ಚಲುವರಾಯಸ್ವಾಮಿ ನೂರಕ್ಕೆ ನೂರರಷ್ಟು ಜೋಕರ್: ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ವ್ಯಂಗ್ಯ

Date:

“ಚಲುವರಾಯಸ್ವಾಮಿ ಜೋಕರ್. ಈ ಜೋಕರ್ ಸಂಸ್ಕೃತಿ ಶುರುವಾಗಿದ್ದೇ ಕಾಂಗ್ರೆಸ್ ಪಕ್ಷದಿಂದ ಎನ್ನುವುದನ್ನು‌ ಆ ವ್ಯಕ್ತಿ ಮರೆಯಬಾರದು. ಅವರು ಎಲ್ಲಿದ್ದರು? ಆಮೇಲೆ ಎಲ್ಲೆಲ್ಲಿ ಹೋದರು? ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ” ಎಂದು ವ್ಯಂಗ್ಯವಾಡಿದ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿಯವರು ಚಲುವರಾಯಸ್ವಾಮಿ ನೂರಕ್ಕೆ ನೂರರಷ್ಟು ಜೋಕರ್ ಎಂದಿದ್ದಾರೆ.

“ಆತ ನನ್ನನ್ನು ಸಿಎಂ ಮಾಡಿದ ಎನ್ನುವುದು ಬಹುದೊಡ್ಡ ಜೋಕ್. ಶಾಸಕರು ನನ್ನನ್ನು ಮುಖ್ಯಮಂತ್ರಿ ಮಾಡಿದ್ದು ಎಂಬುದನ್ನು ಆ ವ್ಯಕ್ತಿ ಮರೆಯಬಾರದು’ ಎಂದು ಸಚಿವ ಚಲುವರಾಯಸ್ವಾಮಿ ಅವರನ್ನು ಟೀಕಿಸಿದ್ದರು. 

ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣಕ್ಕೆ ಆಹ್ವಾನ ನೀಡಿರುವ ಕೃಷಿ ಸಚಿವರ ಸವಾಲಿಗೆ ಪ್ರತಿಕ್ರಿಯಿಸಿ, “ನಾನು ಆಣೆ ಮಾಡಲು ತಯಾರಿದ್ದೇನೆ. ನಾನು ಸಿಎಂ ಆಗುವಾಗ ಎಂಎಲ್‌ಎಗಳು ಆ ವ್ಯಕ್ತಿಯನ್ನು ನೋಡಿ ಬಂದ್ರಾ? ಆ ವ್ಯಕ್ತಿಯನ್ನು ಮಂತ್ರಿ ಮಾಡಲು ನಾನು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ಬೆಳಗಿನ ಜಾವ ಮೂರು ಗಂಟೆವರೆಗೆ ನಿದ್ರೆ ಮಾಡಲು ಬಿಡುತ್ತಿರಲಿಲ್ಲ ಆ ಆಸಾಮಿ” ಎಂದು ಕೊಂಕು ಮಾತನಾಡಿದ್ದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಎಐಸಿಸಿ ಅಧಿವೇಶನಕ್ಕೆ ಗೈರಾಗಲಿರುವ ಪ್ರಿಯಾಂಕಾ ಗಾಂಧಿ

“ಆ ವ್ಯಕ್ತಿಗೆ ಇರುವ ಚಟ ನನಗೆ ಇಲ್ಲ. ಮಂಡ್ಯದಲ್ಲಿ ಆತನ ಚಟಗಳ ಬಗ್ಗೆ ಕೇಳಿದರೆ ಜನ ಹಾದಿ ಬೀದಿಯಲ್ಲಿ ಹೇಳುತ್ತಾರೆ. ಈ ಮನುಷ್ಯ ಎಷ್ಟು ಮನೆ ಹಾಳುಮಾಡಿದ್ದಾರೆ ಎಂಬುದು ನನಗೆ ಗೊತ್ತು” ಎಂದು ಹರಿಹಾಯ್ದಿದ್ದರು.  

ಮೈತ್ರಿ ಭದ್ರವಾಗಿದೆ, ಸಮಸ್ಯೆ ಇಲ್ಲ: ಎಚ್‌ಡಿಕೆ

‘ಜೆಡಿಎಸ್‌-ಬಿಜೆಪಿ ಮೈತ್ರಿ ಭದ್ರವಾಗಿದೆ. ಯಾರಿಗೂ ಸಂಶಯ ಬೇಡ. ಜೆಡಿಎಸ್‌-ಬಿಜೆಪಿ‌ ಮೈತ್ರಿ ಸಮನ್ವಯ ಸಮಿತಿ ರಚನೆ ಆಗಬೇಕೆಂದು ಡಿ ವಿ ಸದಾನಂದಗೌಡರೇ ಹೇಳಿದ್ದಾರೆ. ಹಲವಾರು ಹಿರಿಯ ನಾಯಕರೂ ಸಮನ್ವಯ ಸಮಿತಿ ಆಗಬೇಕೆಂದು ಸಲಹೆ ಮಾಡಿದ್ದಾರೆ. ಮೈತ್ರಿಗೆ ಯಾವುದೇ ರೀತಿಯ ಧಕ್ಕೆ ಇಲ್ಲ” ಎಂದು ಕುಮಾರಸ್ವಾಮಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...