ಕೇಂದ್ರವು ಕಾಶ್ಮೀರದಲ್ಲಿ ಏಕತೆ ನಿರ್ಮಿಸಬೇಕು, ಹಾನಿ ತಪ್ಪಿಸಬೇಕು: ಪಹಲ್ಗಾಮ್ ದಾಳಿಯ ಬಗ್ಗೆ ಸಿಪಿಐಎಂ ಹೇಳಿಕೆ

Date:

ಕೇಂದ್ರ ಸರ್ಕಾರವು ಕಾಶ್ಮೀರದಲ್ಲಿ ಏಕತೆಯನ್ನು ನಿರ್ಮಿಸಬೇಕು, ಯಾವುದೇ ಹಾನಿಯಾಗದಂತೆ ತಪ್ಪಿಸಬೇಕು ಎಂದು ಪಹಲ್ಗಾಮ್ ದಾಳಿಯ ಬಗ್ಗೆ ಸಿಪಿಐಎಂ ಭಾನುವಾರ ಹೇಳಿದೆ. ಭಯೋತ್ಪಾದಕರು ಇದ್ದರೆಂಬ ಕಾರಣಕ್ಕೆ ಮನೆಯನ್ನೇ ಕೆಡವುದರಿಂದ ಮುಗ್ಧ ಕುಟುಂಬಗಳ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಇಂತಹ ಕ್ರಮಗಳನ್ನು ಕೈಗೊಳ್ಳಬಾರದು ಎಂದು ಸಿಪಿಐಎಂ ಒತ್ತಾಯಿಸಿದೆ.

ಹೊಸದಾಗಿ ಆಯ್ಕೆಯಾದ ಪೊಲಿಟ್ ಬ್ಯೂರೋದ ಮೊದಲ ಸಭೆಯ ನಂತರ ಸಿಪಿಐಎಂ ಹೇಳಿಕೆಯನ್ನು ನೀಡಿದೆ. ಏಪ್ರಿಲ್ 22ರ ದಾಳಿಯು ಇಡೀ ದೇಶವನ್ನು ಒಗ್ಗೂಡಿಸಿದೆ. ಹಂತಕರನ್ನು ಪತ್ತೆಹಚ್ಚಲು ಮತ್ತು ಶಿಕ್ಷಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಬೇಕು ಎಂದು ಆಗ್ರಹಿಸಿದೆ.

ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿ | ಭಾರತದಿಂದ ಪಾಕಿಸ್ತಾನಕ್ಕೆ ತೆರಳುತ್ತಿರುವ ಸಾಮಾನ್ಯರು, ಸಂಕಟದ ಕತೆಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ ಮಿಲಿಟರಿ ಕೈಗೊಳ್ಳುವ ಕ್ರಮಗಳು ಭಯೋತ್ಪಾದನೆಯನ್ನು ನಿಗ್ರಹಿಸುವ ಉದ್ದೇಶವನ್ನು ಪೂರೈಸುತ್ತದೆಯೇ ಅಥವಾ ಪ್ರತಿಕೂಲವಾಗಿ ಪ್ರಭಾವ ಬೀರುತ್ತದೆಯೇ ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸರ್ಕಾರ ಹೇಳಿದೆ.

ಈ ದಾಳಿ ನಡೆಸಿದವರನ್ನು ಗುರುತಿಸುವುದು ಮತ್ತು ಅಂತಾರಾಷ್ಟ್ರೀಯವಾಗಿ ಆರೋಪಿಗಳನ್ನು ಬಹಿರಂಗಪಡಿಸಲು ಒಂದು ದಾಖಲೆಯನ್ನು ಸಿದ್ಧಪಡಿಸುವುದು ಮೊದಲ ಆದ್ಯತೆಯಾಗಿರಬೇಕು ಎಂದು ಸಿಪಿಐಎಂ ಒತ್ತಾಯಿಸಿದೆ.

ಈ ಸಂದರ್ಭದಲ್ಲೇ ಕೇಂದ್ರ ಸರ್ಕಾರದ ವಿರುದ್ಧ ಸಿಪಿಐಎಂ ವಾಗ್ದಾಳಿ ನಡೆಸಿದೆ. “ಈ ದಾಳಿಗೆ ಕಾರಣವಾದ ಪ್ರಮುಖ ಭದ್ರತಾ ವೈಫಲ್ಯಕ್ಕೆ ಸರ್ಕಾರವೇ ಹೊಣೆ” ಎಂದು ದೂರಿದೆ. “ಆದರೆ ಕಾಶ್ಮೀರದ ಜನರು ಈ ದಾಳಿಯನ್ನು ಖಂಡಿಸಿ ಪ್ರತಿಭಟನೆ ನಡೆಸಿರುವುದು ಅತ್ಯಂತ ಮಹತ್ವದ ಘಟನೆ” ಎಂದು ಹೇಳಿದೆ.

ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿ | ಜಮ್ಮು ಕಾಶ್ಮೀರದ ಟಿಕೆಟ್ ಬುಕಿಂಗ್ ರದ್ದುಗೊಳಿಸಿ ಹಿಮಾಚಲದತ್ತ ಮುಖ ಮಾಡಿದ ಪ್ರವಾಸಿಗರು

ಭಯೋತ್ಪಾದಕ ದಾಳಿಯ ನಂತರ ಮತಾಂಧ ಶಕ್ತಿಗಳು ಮುಸ್ಲಿಮರು ಮತ್ತು ಕಾಶ್ಮೀರಿಗಳ ವಿರುದ್ಧ ದ್ವೇಷ ಅಭಿಯಾನವು ನಡೆಸುತ್ತಿದೆ. ಜನರನ್ನು ವಿಭಜಿಸುವ ಭಯೋತ್ಪಾದಕರ ಗುರಿಗೆ ಸಹಾಯ ಮಾಡುತ್ತಿದೆ ಎಂದೂ ದೂರಿದೆ.

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಇದರಲ್ಲಿ ಕರ್ನಾಟಕದವರೂ ಸೇರಿ ಬಹುತೇಕರು ಪ್ರವಾಸಿಗರು. ಈ ದಾಳಿ ಹೊಣೆಯನ್ನು ಲಷ್ಕರ್-ಎ-ತೊಯ್ಬಾದ ಪ್ರಾಕ್ಸಿ ಸಂಘಟನೆಯಾದ ರೆಸಿಸ್ಟೆನ್ಸ್ ಫ್ರಂಟ್ ಹೊಣೆ ಹೊತ್ತಿಕೊಳ್ಳುತ್ತಿದ್ದಂತೆ ಭಾರತ-ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಇನ್ನಷ್ಟು ಹೆಚ್ಚಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...