೆಲ್ಲಾ ಮಾತನಾಡುವ ಸಿಎಂ ಸಿದ್ದರಾಮಯ್ಯನವರು ಈ ಬಗ್ಗೆ ನಿರ್ಲಕ್ಷ್ಯ ಮಾಡುತ್ತಿರುವುದು ಏಕೆ?” ಎಂದರು.

“ಕಣ್ಣೆದುರೇ ಕೋಟಿ ಕೋಟಿ ಹಣ ಸಿಕ್ಕಿದ ಮಾಡಾಳ್ ವಿರೂಪಾಕ್ಷಪ್ಪ ಅವರ ಭ್ರಷ್ಟಾಚಾರ ಪ್ರಕರಣ ಹಳ್ಳ ಹಿಡಿದರೆ, ಒಂದೂ ರೂಪಾಯಿ ಸಿಗದೇ ಇದ್ದರೂ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ನಾಯಕರಿಗೆ ತನಿಖಾ ಸಂಸ್ಥೆಗಳನ್ನು ಬಳಸಿ ತೊಂದರೆ ನೀಡಲಾಗುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ನಾಮಫಲಕಗಳಲ್ಲಿ ಕನ್ನಡ ಅಳವಡಿಸದ 49,241 ಮಳಿಗೆಗಳಿಗೆ ನೋಟಿಸ್

ಪದವೀಧರರ ಕ್ಷೇತ್ರದ ಚುನಾವಣಾ ಅಭ್ಯರ್ಥಿ ಪ್ರತಾಪ್ ರೆಡ್ಡಿ ಮಾತನಾಡಿ, “ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋತಿದ್ದೇನೆ. ನಮ್ಮ ಭಾಗದಲ್ಲಿ ಸರ್ಕಾರ ಯಾವ ಶಾಲಾ-ಕಾಲೇಜುಗಳಿಗೂ ಹಣ ನೀಡುತ್ತಿಲ್ಲ. ಎಲ್ಲ ಕಡೆಯೂ ಅತಿಥಿ ಉಪನ್ಯಾಸಕರಿದ್ದಾರೆ. ಅವರಿಗೆ ಸರಿಯಾಗಿ ಸಂಬಳ ಸಿಗುತ್ತಿಲ್ಲ” ಎಂದರು.

ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ರುದ್ರಯ್ಯ ನವಲಿಮಠ, ನಾಸಿಮುದ್ದೀನ್ ಪಟೇಲ್, ಎಂಎಲ್‌ಸಿ ಚುನಾವಣಾ ಅಭ್ಯರ್ಥಿ ಪ್ರತಾಪ್ ರೆಡ್ಡಿ ಹಾಗೂ ಜಿಲ್ಲಾ ಮಟ್ಟದ ನಾಯಕರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...