ಯಡಿಯೂರಪ್ಪ ಸೂಚನೆ, ಸಚಿವ ಪ್ರಿಯಾಂಕ್ ಖರ್ಗೆ ಕುರಿತ ಹೇಳಿಕೆಗೆ ಛಲವಾದಿ ನಾರಾಯಣಸ್ವಾಮಿ ವಿಷಾದ

Date:

“ಆನೆ ನಡೆಯುವಾಗ ನಾಯಿ ಬೊಗುಳುತ್ತದೆ. ಹಾಗೆಯೇ ಪ್ರಧಾನಿ ದೇಶದ ಪರವಾಗಿ ಇರುವಾಗ ಪ್ರಿಯಾಂಕ್ ಖರ್ಗೆ ನಾಯಿತರ ಬೋಗಳುತ್ತಾರೆ” ಎಂದು ನಾಲಿಗೆ ಹರಿಬಿಟ್ಟಿದ್ದ ಬಿಜೆಪಿಯ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಈಗ ವಿಷಾದ ವ್ಯಕ್ತಪಡಿಸಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ಚಿತ್ತಾಪುರ ಕ್ಷೇತ್ರದಲ್ಲಿ ನಡೆಯುವ ಬಿಜೆಪಿ ಕಾರ್ಯಕ್ರಮಕ್ಕೆ ಭಾಗವಹಿಸಲು ಛಲವಾದಿ ನಾರಯಣಸ್ವಾಮಿ ಬಂದಿದ್ದರು. ಅದಕ್ಕೂ ಮೊದಲು ಬೆಳಿಗ್ಗೆ ಕಲಬುರಗಿ ನಗರದಲ್ಲಿ ಸುದ್ದಿಗೋಷ್ಠಿ ಮಾತನಾಡುತ್ತ ಪ್ರಿಯಾಂಕ್ ಖರ್ಗೆಯನ್ನು ನಾಯಿಗೆ ಹೋಲಿಸಿ ಮಾತನಾಡಿದ್ದರು.

ಛಲವಾದಿ ಅವರ ಈ ಹೇಳಿಕೆ ಕಲಬುರಗಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೂ ಕಾರಣವಾಯಿತು. ರಾಜಕೀಯವಾಗಿ ನಮ್ಮ‌ನಾಯಕರನ್ನು ನೀವು ಏನೇ ಟೀಕೆ ಮಾಡಿದರೂ ಸಹಿಸಿಕೊಳ್ಳುತ್ತೇವೆ. ಆದರೆ, ವೈಯಕ್ತಿಕವಾಗಿ ನಾರಯಣಸ್ವಾಮಿ ಬೈಯ್ದಿದ್ದಾರೆ. ಅದಕ್ಕಾಗಿ ಅವರು ಕ್ಷಮೆ ಕೇಳಲೇಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು. ನಾರಯಣಸ್ವಾಮಿ ಚಿತ್ತಾಪುರದ ಪ್ರವಾಸಿ ಮಂದಿರಕ್ಕೆ ಆಗಮಿಸುತ್ತಿದ್ದಂತೆಯೇ ಗೇಟ್ ಮುಂದೆ ನೂರಾರು ಕಾರ್ಯಕರ್ತರು ಪ್ರತಿಭಟನೆ‌ ನಡೆಸಿದರು. ಛಲುವಾದಿ ನಾರಯಣಸ್ವಾಮಿ ಕ್ಷಮೆ ಕೇಳಲೆಬೇಕು, ಅಲ್ಲಿಯವರೆಗೂ ಪ್ರತಿಭಟನೆ‌ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದರು. ಈ ವೇಳೆ ಛಲವಾದಿ ನಾರಾಯಣಸ್ವಾಮಿ ಅವರ ಕಾರಿನ ಮೇಲೆ ಬಣ್ಣ ಎರಚಿ, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ: ಹೇಡಿಯ ಕೊನೆಯ ಅಸ್ತ್ರವೇ ಅಪಪ್ರಚಾರ, ವೈಯಕ್ತಿಕ ನಿಂದನೆ: ಛಲವಾದಿ ನಾರಾಯಣಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ತಿರುಗೇಟು

ಅಷ್ಟರಲ್ಲಿ ಈ ವಿಷಯ ರಾಜ್ಯ ಬಿಜೆಪಿ‌ ಹಿರಿಯ ನಾಯಕರ ಗಮನಕ್ಕೂ ಬಂದಿತ್ತು. ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರು ನಾರಯಣಸ್ವಾಮಿಗೆ ಪೋನ್ ಮಾಡಿ, ಹೇಳಿಕೆಯಲ್ಲಿ ಪ್ರಿಯಾಂಕ್ ಖರ್ಗೆ ಹೆಸರು ಆ ರೀತಿ ಉಲ್ಲೇಖಿಸಬಾರದಿತ್ತು ಎಂದಿದ್ದಾರೆ.

ನಂತರ ವಿಷಾದ ವ್ಯಕ್ತಪಡಿಸಿದ ಛಲವಾದಿ ನಾರಾಯಣಸ್ವಾಮಿ, “ಪ್ರಿಯಾಂಕ್ ಖರ್ಗೆಯವರ ಹೆಸರನ್ನು ತೆಗೆದುಕೊಂಡು ಹೇಳಬಾರದಿತ್ತು. ನಮ್ಮ ನಾಯಕರಾದ ಯಡಿಯೂರಪ್ಪನವರು ಸೂಚಿಸಿದಂತೆ ಆ ಹೆಸರನ್ನು ವಾಪಸ್ ತೆಗೆದುಕೊಳ್ಳುತ್ತೇನೆ. ಇದರಿಂದ ಅವರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ” ಎಂದು ತಿಳಿಸಿದರು.

“ನನ್ನ ಹೇಳಿಕೆಯಲ್ಲಿ ತಪ್ಪಿದ್ದರೆ ಹೋರಾಟ ಮಾಡಲಿ. ಆದರೆ, ಈ ರೀತಿ ಬೆಂಬಲಿಗರ ಮುಂದೆ ಇಟ್ಟುಕೊಂಡು ಪ್ರತಿಭಟನೆ ನಡೆಸುವುದು ಅತಿಯಾಯ್ತು. ಇದೇನು ಪ್ರಜಾಪ್ರಭುತ್ವನಾ?” ಎಂದು ಇದೇ ವೇಳೆ ಆಕ್ರೋಶ ವ್ಯಕ್ತಪಡಿಸಿದರು.

“ಪ್ರಿಯಾಂಕ್ ಖರ್ಗೆ ಯಾವತ್ತೂ ನನ್ನ ವಿರುದ್ಧ ಮಾತನಾಡಿಲ್ವ? ಪ್ರಧಾನಿ ವಿರುದ್ಧ ಬಾಯಿಗೆ ಬಂದಂತೆ ಮಾತನಾಡಿಲ್ಲವಾ? ಇವರು ಪ್ರಧಾನಿ ವಿರುದ್ಧ ಮಾತನಾಡುತ್ತಾರೆ. ತಮ್ಮ ವಿರುದ್ಧದ ಟೀಕೆ ಸಹಿಸಿಕೊಳ್ಳೋಕೆ ಆಗಲ್ಲ. ಇವರು ತಮ್ಮನ್ನು ಏನು ಅಂದುಕೊಂಡಿದ್ದಾರೆ? ರಾಜಕೀಯದಲ್ಲಿ ಇದೆಲ್ಲ ಸಹಜ, ಇದಕ್ಕೆ ಪ್ರತಿಭಟನೆ ಮಾಡೋದು ಸರಿಯಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...