ಎಸ್‌ಸಿ/ಎಸ್‌ಟಿ, ಒಬಿಸಿಗಳಿಗೆ ಮೀಸಲಾದ ಭರ್ತಿಯಾಗದ ಹುದ್ದೆಗಳ ಬಗ್ಗೆ ಕೇಂದ್ರ ಮಾಹಿತಿ ಮರೆಮಾಚುತ್ತಿದೆ: ಆರ್‌ಟಿಐ ಕಾರ್ಯಕರ್ತ

Date:

ಕೇಂದ್ರ ಸರ್ಕಾರವು ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳು(ಎಸ್‌ಟಿ), ಪರಿಶಿಷ್ಟ ಪಂಗಡಗಳು(ಎಸ್‌ಟಿ) ಮತ್ತು ಇತರ ಹಿಂದುಳಿದ ವರ್ಗಗಳಿಗೆ(ಒಬಿಸಿ) ಭರ್ತಿಯಾಗದ ಮೀಸಲಾತಿ ಹುದ್ದೆಗಳ ಕುರಿತು ನಿರ್ಣಾಯಕ ಮಾಹಿತಿಯನ್ನು ಮರೆಮಾಚುವ ಪ್ರಯತ್ನವನ್ನು ಮಾಡುತ್ತಿದೆ ಎಂದು ಕಾಮನ್‌ವೆಲ್ತ್ ಮಾನವ ಹಕ್ಕುಗಳ ಉಪಕ್ರಮದ(CHRI) ನಿರ್ದೇಶಕ ಮತ್ತು ಆರ್‌ಟಿಐ ಕಾರ್ಯಕರ್ತ ವೆಂಕಟೇಶ್ ನಾಯಕ್ ಹೇಳಿದ್ದಾರೆ.

2024ರ ಡಿಸೆಂಬರ್‌ ತಿಂಗಳಲ್ಲಿ ಎಸ್‌ಸಿ/ಎಸ್‌ಟಿಗಳ ಕಲ್ಯಾಣ ಕುರಿತು ಸಂಸದೀಯ ಸಮಿತಿಯ ವರದಿಯನ್ನು ಆಧರಿಸಿ ನಾಯಕ್ ಆರ್‌ಟಿಐ ಅರ್ಜಿ ಸಲ್ಲಿಸಿದ್ದರು. ಹಾಗೆಯೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡದಿರುವುದು, ಸಾರ್ವಜನಿಕ ವಲಯದ ಸಂಸ್ಥೆಗಳು, ಸಚಿವಾಲಯಗಳು ಮತ್ತು ಬ್ಯಾಂಕುಗಳಲ್ಲಿ ಎಸ್‌ಸಿ/ಎಸ್‌ಟಿ ಪ್ರಾತಿನಿಧ್ಯ ಮೊದಲಾದವುಗಳ ವಿಚಾರದಲ್ಲಿ ಸರ್ಕಾರವನ್ನು ಟೀಕಿಸಿದ್ದರು.

ಇದನ್ನು ಓದಿದ್ದೀರಾ? ಪಿಎಂ ಕೇರ್ಸ್‌ ಹಗರಣ | ಆರ್‌ಟಿಐ ಅರ್ಜಿಗೆ ಉತ್ತರಿಸಲು ಕೇಂದ್ರ ಹಿಂಜರಿಯುವುದೇಕೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಖಾಲಿ ಹುದ್ದೆಗಳ ಕುರಿತು ದತ್ತಾಂಶ ಮತ್ತು ಮೀಸಲಾತಿ ನೀತಿಗಳನ್ನು ಜಾರಿಗೊಳಿಸಲು ಸಂಪರ್ಕ ಅಧಿಕಾರಿಗಳ ನೇಮಕಾತಿಗಾಗಿ ನಾಯಕ್ ವಿವಿಧ ಇಲಾಖೆಗಳಿಗೆ ಆರ್‌ಟಿಐ ಅರ್ಜಿಗಳನ್ನು ಸಲ್ಲಿಸಿದ್ದರು. ಆದರೆ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿಗಳು (ಸಿಪಿಐಒಗಳು) ನಾಯಕ್ ಅವರಿಗೆ ಹಿಂದಿನ ವರ್ಷಗಳ ಅಪ್ರಸ್ತುತ ನೇಮಕಾತಿ ಅಂಕಿಅಂಶಗಳನ್ನು ನೀಡಿದ್ದರು. ಹಾಗೆಯೇ ನಿರ್ದಿಷ್ಟ ಪ್ರಶ್ನೆಗಳಿಗೆ ಸರಿಯಾದ ಉತ್ತರವೂ ನೀಡಿಲ್ಲ ಎಂದು ನಾಯಕ್ ಆರೋಪಿಸಿದ್ದಾರೆ.

ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಖಾಲಿ ಹುದ್ದೆಗಳ ಕುರಿತು ದತ್ತಾಂಶ ಹೊಂದಿಲ್ಲ ಎಂದು ಹೇಳಿಕೊಂಡಿದೆ. ಹಾಗೆಯೇ ಆರ್‌ಟಿಐ ಕಾಯ್ದೆಯ ಕೆಲವು ನಿಬಂಧನೆಗಳನ್ನು ಉಲ್ಲೇಖಿಸಿ ಈ ಮಾಹಿತಿ ಸಂಗ್ರಹಿಸಲಾಗುವುದಿಲ್ಲ ಎಂದು ಕೇಂದ್ರ ಹೇಳಿದೆ. ಇದನ್ನು ಟೀಕಿಸಿರುವ ಆರ್‌ಟಿಐ ಕಾರ್ಯಕರ್ತ, “ಇದು ರಾಜಕೀಯವಾಗಿ ದತ್ತಾಂಶಗಳನ್ನು ಮರೆಮಾಚುವ ಉದ್ದೇಶಪೂರ್ವಕ ಪ್ರಯತ್ನ ನಡೆದಿದೆ. ಡಿಒಪಿಟಿ ತನ್ನ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದೆ” ಎಂದು ಆರೋಪಿಸಿದ್ದಾರೆ.

ಸರ್ಕಾರವು ಹೆಚ್ಚಾಗಿ ಎಸ್‌ಸಿ/ಎಸ್‌ಟಿಗಳು ಮತ್ತು ಒಬಿಸಿಗಳ ನೇಮಕಾತಿ ಸಂಖ್ಯೆಯನ್ನು ತೋರಿಸುತ್ತದೆ. ಆದರೆ ಈ ನೇಮಕಾತಿಗಳು ಪ್ರಧಾನವಾಗಿ ಕೆಳಮಟ್ಟದಲ್ಲಿ ನಡೆದಿದೆ. ನಿರ್ಧಾರ ತೆಗೆದುಕೊಳ್ಳುವಂತಹ ಪ್ರಮುಖ ಹುದ್ದೆಗಳಲ್ಲಿ ಎಸ್‌ಸಿ/ಎಸ್‌ಟಿ ಪ್ರಾತಿನಿಧ್ಯವಿಲ್ಲ ಎಂದು ನಾಯಕ್ ಹೇಳಿದ್ದಾರೆ.

ಇನ್ನು ಈ ಆರೋಪಕ್ಕೆ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಕೂಡಾ ಧ್ವನಿಗೂಡಿಸಿದ್ದಾರೆ. “ವರ್ಷದಿಂದ ವರ್ಷಕ್ಕೆ ಒಬಿಸಿಗಳು, ಎಸ್‌ಸಿಗಳು ಮತ್ತು ಎಸ್‌ಟಿಗಳಿಗೆ ಘೋರ ಅನ್ಯಾಯವಾಗುತ್ತಿದೆ. ವರ್ಷಗಳಿಂದ ಖಾಲಿಯಾಗಿರುವ ಈ ಹುದ್ದೆಗಳನ್ನು ಯಾವುದೇ ನೆಪವಿಲ್ಲದೆ ತಕ್ಷಣವೇ ಭರ್ತಿ ಮಾಡಬೇಕಾಗಿದೆ” ಎಂದಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ, “ಸಮಸ್ಯೆ ಕೇಂದ್ರ ಸರ್ಕಾರದ ಚಿಂತನಾ ಪ್ರಕ್ರಿಯೆಯಲ್ಲಿದೆ. ಅದನ್ನು ಮೊದಲು ಸರಿಪಡಿಸಬೇಕು” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...