ಕೇಂದ್ರ ಸರ್ಕಾರ ಯಾವುದೇ ರಾಜ್ಯದ ಮೇಲೆ ಭಾಷಾ ಹೇರಿಕೆ ಮಾಡುತ್ತಿಲ್ಲ: ಧರ್ಮೇಂದ್ರ ಪ್ರಧಾನ್

Date:

ಕೇಂದ್ರ ಸರ್ಕಾರವು ಯಾವ ರಾಜ್ಯದ ಮೇಲೂ ಭಾಷಾ ಹೇರಿಕೆಯನ್ನು ಮಾಡುತ್ತಿಲ್ಲ. ಕೇಂದ್ರವು ರಾಜ್ಯಗಳ ಮೇಲೆ ತ್ರಿಭಾಷಾ ನೀತಿಯನ್ನು ಹೇರುತ್ತಿದೆ ಎಂದು ಹೇಳುವವರು ರಾಜಕೀಯ ಮಾಡುತ್ತಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಭಾನುವಾರ ಹೇಳಿದ್ದಾರೆ.

‘ಥಿಂಕ್ ಇಂಡಿಯಾ ದಕ್ಷಿಣಪಥ ಶೃಂಗಸಭೆ 2025’ ರಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಪ್ರಧಾನ್ ಐಐಟಿ ಮದ್ರಾಸ್‌ನ ನಿರ್ದೇಶಕ ಪ್ರೊಫೆಸರ್ ವಿ ಕಾಮಕೋಟಿ ಅವರ ಸಮ್ಮುಖದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ ಶಾಲೆಗಳಲ್ಲಿ ಹಿಂದಿ ಹೇರಿಕೆಗೆ ವಿರೋಧ: ಮತ್ತೆ ಒಂದಾದ ರಾಜ್, ಉದ್ಧವ್ ಠಾಕ್ರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಯಾರ ಮೇಲೂ ಯಾವುದೇ ಭಾಷೆಯನ್ನು ಹೇರುತ್ತಿಲ್ಲ. 1 ಮತ್ತು 2ನೇ ತರಗತಿಗಳಿಗೆ ಎರಡು ಭಾಷಾ ಸೂತ್ರ ಇರುತ್ತದೆ. ಒಂದು ಮಾತೃಭಾಷೆ ಇರುತ್ತದೆ. ಇಲ್ಲಿ ಅದು ತಮಿಳು ಭಾಷೆಯಾಗಿರುತ್ತದೆ. ಪ್ರಾಥಮಿಕ ಶಾಲೆಯಲ್ಲಿ ನೀವು ತಮಿಳಿನಲ್ಲಿ ಕಲಿಸಬೇಕು ಎಂಬುದು ಭಾರತ ಸರ್ಕಾರದ ಷರತ್ತು. ನಿಮ್ಮ ಆಯ್ಕೆಯ ಇನ್ನೊಂದು ಭಾಷೆಯನ್ನು ನೀವು ಕಲಿಸಬಹುದು” ಎಂದು ಹೇಳಿದರು.

“ಆರರಿಂದ ಹತ್ತನೇ ತರಗತಿಯವರೆಗೆ ತ್ರಿಭಾಷಾ ಸೂತ್ರವಿದೆ. ಒಂದು ಭಾಷೆ ಮಾತೃಭಾಷೆಯಾಗಿರುತ್ತದೆ. ಉಳಿದ ಎರಡು ನಿಮ್ಮ ಆಯ್ಕೆಯಾಗಿರುತ್ತದೆ. ಯಾವುದೇ ರಾಜ್ಯದ ಮೇಲೆ ಭಾರತ ಸರ್ಕಾರವು ಯಾವುದೇ ಭಾಷೆಯನ್ನು ಹೇರುವುದಿಲ್ಲ” ಎಂದು ತಿಳಿಸಿದರು.

ಇನ್ನು ಉತ್ತರ ಪ್ರದೇಶದಂತಹ ರಾಜ್ಯದಲ್ಲಿ ತ್ರಿಭಾಷಾ ನೀತಿಯನ್ನು ಹೇಗೆ ಜಾರಿಗೆ ತರಲಾಗುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಧಾನ್, “ನಾವು ಆ ರಾಜ್ಯದಲ್ಲೂ ಜಾರಿಗೆ ತರುತ್ತಿದ್ದೇವೆ. ಬಿಜೆಪಿ ಆಡಳಿತದ ರಾಜ್ಯಗಳನ್ನು ಮರೆತು ಅನೇಕ ರಾಜ್ಯ ಸರ್ಕಾರಗಳು ರಾಷ್ಟ್ರೀಯ ಶಿಕ್ಷಣ ನೀತಿಗೆ ಮುಂಚಿತವಾಗಿ ತ್ರಿಭಾಷಾ ನೀತಿಯನ್ನು ಜಾರಿಗೆ ತರುತ್ತಿವೆ” ಎಂದು ಹೇಳಿದರು.

“ಉತ್ತರ ಪ್ರದೇಶದಲ್ಲಿ, ಒಬ್ಬ ವಿದ್ಯಾರ್ಥಿ ಹಿಂದಿಯನ್ನು ಮಾತೃಭಾಷೆಯಾಗಿ ಕಲಿಯುತ್ತಾನೆ. ನಂತರ ಮರಾಠಿ ಮತ್ತು ತಮಿಳು ಕಲಿಯುವ ಆಯ್ಕೆ ಮಾಡಬಹುದು. ಯುಪಿಯಲ್ಲಿ ಕೆಲವು ವಿದ್ಯಾರ್ಥಿಗಳು ತಮಿಳನ್ನು ಮೂರನೇ ಭಾಷೆಯಾಗಿ ತೆಗೆದುಕೊಳ್ಳಬಹುದು. ಯುಪಿ ಸರ್ಕಾರ ತಮಿಳು ಕಲಿಸಲು ಸೌಲಭ್ಯವನ್ನು ಒದಗಿಸಬೇಕು” ಎಂದರು.

ಕೇಂದ್ರ ಸರ್ಕಾರವು ತ್ರಿಭಾಷಾ ನೀತಿಯಡಿಯಲ್ಲಿ ಹಿಂದಿ ಭಾಷೆಯನ್ನು ಹೇರಿಕೆ ಮಾಡುತ್ತಿದೆ ಎಂದು ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳು ಆರೋಪಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...