ವಂಚನೆ ಪ್ರಕರಣ | 7ನೇ ಆರೋಪಿ ಶ್ರೀಕಾಂತ್ ಹೆಸರಲ್ಲಿ ಮನೆ ಕಟ್ಟಿಸುತ್ತಿದ್ದ ಚೈತ್ರಾ ಕುಂದಾಪುರ

Date:

  • ವಂಚನೆ ಪ್ರಕರಣದಲ್ಲಿ ಈವರೆಗೆ ಏಳು ಮಂದಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು
  • ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ ರೂ. ವಂಚನೆ ಮಾಡಿದ ಪ್ರಕರಣ

ರಾಜ್ಯಾದ್ಯಂತ ಚರ್ಚೆಗೀಡಾಗಿರುವ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಸಿಸಿಬಿ ಪೊಲೀಸ್ ವಶದಲ್ಲಿರುವ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಉಡುಪಿಯಲ್ಲಿ ಹೊಸ ಮನೆಯೊಂದು ಕಟ್ಟಿಸುತ್ತಿದ್ದರು ಎಂದು ತಿಳಿದುಬಂದಿದೆ.

ಚೈತ್ರಾ ಗೆಳೆಯನ ಹೆಸರಲ್ಲಿ ಮನೆ ಕಟ್ಟಿಸುತ್ತಿರುವುದು ಪತ್ತೆಯಾಗಿದ್ದು, ಜಾಗ ಖರೀದಿಸಿ, ಎರಡು ಅಂತಸ್ತಿನ ಮನೆ ಕಟ್ಟಲಾಗುತ್ತಿತ್ತು ಎಂಬ ಮಾಹಿತಿ ಹೊರ ಬಿದ್ದಿದೆ.

ಉಡುಪಿ ಜಿಲ್ಲೆಯ ಕಾರ್ಕಳದ ಕಣಜಾರು ಪ್ರದೇಶದಲ್ಲಿ ಜಾಗ ಖರೀದಿ ಮಾಡಿದ್ದು, ವಂಚನೆ ಪ್ರಕರಣದಲ್ಲಿ ಏಳನೇ ಆರೋಪಿಯಾಗಿರುವ ಶ್ರೀಕಾಂತ್‌ ಹೆಸರಿನಲ್ಲಿ ಮನೆ ಕಟ್ಟಿಸುತ್ತಿದ್ದರು ಎಂದು ತಿಳಿದು ಬಂದಿದೆ. ಆದರೆ ಶ್ರೀಕಾಂತ್‌ನ್ನು ವಶಕ್ಕೆ ಪಡೆದ ಬಳಿಕ ಮನೆಯ ಕಾಮಗಾರಿ ಅರ್ಧದಲ್ಲೇ ನಿಂತಿದೆ ಎನ್ನಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಮನೆ 2

20 ಸೆಂಟ್ಸ್‌ ಜಾಗದಲ್ಲಿ ಮನೆಯನ್ನು ಚೈತ್ರಾ ನೇತೃತ್ವದಲ್ಲಿ ಕಟ್ಟಿಸುತ್ತಿದ್ದು, ಮನೆ ಕಾಮಗಾರಿಯ ಸಂದರ್ಭದಲ್ಲಿ ಚೈತ್ರಾ ಕುಂದಾಪುರ ಆಗಾಗ್ಗೆ ಆ ಪ್ರದೇಶಕ್ಕೆ ಬರುತ್ತಿದ್ದರು ಎಂದು ಸ್ಥಳೀಯರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಹೀಗಾಗಿ, ಮನೆಯ ಸಂಪೂರ್ಣ ವಿವರಗಳನ್ನು ಕಲೆ ಹಾಕುತ್ತಿರುವ ಸಿಸಿಬಿ ಪೊಲೀಸರ ತಂಡವೊಂದು ಆರೋಪಿ ಶ್ರೀಕಾಂತ್‌ನನ್ನು ಉಡುಪಿಗೆ ಕರೆದೊಯ್ದಿದ್ದಾರೆ. ಅಲ್ಲದೇ, ಮನೆಯನ್ನು ಜಪ್ತಿ ಮಾಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಚೈತ್ರಾ ಕುಂದಾಪುರ ಬೇನಾಮಿಯಾಗಿಯೂ ಕೆಲವು ಆಸ್ತಿ ವಿವರ ಹಾಗೂ ಲಕ್ಷಾಂತರ ರೂ.ಹಣವನ್ನು ಕೂಡ ಬ್ಯಾಂಕ್ ಲಾಕರಲ್ಲಿ ಇಟ್ಟಿರುವುದಾಗಿಯೂ ವರದಿಯಾಗಿದೆ.

ಗೋವಿಂದ ಬಾಬು ಪೂಜಾರಿ ಅವರಿಗೆ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ನೀಡುವುದಾಗಿ ಭರವಸೆ ನೀಡಿ, ವಂಚಿಸಿದ ಆರೋಪದ ಮೇಲೆ ಪೊಲೀಸರು ಚೈತ್ರಾ ಅವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ಈವರೆಗೆ ಒಟ್ಟು ಏಳು ಮಂದಿಯನ್ನು ಈವರೆಗೆ ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದು, ಪ್ರಕರಣದ ಮೂರನೇ ಆರೋಪಿಯಾಗಿರುವ ಅಭಿನವ ಹಾಲಶ್ರೀ ತಲೆಮರೆಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...